ಡಾ// ಜಿ ಪರಮೇಶ್ವರ ನಾವು ಬೌದ್ಧ ಧರ್ಮ ಪಾಲನೆ ಮಾಡುತ್ತೇವೆ ! ಅಚ್ಚರಿ ಹೇಳಿಕೆ.!

ಕೊಡಗು.14.ಫೆ.25:- ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಪತ್ನಿ ಯೊಂದಿಗೆ ದಲೈಲಾಮ ಅವರನ್ನು ಭೇಟಿ ಮಾಡಿ, ಅವರ ಆಶೀರ್ವಾದ ಪಡೆದಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ್ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿ, ಇತ್ತೀಚೆಗೆ ಭೇಟಿಯಾದ ಬಗ್ಗೆ ಸ್ಪಷ್ಟನೆ ನೀಡಿದರು.

ನಾವು ಬೌದ್ಧ ಧರ್ಮ ಪಾಲನೆ ಮಾಡುತ್ತೇವೆ. ದಲೈಲಾಮ ಆಶೀರ್ವಾದ ಪಡೆದುಕೊಳ್ಳಲು ಬಂದಿದ್ದೇವೆ. ಶಾಂತಿ ನೆಮ್ಮದಿ ಪಡೆದುಕೊಳ್ಳಲು ಬಂದಿದ್ದೇವೆ ಎಂದು ತಿಳಿಸಿದರು.

ದಲೈಲಾಮ ಬಂದಾಗ ಹಲವು ಬಾರಿ ಭೇಟಿ ಮಾಡಿದ್ದೇನೆ. ದಲೈಲಾಮ ಆರೋಗ್ಯವಾಗಿದ್ದಾರೆ. ಏಳು ವರ್ಷಗಳ ಬಳಿಕ ಇಲ್ಲಿಗೆ ಬಂದಿದ್ದಾರೆ. ಅವರಿಗೆ 90 ವರ್ಷ ಆಗಿದೆ, ಆರೋಗ್ಯವಾಗಿದ್ದಾರೆ. ಅವರ ಮೇಲೆ ಅಪಾರ ಗೌರವ ಇದೆ ಎಂದರು.

ಕೇಂದ್ರ ಸಚಿವರು ಬಂದ ಬಗ್ಗೆ ಮಾಹಿತಿ ಇಲ್ಲ ಭೇಟಿ ಆಗಿಲ್ಲ. ದಲೈಲಾಮ ಅವರಿಗೆ ಜೀವ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಎಲ್ಲಾ ಭದ್ರತೆಯನ್ನು ನೀಡಲಾಗಿದೆ. ಎಂದು ತಿಳಿಸಿದರು.

“ಅವರು ಯಾವಾಗಲೂ ಕರ್ನಾಟಕಕ್ಕೆ ಬಂದಾಗೆಲ್ಲ ನಾನು ಭೇಟಿ ಮಾಡುತ್ತೇನೆ. ಅವರ ಆಶೀರ್ವಾದವನ್ನು ಪಡೆದುಕೊಳ್ಳುತ್ತೇನೆ. ಅವರು ಬೌದ್ಧ ತತ್ವಗಳಲ್ಲಿ ನಂಬಿಕೆ ಇಟ್ಟವರು. ಅದೇ ರೀತಿ ನಮಗೆಲ್ಲರಿಗೂ ಕೂಡ ಆ ವಿಶ್ವಾಸ ನಂಬಿಕೆ ಇದೆ. ಅವರು ಇಡೀ ವಿಶ್ವಕ್ಕೆ ಶಾಂತಿ ಸಂದೇಶವನ್ನು ನೀಡುತ್ತಾರೆ. ಅದರಲ್ಲಿ ನಮಗೂ ನಂಬಿಕೆ ಇದೆ. ಹಾಗಾಗಿ ನಾನು ಅವರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದುಕೊಂಡೆ. ಅದು ಬಿಟ್ಟರೆ ಬೇರೆ ಏನೂ ಇಲ್ಲ, ಯಾವುದೇ ಚರ್ಚೆಗಳು ನಡೆದಿಲ್ಲ. ಅವರ ಆಶೀರ್ವಾದ ಪಡೆದಿದ್ದೇನೆ ಅಷ್ಟೇ”, ಎಂದು ಸ್ಪಷ್ಟಪಡಿಸಿದರು.

prajaprabhat

Recent Posts

ರಾಜ್ಯದಲ್ಲಿ ಖಾಲಿ ಪ್ರಾಧ್ಯಾಪಕರ ಹುದ್ದೆಗಳು  ಶೀಘ್ರ ಭರ್ತಿ ಮಾಡಲಾಗುವುದು.

ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್‌ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…

5 hours ago

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*

ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ‌ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…

8 hours ago

ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*

ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…

8 hours ago

ಹ.ರಾ.ಮಹೇಶ್ ಅವರ ಅಭಿನಂದನಾ ಗ್ರಂಥಕ್ಕೆ ಹಾರೈಕೆ ನುಡಿಗಳ ಲೇಖನಗಳ ಆಹ್ವಾನ

   ಬಂಧುಗಳೇ,                  ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…

8 hours ago

ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…

15 hours ago

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ: ಪ್ರಗತಿ ಪರಿಶೀಲನಾ ಸಭೆ

ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…

15 hours ago