ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಅಧಿಕಾರಿಗಳು ರೈತರ ಹಾಗೂ ಗ್ರಾಹಕರ ಸಮಸ್ಯೆಗಳಿಗೆತಕ್ಷಣ ಸ್ಪಂದಿಸಲಿ-ಇಂಧನ ಸಚಿವ ಕೆ.ಜೆ.ಜಾರ್ಜ್


ಬೀದರ.23.ಜನವರಿ.25:- ಇಂದು ಬೀದರ ಜೆಲ್ಲಾ ಅಧಿಕಾರಿಗಳ ಕಚೇರಿಯಲ್ಲಿ.ರೈತರ ಟ್ರಾನ್ಸಫಾರ್ಮರ್ ರಿಪೇರಿ, ಸಾಗಾಟ, ವಿದ್ಯುತ್ ತಂತಿ/ಕಂಬ ದುರಸ್ತಿ ಸಂಪರ್ಕ ಸೇರಿದಂತೆ ವಿವಿಧ ವಿದ್ಯುತ್ ಸಮಸ್ಯೆಗಳಿಗೆ ಅಧಿಕಾರಿಗಳು ತತಕ್ಷಣ ಸ್ಪಂಧಿಸಿ ಸಮಸ್ಯೆ ಪರಿಹರಿಸಬೇಕೆಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಜೇಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.


ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಜರುಗಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಳೆದ ವರ್ಷ ಬರಗಾಲವಿದ್ದರೂ ಬೇಸಿಗೆಯಲ್ಲಿ ಸಹ ಯಾವುದೇ ರೀತಿಯ ತೊಂದರೆಯಾಗದಂತೆ ಸಮರ್ಪಕವಾಗಿ ವಿದ್ಯುತ್ ಪೂರೈಸಲಾಗಿದ್ದು, ಈ ಬಾರಿ ಸಹ ಗ್ರಾಹಕರಿಗೆ ವಿದ್ಯುತ್ ಪೂರೈಸಲು ಇಲಾಖೆಯು ಸನ್ನದ್ಧವಾಗಿದೆ. ವಿದ್ಯುತ್ ಸಂಬಂಧಿಸಿದಂತೆ ಕೆಲ ತಾಂತ್ರಿಕ ದೋಷಗಳು ಆದಾಗ ಕಂಡುಬರುತ್ತಿರುವುದರಿಂದ ಕೆಲವೊಮ್ಮೆ ಸಮಸ್ಯೆಗಳ ನಿವಾರಣೆಗೆ ಸಮಯಬೇಕಾಗುತ್ತದೆ.

ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳನ್ನು ಭೇಟಿಯಾಗಿ ಸಮಸ್ಯೆಗಳನ್ನು ಚರ್ಚಿಸಿ ಪರಿಹರಿಸಬೇಕೆಂದು ತಿಳಿಸಿದರು.
ರಾಜ್ಯದಲ್ಲಿ ಸಧ್ಯ ದಿನಕ್ಕೆ 16 ರಿಂದ 17 ಸಾವಿರ ಮೆಗಾವ್ಯಾಟ್ ವಿದ್ಯುತ್ ಬೇಡಿಕೆಯಿದೆ. ಈ ವರ್ಷ ಯಾವುದೇ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ. ಬೇಸಿಗೆಯಲ್ಲಿ ಬೇಡಿಕೆ ಹೆಚ್ಚಾದರೆ ವಿದ್ಯುತ್ ಖರೀದಿಗೂ ಸಹ ಸಿದ್ಧವಾಗಿದ್ದೇವೆಂದರು. ಲೈನ್‍ಮೆನ್‍ಗಳ ಕೊರತೆ ನಿಗಿಸಲು ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್‍ಮೆನಗಳನ್ನು ನೇಮಕ ಮಾಡಲಾಗುವುದು ಎಂದರು.


ಅಕ್ರಮ-ಸಕ್ರಮ ಸಮಸ್ಯೆಯನ್ನು ಸಹ ಶೀಘ್ರವೇ ಪರಿಹರಿಸಲಾಗುವುದೆಂದ ಅವರು ಬೀದರ ಜಿಲ್ಲೆಯಲ್ಲಿ ಒಟ್ಟು 1480 ಪ್ರಕರಣಗಳಿದ್ದು ಕ್ಯಾಬಿನೆಟ್‍ನಲ್ಲಿ ರಾಜ್ಯದ ಈ ಸಮಸ್ಯೆ ಚರ್ಚಿಸಲಾಗುವುದೆಂದು ಸಚಿವರು ತಿಳಿಸಿದರು.


ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾತನಾಡಿ, ಜಿಲ್ಲೆಯಲ್ಲಿ ವಿದ್ಯುತ್ ಅವಘಡದಲ್ಲಿ ಮರಣ ಹೊಂದಿದ 9 ಜನರ ಕುಟುಂಬಕ್ಕೆ ಈವರೆಗೂ ಪರಿಹಾರ ನೀಡಿದ ಕುರಿತು ಸಚಿವರಾದ ಕೆ.ಜೆ.ಜಾರ್ಜ್ ಸಮ್ಮುಖದಲ್ಲಿಯೇ ಅಧಿಕಾರಿಗಳನ್ನು ಕೇಳಿದರು. 3 ದಿನದೊಳಗಾಗಿ ಪರಿಹಾರ ತಲುಪಿಸುವಂತೆ ಕೆ.ಜೆ.ಜಾರ್ಜ್ ಅವರು ಅಧಿಕಾರಿಗಳಿಗೆ ಸೂಚಿಸಿದರು.


ಜಿಲ್ಲೆಯಲ್ಲಿ 13 ಉಪ ಕೇಂದ್ರಗಳ ಸ್ಥಾಪನೆಗೆ ಜಾಗದ ಸಮಸ್ಯೆಗಳಿದ್ದಲ್ಲಿ ಸ್ಥಳೀಯ ಶಾಸಕರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಅಧಿಕಾರಿಗಳು ತಕ್ಷಣ ಕಾರ್ಯ ಪ್ರವೃತ್ತರಾಗುವಂತೆ ಈಶ್ವರ ಬಿ.ಖಂಡ್ರೆ ಸೂಚಿಸಿದರು.
ಅಪಾಯಕಾರಿ ವಿದ್ಯುತ್ ತಂತಿ ಹಾಗೂ ಕಂಬಗಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಹಲವಾರು ತಿಂಗಳ ಹಿಂದೆ ಹೇಳಲಾಗಿದೆ. ಅಧಿಕಾರಿಗಳು ನಿರ್ಲಕ್ಷ ತೋರದೆ ಒಟ್ಟು ಅಪಾಯಕಾರಿ ಸ್ಥಿತಿಗತಿ ವರದಿ ನೀಡುವಂತೆ ಹಾಗೂ ತುರ್ತು ಅಗತ್ಯವಿದ್ದಲ್ಲಿ ತಕ್ಷಣವೇ ಕಂಬ/ತಂತಿ ಸರಿಪಡಿಸುವಂತೆ ಸೂಚಿಸಿದರು.


ಗಡಿ ಭಾಗದಲ್ಲಿ ಹಾಗೂ ಇತರೆಡೆ ಅನಧಿಕೃತ ಬಡಾವಣೆಗಳು ನಿರ್ಮಾಣಗೊಂಡಿವೆ. ಅವರಿಗೂ ಸಹ ವಿದ್ಯುತ್ ಸಂಪರ್ಕ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.


ಸಂಸದರಾದ ಸಾಗರ ಈಶ್ವರ ಖಂಡ್ರೆ ಅವರು ಮಾತನಾಡಿ, ಭಾಲ್ಕಿ ಸುತ್ತಲಿನ ಕೆಲ ಗ್ರಾಮಸ್ಥರು ಅಹವಾಲು ಟಿಸಿ ಬದಲಾವಣೆಗೆ ಹಾಗೂ ವಾಹನ ಸಾಗಾಟಕ್ಕೆ ಅಧಿಕಾರಿಗಳು ತೀರ ವಿಳಂಭ ಅನುಸರಿಸುತ್ತಿದ್ದು ಗ್ರಾಮಸ್ಥರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಸ್ಪಂದಿಸಲಿ ಎಂದರು.


ಈ ಸಂದರ್ಭದಲ್ಲಿ ಬಸವಕಲ್ಯಾಣ ಶಾಸಕರಾದ ಶರಣು ಸಲಗರ, ಹುಮನಾಬಾದ ಶಾಸಕರಾದ ಡಾ.ಸಿದ್ದಲಿಂಗಪ್ಪ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ ಪಾಟೀಲ್, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಪಂಕಜಕುಮಾರ ಪಾಂಡೆ, ಜೇಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ರವೀಂದ್ರ ಕರಿಂಗಣ್ಣನವರ, ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆ, ಕೆಪಿಟಿಸಿಎಲ್ ಮುಖ್ಯ ಅಭಿಯಂತರಾದ ಪ್ರಕಾಶ ಬಿ., ಜೇಸ್ಕಾಂ ಮುಖ್ಯ ಅಭಿಯಂತತರಾದ ವೆಂಕಟೇಶ ಅಳ್ಳೆ, ಜೇಸ್ಕಾಂ ಅಧೀಕ್ಷಕ ಅಭಿಯಂತರರಾದ ವೀರಭದ್ರ, ಕೆಪಿಟಿಸಿಎಲ್ ಚಂದ್ರಕಾಂತ ಪಾಟೀಲ ಸೇರಿದಂತೆ ಇಲಾಖೆಯ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

4 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

4 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

4 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

4 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

4 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

7 hours ago