ಇದಿನಿಂದ ಮೂರುದಿನಗಳ ಕಾಲ ಜಾನುವಾರು,ಕುಕ್ಕುಟ ಮತ್ತು ಮತ್ಸö್ಯಮೇಳ-2025 ಕಾರ್ಯಕ್ರಮ


ಬೀದರ 16.ಜನವರಿ.25:- ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನ 20ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಜಾನುವಾರು, ಕುಕ್ಕುಟ ಮತ್ತು ಮತ್ಸö್ಯಮೇಳ-2025 “ಗ್ರಾಮೀಣ ಸಮೃದ್ಧಿ ಮತ್ತು ಜೀವನೋಪಾಯದ ಭದ್ರತೆಗಾಗಿ ಪಶುಪಾಲನೆ ಮತ್ತು ಮೀನುಗಾರಿಕೆ” ವನ್ನು ಜನವರಿ. 17, 18 ಮತ್ತು 19 ರಂದು ಪಶುವೈದ್ಯಕೀಯ ವಿಶ್ವವಿದ್ಯಾಲಯ, ನಂದಿನಗರ (ಕಮಠಾಣಾ ಹತ್ತಿರ) ಬೀದರದಲ್ಲಿ ಆಚರಿಸಲಾಗುತ್ತಿದೆ.


ಅರಣ್ಯ, ಜೀವಿಶಾಶ್ತç ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ದಿವ್ಯ ಸಾನಿಧ್ಯ ಬಸವಕಲ್ಯಾಣ ಅನುಭವ ಮಂಟಪ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ವಹಿಸಲಿದ್ದಾರೆ. ಸಾನಿಧ್ಯವನ್ನು ಸಂಸ್ಥಾನ ಹಿರೇಮಠ ಸುಕ್ಷೇತ್ರ ಹಾರಕೂಡ ಡಾ.ಚನ್ನವೀರ ಶಿವಾಚಾರ್ಯರು ಅವರು ವಹಿಸಲಿದ್ದಾರೆ.


ಪಶುಮೇಳ ಉದ್ಘಾಟನೆಯನ್ನು ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ ಅವರು ಮಾಡಲಿದ್ದಾರೆ. ಕೃಷಿ ಯಂತ್ರೋಪಕರಣಗಳ ಮಳಿಕೆಗಳ ಉದ್ಘಾಟನೆಯನ್ನು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಮಾಡಲಿದ್ದಾರೆ. ಕೃಷಿ ಪ್ರದರ್ಶನ ಉದ್ಘಾಟನೆಯನ್ನು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಮಾಡಲಿದ್ದಾರೆ. ಮತ್ಸö್ಯಮೇಳ ಉದ್ಘಾಟನೆಯನ್ನು ಮೀನುಗಾರಿಕೆ ಮತ್ತು ಬಂದರುಗಳು, ಒಳನಾಡು ಸಾರಿಗೆ ಇಲಾಖೆ ಸಚಿವರಾದ ಮಂಕಾಳ ವೈದ್ಯ ಮಾಡಲಿದ್ದಾರೆ. ಫಲಪುಷ್ಪ ಪ್ರದರ್ಶನ ಉದ್ಘಾಟನೆ ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಮಾಡಲಿದ್ದಾರೆ. ಅಭಿವೃದ್ಧಿ ಇಲಾಖೆಗಳ ಮಳಿಗೆಗಳ ಉದ್ಘಾಟನೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಚಿವರಾದ ಪ್ರೀಯಾಂಕ ಖರ್ಗೆ ಮಾಡಲಿದ್ದಾರೆ. ಪುಸ್ತಕ/ತಾಂತ್ರಿಕ ಕೈಪಿಡಿಗಳ ಬಿಡುಗಡೆ ರಾಜ್ಯಸಭಾ ಸದಸ್ಯರಾದ ಡಾ.ವೀರೇಂದ್ರ ಹೆಗ್ಗಡೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೀದರ ದಕ್ಷಿಣ ಶಾಸಕರಾದ ಶೈಲೇಂದ್ರ ಬೆಲ್ದಾಳೆ ವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯರಾದ ಸಾಗರ ಖಂಡ್ರೆ, ಕರ್ನಾಟಕ ಹಾಲು ಮಹಾಮಂಡಳ ಅಧ್ಯಕ್ಷರಾದ ಎಲ್.ಬಿ.ಭೀಮಾನಾಯಕ, ಔರಾದ ಶಾಸಕರಾದ ಪ್ರಭು ಚವ್ಹಾಣ, ಹುಮನಾಬಾದ ಶಾಸಕ ಸಿದ್ಧಲಿಂಗಪ್ಪ ಎನ್.ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಭೀಮರಾವ ಪಾಟೀಲ್, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣ ರಾವ್, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷರಾದ ಡಾ.ಅಜಯ್ ಧರ್ಮಸಿಂಗ್, ಬಸವಕಲ್ಯಾಣ ಶಾಸಕ ಶರಣು ಸಲಗರ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಸವರಾಜ ಪಾಟೀಲ, ಮಾರುತಿರಾವ್ ಮೂಳೆ, ಯದ್ಲಾಪುರ ಗ್ರಾಮ ಪಂಚಾಯತ ಅಧ್ಯಕ್ಷರಾದ ಸಪ್ನಾ ಸಂಜುಕುಮಾರ ಪಾಟೀಲ ಭಾಗವಹಿಸಲಿದ್ದಾರೆ.


ಆದರಣೀಯ ಅತಿಥಿಗಳು: ಪಶು ಸಂಗೋಪನೆ ಮತ್ತುಮೀನುಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್ ಎಂ.ಎನ್., ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ರಾಜಿವ ಮಣಿ, ಬೀದರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಬೀದರ ಪೊಲೀಸ್ ವರಿಷ್ಠಾಧಿಕಾರ ಪ್ರದೀಪ್ ಗುಂಟಿ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ.ಸುರೇಶ, ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ವಿಷ್ಣುವರ್ಧನ, ಹೈದ್ರಾಬಾದ ರಾಷ್ಟಿçÃಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿಜಯ ಕುಮಾರ್ ಬೆಹರಾ, ಬೆಂಗಳೂರು ನಬಾರ್ಡನ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಕೆ.ವಿ.ಎಸ್.ಎಸ್.ಎಲ್.ವಿ. ಪ್ರಸಾದರಾವ್, ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತರಾದ ಶ್ರೀರೂಪಾ, ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಪಿ.ಎಲ್.ಪಾಟೀಲ, ರಾಯಚೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಹನುಮAತಪ್ಪ, ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ, ಬೆಂಗಳೂರು ಐ.ಸಿ.ಎ.ಆರ್. (ಅಟಾರಿ) ನಿರ್ದೇಶಕ ಡಾ.ವಿ.ವೆಂಕಟಸುಬ್ರಮಣ್ಯA, ಬೆಂಗಳೂರು ಕರ್ನಾಟಕ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ಶಿವಸ್ವಾಮಿ ಅವರುಗಳು ಭಾಗವಹಿಸಲಿದ್ದಾರೆ.


ಗೌರವಾನ್ವಿತ ವ್ಯವಸ್ಥಾಪಕ ಮಂಡಳಿ ಸದಸ್ಯರುಗಳು ಗೌರವ ಉಪಸ್ಥಿತಿ: ಬೀದರ ಕಪಪಮೀವಿವಿ ವ್ಯವಸ್ಥಾಪಕ ಮಂಡಳಿ ಸದಸ್ಯರಾದ ಲತಾ ಡಿ.ಎಚ್., ಡಾ.ಹೆಚ್.ಎಂ.ಜಯಪ್ರಕಾಶ, ಸಂಗಪ್ಪ ದೊಡ್ಡಬಸಪ್ಪ ವಾಲೀಕಾರ, ಡಾ.ವೆಂಕಟಾಚಲ ವಿ.ಎಸ್, ಬಸವರಾಜ ಪಿ.ಭತಮುರ್ಗೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ನಿರ್ದೇಶಕರಾದ ಡಾ.ಮಂಜುನಾಥ ಪಾಳೇಗಾರ, ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ ದಿನೇಶ ಕುಮಾರ ಕಲ್ಲೇರ, ಬೀದರ ಕಪಪಮೀವಿವಿ ಕುಲಸಚಿವರಾದ ಡಾ.ಪಿ.ಟಿ.ರಮೇಶ, ಡೀನ್, ಎಂ.ಎ.ಎಫ್.ಎಸ್.ಯು, ನಾಗಪುರ ಮತ್ತು ವ್ಯವಸ್ಥಾಪಕ ಮಂಡಳಿ ಸದಸ್ಯರು ಡಾ.ಶಿರೀಶ ಉಪಾಧ್ಯಾಯ ವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಉಪಸ್ಥಿತಿ: ಕರ್ನಾಟಕ ಪಶುವೈದ್ಯಕೀಯ ಪರಿಷತ್ತು ಅಧ್ಯಕ್ಷರಾದ ಡಾ.ಹೆಚ್.ಸಿ.ಇಂದ್ರೇಶ, ಬೆಂಗಳೂರು ಕರ್ನಾಟಕ ಪಶುವೈದ್ಯಕೀಯ ಸಂಘದ ಅಧ್ಯಕ್ಷರಾದ ಡಾ.ಶಿವಶರಣಪ್ಪ ಯಲಗೋಡ, ಬೀದರ ಕಪಪಮೀವಿವಿ ಸಂಶೋಧನಾ ನಿರ್ದೇಶಕರಾದ ಡಾ.ಬಿ.ವ್ಹಿ.ಶಿವಪ್ರಕಾಶ, ಬೀದರ ಕಪಪಮೀವಿವಿ ಶಿಕ್ಷಣ ನಿರ್ದೇಶಕರು (ಸ್ನಾತಕೋತ್ತರ) ಡಾ.ಡಿ.ದಿಲೀಪಕುಮಾರ, ಅಥಣಿ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ಎನ್.ಎ.ಪಾಟೀಲ, ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ಪ್ರಕಾಶ್ ಎನ್. ಬೆಂಗಳೂರು ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ಎನ್.ಕೆ.ಶಿವಕುಮಾರ ಗೌಡ, ಮಂಗಲೂರು ಮೀನುಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಹೆಚ್.ಎನ್.ಅಚಿಜನೇಯಪ್ಪ, ಗದಗ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ರಾಮಚಂದ್ರ ಬಿ. ಹಾಸನ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ಓ.ಆರ್.ನಟರಾಜು, ಬೆಂಗಳೂರು ಹೂನು ವಿಜ್ಞಾನ ಮಹಾವಿದ್ಯಾಲಯದ ಡೀನ ಡಾ.ಹೆಚ್.ಅರುಣ್ ಕುಮಾರ್, ಬೆಂಗಳೂರು ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ನಿರ್ದೇಶಕ ಡಾ.ಡಿ.ರತ್ನಮ್ಮ, ಕೊಡಗು ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ.ಎಲ್.ರಂಗನಾಥ, ಪುತ್ತೂರು ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ಎಂ.ಸಿ.ಶಿವಕುಮಾರ, ಕಲಬುರಗಿ ಹೈನು ವಿಜ್ಞಾನ ಮಹಾವಿದ್ಯಾಲಯದ ಡೀನ್ ಡಾ.ಹೆಚ್.ಮಂಜುನಾಥ, ಬೀದರ ಕಪಪಮೀವಿವಿ ಪರೀಕ್ಷಾ ನಿಯಂತ್ರಣಾಧಿಕಾರಿಗಳಾದ ಡಾ.ವಿವೇಕ ಆರ್.ಕಸರಾಳಿಕರ್, ಬೀದರ ಕಪಪಮೀವಿವಿ ವಿದ್ಯಾರ್ಥಿ ಕಲ್ಯಾಣ ನಿರ್ದೇಶಕರಾದ ಡಾ.ಶ್ರೀಕಾಂತ ಕುಲಕರ್ಣಿ, ಬೀದರ ಕಪಪಮೀವಿವಿ ಹಣಕಾಸು ನಿಯಂತ್ರಣಾಧಿಕಾರಿಳಾದ ಅಹಮದ್, ಬೀದರ ಕಪಪಮೀವಿವಿ ಆಸ್ತಿ ಅಧಿಕಾರಿಗಳಾದ ರಾಮಪ್ಪ ಕೋರವಾರ, ಬೀದರ ಕಪಪಮೀವಿವಿ ವಿಶ್ವವಿದ್ಯಾಲಯ ಗ್ರಂಥಪಾಲಕರಾದ ಡಾ.ಯು.ಎಸ್.ಜಾಧ್, ಬೀದರ ಕಪಪಮೀವಿವಿ ಪ್ರಾಣಿ ಮತ್ತುಕೋಳಿ ವಿಜ್ಞಾನದ ವಿಭಾಗೀಯ ಮುಖ್ಯಸ್ಥರಾದ ಡಾ.ಆರ್.ನಾಗರಾಜ, ಬೀದರ ಹೈನುಗಾರಿಕೆ ವಿಜ್ಞಾನದ ವಿಭಾಗೀಯ ಮುಖ್ಯಸ್ಥರಾದ ಡಾ.ಎ.ಸಚೀಂದ್ರ ಬಾಬು, ಬೀದರ ಕಪಪಮೀವಿವಿ ಮೀನುಗಾರಿಕೆ ವಿಜ್ಞಾನದ ವಿಭಾಗೀಯ ಮುಖ್ಯಸ್ಥರಾದ ಡಾ.ವರದರಾಜು, ಎನ್.ಎಫ್.ಡಿ.ಬಿ. ಜಿಬಿಸದಸ್ಯರಾದ ಚಂದ್ರಶೇಖರ ರೆಡ್ಡಿ, ಎನ್.ಎಫ್.ಡಿ.ಬಿ. ಮಾಜಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಲ್.ಎನ್.ಮೂರ್ತಿ ಇರಲಿದ್ದಾರೆ.


ಕಾರ್ಯಕ್ರಮದ ಸಮಾರೋಪ ಸಮಾರಂಭ: ಕಾರ್ಯಕ್ರಮದ ದಿವ್ಯ ಸಾನಿಧ್ಯ ಬೀದರ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಜ್ಯೋತಿರ್ಮಯಾನಂದ ಸ್ವಾಮಿಜಿ, ಮುಖ್ಯ ಅತಿಥಿಗಳಾಗಿ ಬೀದರ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಬಿ.ಎಸ್.ಬಿರಾದಾರ, ಬೀದರ ಕಪಪಮೀವಿವಿ ವ್ಯವಸ್ಥಾಪಕ ಮಂಡಳಿ ಸದಸ್ಯರಾದ ಬಸವರಾಜ ಭತಮುರ್ಗೆ, ಕಲಬುರಗಿ-ಬೀದರ-ಯಾದಗೀರ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಪಿ.ವಿ.ಪಾಟೀಲ, ಐ.ಸಿ.ಎ.ಆರ್.ಸೀಫಾ ಭುವನೇಶ್ವರ ನಿರ್ದೇಶಕರಾದ ಡಾ.ಪ್ರಮೋದಕುಮಾರ ಸಾಹೂ ವಹಿಸಲಿದ್ದಾರೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೀದರ ಕಪಪಮೀವಿವಿ ಕುಲಪತಿಗಳಾದ ಪ್ರೊ..ಕೆ.ಸಿ.ವೀರಣ್ಣ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿಯನ್ನು ಬೀದರ ಚೇಂರ‍್ಸ್ ಕಾಮರ್ಸ ಅಧ್ಯಕ್ಷರಾದ ಬಿ.ಜಿ.ಶೆಟಕಾರ, ಬೀದರ ಶಾಹಿನ ಶಿಕ್ಷಣ ಸಂಸ್ಥೆಗಳ ಸಮೂದ ಅಧ್ಯಕ್ಷರಾದ ಡಾ.ಅಬ್ದುಲ್ ಖಾದೀರ್, ಬೀದರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಶ ಚನ್ನಶೆಟ್ಟಿ, ಕಲ್ಯಾಣ ಕರ್ನಾಟಕ ವಿಭಾಗದ ಅಂತರಾಷ್ಟಿçÃಯ ಕಾಂಕ್ರೀಟ ಸಂಸ್ಥೆಯ ಅಧ್ಯಕ್ಷರಾದ ಹಾವಶೆಟ್ಟಿ ಪಾಟೀಲ, ವೆಂಕಟೇಶ್ವರ ಹ್ಯಾಚರಿಸ್ ಲಿಮಿಟೆಡ್ ಜನರಲ್ ಮ್ಯಾನೇಜರ್ ಮಂಜೇಶಕುಮಾರ ಜಾಧ್, ಬೀದರ ನಬಾರ್ಡ ಡಿ.ಡಿ.ಎಂ. ವಿಷ್ಣುವರ್ಧನ ವಹಿಸಲಿದ್ದಾರೆ.


ಮೂರು ದಿನಗಳ ಕಾರ್ಯಕ್ರಮದ ವಿವರ: ಜನವರಿ.17 ರಂದು ಬೆಳಿಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ, ಶ್ರೇಷ್ಠ ರೈತ ಮತ್ತು ರೈತ ಮಹಿಳೆಯರ ಪ್ರಶಸ್ತಿ ಪ್ರಧಾನ ಸಮಾರಂಭ (ಜಿಲ್ಲೆಗಳು ಬಳ್ಳಾರಿ, ವಿಜಯನಗರ, ವಿಜಯಪುರ, ಯಾದಗಿರಿ, ಬೆಳಗಾವಿ, ಬಾಗಲಕೋಟೆ, ರಾಯಚೂರು, ಗದಗ, ಕೊಪ್ಪಳ ಮತ್ತು ಧಾರವಾಡ). ಮಧ್ಯಾಹ್ನ 2.30 ಗಂಟೆಗೆ ವಿಜ್ಞಾನಿ ರೈತರ ಸಂವಾದ, ಮಧ್ಯಾಹ್ನ 3.30 ಗಂಟೆಗೆ ರೈತರಿಂದ ರೈತರಿಗಾಗಿ ಚರ್ಚಾಗೋಷ್ಠಿ.


ಜನವರಿ.18 ರಂದು ಬೆಳಿಗ್ಗೆ 10.30 ಗಂಟೆಗೆ ವಿಜ್ಞಾನಿ ರೈತರ ಸಂವಾದ (ವಿಷಯ ಪಶುಪಾಲನೆ ಹಾಗೂ ಮೀನುಗಾರಿಕೆಯಿಂದ ಗ್ರಾಮೀಣ ಸಮೃದ್ಧಿ ಮತ್ತು ಜೀವನೋಪಾಯ ಭದ್ರತೆ). ಮಧ್ಯಾಹ್ನ 2 ಗಂಟೆಗೆ ರೈತರಿಂದ ರೈತರಿಗಾಗಿ ಚರ್ಚಾಗೋಷ್ಠಿ, ಮಧ್ಯಾಹ್ನ 4 ಗಂಟೆಗೆ ಶ್ರೇಷ್ಠ ರೈತ ಮತ್ತು ರೈತ ಮಹಿಳೆಯರ ಪ್ರಶಸ್ತಿ ಪ್ರಧಾನ ಸಮಾರಂಭ (ಜಿಲ್ಲೆಗಳು ಹಾಸನ, ಕೋಲಾರ, ಹಾವೇರಿ, ಉತ್ತರ ಕನ್ನಡ, ಶಿವಮೊಗ್ಗ, ದಾವಣಗೆರೆ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ತುಮಕೂರು).


ಜನವರಿ.19 ರಂದು ಬೆಳಿಗ್ಗೆ 10 ಗಂಟೆಗೆ ಶ್ವಾನ ಪ್ರದರ್ಶನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ, ಮಧ್ಯಾಹ್ನ 12.30 ಗಂಟೆಗೆ ಶ್ರೇಷ್ಠ ರೈತ ಮತ್ತು ರೈತ ಮಹಿಳೆಯರ ಪ್ರಶಸ್ತಿ ಪ್ರಧಾನ ಸಮಾರಂಭ. (ಜಿಲ್ಲೆಗಳು ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ರಾಮನಗರ, ಬೀದರ, ಕಲಬುರಗಿ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ). ಮಧ್ಯಾಹ್ನ 2 ಗಂಟೆಗೆ ರೈತರಿಂದ ರೈತರಿಗಾಗಿ ಚರ್ಚಾಗೋಷ್ಠಿ, ಮಧ್ಯಾಹ್ನ 3 ಗಂಟೆಗೆ ಸಮಾರೋಪ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ.

prajaprabhat

Recent Posts

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

7 hours ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

8 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

8 hours ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

8 hours ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

8 hours ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

8 hours ago