ನಾಗಪುರ.30.ಮಾರ್ಚ್.25:- ಇಂದು ಪ್ರಧಾನಿ ನರೇಂದ್ರ ಮೋದಿ ಅವರು ನಾಗಪುರ ದೀಕ್ಷಾ ಭೂಮಿ ಪೂಜೆಗೆ ಭೇಟಿ ನೀಡಿದರು. ಅಭಿವೃದ್ಧಿ ಹೊಂದಿದ ಮತ್ತು ಎಲ್ಲರನ್ನೂ ಒಳಗೊಂಡ ಭಾರತ ನಿರ್ಮಿಸುವುದು ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ನೀಡುವ ನಿಜವಾದ ಗೌರವ ಎಂದು ಸ್ಮಾರಕದಲ್ಲಿರುವ ಸಂದರ್ಶಕರ ದಿನಚರಿಯಲ್ಲಿ ಬರೆದ ಸಂದೇಶದಲ್ಲಿ ಮೋದಿ ಹೇಳಿದರು.
ಇಂದು ನಾಗ್ಪುರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, 1956 ರಲ್ಲಿ ಅಂಬೇಡ್ಕರ್ ತಮ್ಮ ಅನುಯಾಯಿಗಳೊಂದಿಗೆ ಬೌದ್ಧ ಧರ್ಮವನ್ನು ಸ್ವೀಕರಿಸಿದ ದೀಕ್ಷಾಭೂಮಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.ದೀಕ್ಷಾಭೂಮಿಯಲ್ಲಿರುವ ಸ್ತೂಪದ ಒಳಗೆ ತೆರಳಿ ಅಲ್ಲಿ ಇರಿಸಲಾಗಿದ್ದ ಅಂಬೇಡ್ಕರ್ ಅವರ ‘ಅಸ್ತಿ’ಗೆ ನಮನ ಸಲ್ಲಿಸಿದರು.
ಸ್ಥಳದಲ್ಲಿದ್ದ ಸಂದರ್ಶಕರ ದಿನಚರಿಯಲ್ಲಿ ಹಿಂದಿಯಲ್ಲಿ ಬರೆದಿರುವ ಮೋದಿ, “ನಾಗ್ಪುರದಲ್ಲಿರುವ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಐದು ಪಂಚತೀರ್ಥಗಳಲ್ಲಿ ಒಂದಾದ ದೀಕ್ಷಾಭೂಮಿಗೆ ಭೇಟಿ ನೀಡುವ ಅವಕಾಶ ನನಗೆ ಸಿಕ್ಕಿದ್ದು ನನಗೆ ಅತೀವ ಸಂತಸ ತಂದಿದೆ ಎಂದಿದ್ದಾರೆ.
ಬಾಬಾಸಾಹೇಬರ ಸಾಮಾಜಿಕ ಸಾಮರಸ್ಯ, ಸಮಾನತೆ ಮತ್ತು ನ್ಯಾಯದ ತತ್ವಗಳನ್ನು ಇಲ್ಲಿ ಅನುಭವಿಸಬಹುದು ಎಂಬ ಸಂದೇಶ ಬರೆದಿದ್ದಾರೆ.
ಬಡವರು, ಹಿಂದುಳಿದವರು ಮತ್ತು ನಿರ್ಗತಿಕರಿಗೆ ಸಮಾನ ಹಕ್ಕುಗಳು ಮತ್ತು ನ್ಯಾಯದ ವ್ಯವಸ್ಥೆಯೊಂದಿಗೆ ಮುಂದುವರಿಯಲು ದೀಕ್ಷಾಭೂಮಿ ಜನರಿಗೆ ಶಕ್ತಿ ತುಂಬುತ್ತದೆ. ಈ ಅಮೃತ ಕಾಲದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೌಲ್ಯಗಳು ಮತ್ತು ಬೋಧನೆಗಳೊಂದಿಗೆ ನಾವು ದೇಶವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯುತ್ತೇವೆ ಎಂಬ ಸಂಪೂರ್ಣ ನಂಬಿಕೆ ಇದೆ ನನಗೆ ಇದೆ ಎಂದು ಅವರು ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ಕೊನೆಯದಾಗಿ 2017 ರಲ್ಲಿ ದೀಕ್ಷಾಭೂಮಿಗೆ ಭೇಟಿ ನೀಡಿದ್ದರು.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…