ಬೆಂಗಳೂರು.26.ಫೆ.25:- ರಾಜ್ಯದಲ್ಲಿ ದಿನೇ ದಿನೇ ಬೆಲೆ ಏರಿಕೆ ಮಾಡಿದ್ರೆ ಜನ ತೇಲೆ ಬಿಸಿ ರಾಜ್ಯದ ಬೊಕ್ಕಸ ತುಂಬಿಸಬಹುದು ಎಂಬ ಲೆಕ್ಕಾಚಾರದಲ್ಲಿ ಸರ್ಕಾರ ಸಿಕ್ಕ ಸಿಕ್ಕ ಕಡೆಯಲ್ಲೆಲ್ಲಾ ವಸೂಲಿಗೆ ಇಳಿದಂತೆ ಕಾಣುತ್ತಿದೆ.
ಈಗಾಗಲೇ ಹಾಲಿನ ದರ, ಮದ್ಯದ ದರ, ಬಸ್ ಪ್ರಯಾಣ ದರ ಏರಿಕೆಯಾಯ್ತು. ಇದೀಗ ಸರ್ಕಾರದ ಕಣ್ಣು ವಾಯು ವಿಹಾರಿಗಳ ಮೇಲೆ ಬಿದ್ದಂತಿದೆ.
ಇದೀಗ ವಾಯುವಿಹಾರಿಗಳ ಮೇಲೂ ಸುಂಕ ವಿಧಿಸಲು ಸರ್ಕಾರ ಮುಂದಾಗಿದೆ.ಇದೀಗ ಗ್ಯಾರೆಂಟಿಗಳಿಗೆ ಹಣ ಹೊಂದಿಸಲು ಸರ್ಕಾರ ಇನ್ನಿಲ್ಲದ ಹರಸಾಹಸ ಪಡುತ್ತಿದ್ದು,ರಾಜ್ಯದ ಸರ್ಕಾರೀ ಕ್ರೀಡಾಂಗಣದಲ್ಲಿ ತರಬೇತಿ ಪಡೆಯುತ್ತಿರುವ ಕ್ರೀಡಾಳುಗಳು, ವಾಯು ವಿಹಾರಿಗಳಿಗೂ ಸುಂಕ ವಿಧಿಸಲು ಮುಂದಾಗಿದೆ.
ಈಗಾಗ್ಲೇ ಈ ಬಗ್ಗೆ ರಾಜ್ಯ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದ್ದು, ಮಾರ್ಚ್ 1 ರಿಂದಲೇ ಈ ಆದೇಶ ಜಾರಿಗೆ ಬರಲಿದೆ ಎನ್ನಲಾಗಿದೆ.
ತುಮಕೂರಿನ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ವಾಕಿಂಗ್ ಮಾಡುವ ಕ್ರೀಡಾಪಟುಗಳು, ವಾಯುವಿಹಾರಿಗಳಿಗೆ ಈಗ 300 ರೂ. ಶುಲ್ಕ ವಿಧಿಸಲು ಸುತ್ತೋಲೆ ಹೊರಡಿಸಲಾಗಿದೆ.ಪ್ರತಿನಿತ್ಯ ಬರುವ ವಾಯುವಿಹಾರಿಗಳಿಗೆ ಮಾಸಿಕವಾಗಿ 300 ರೂ,ಇನ್ನು ಕ್ರೀಡಾಪಟುಗಳಿಗೆ ವಾರ್ಷಿಕವಾಗಿ 5,000 ರೂ. ವಿಧಿಸಲು ಆದೇಶಿಸಲಾಗಿದೆ. ಇದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…