ರಾಜ್ಯದಲ್ಲಿ ಖಾಲಿಯಿರುವ ಹೂದೆಗಳು ವೇಳಾಪಟ್ಟಿ ಪ್ರಕಾರ ನೇಮಕಾತಿ ಪ್ರಕ್ರಿಯೆ ಮಾಡಲಾಗುವದು.!

ಬೆಂಗಳೂರು:25.ಜನೆವರಿ.25:- ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಶಿಸ್ತು ಕ್ರಮ ಕೈಗೊಳ್ಳಲಾಗುವುದು,ಎನ್ಮುಂದೆ ಸರ್ಕಾರಿ ಹುದ್ದೆಗಳ ಭರ್ತಿ ವಿಚಾರದಲ್ಲಿ ಶಿಸ್ತು ರೂಪಿಸಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಪ್ರಕ್ರಿಯೆಗಳನ್ನು ನಿರ್ದಿಷ್ಟ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಅನುವಾಗುವಂತೆ ಅ.10ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ಆ ಪ್ರಕಾರ ಪ್ರತಿ ವರ್ಷ ಹುದ್ದೆಗಳನ್ನು ಆಯ್ಕೆ ಪ್ರಾಧಿಕಾರ ಬಿಡುಗಡೆ ಮಾಡುವ ಕುರಿತು, ನೇಮಕ ಪ್ರಾಧಿಕಾರಗಳು ನೇಮಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಅನುವಾಗುವಂತೆ ಅನುಸರಿಸಬೇಕಾದ ವಾರ್ಷಿಕ ವೇಳಾಪಟ್ಟಿ ನಿಗದಿಪಡಿಸಲಾಗಿದೆ.


ವರ್ಷವಾರು ಖಾಲಿ ಹುದ್ದೆ ಭರ್ತಿ ಮಾಡದ ಪರಿಣಾಮ ಖಾಲಿ ಹುದ್ದೆ ಪ್ರಮಾಣ ಬೆಳೆದು ನಿಂತಿದೆ. ಕನಿಷ್ಠ ಅಗತ್ಯ ಹುದ್ದೆಗಳೂ ಖಾಲಿ ಇವೆ. ಅಲ್ಲದೇ ನೇಮಕ ಪ್ರಕ್ರಿಯೆಯಲ್ಲಿ ಕಾಲಮಿತಿಯ ಶಿಸ್ತು ಇಲ್ಲದ ಕಾರಣ ವರ್ಷಾನು ಗಟ್ಟಲೆ ಪ್ರಕ್ರಿಯೆ ನಡೆಯುತ್ತದೆ. ಈ ಕಾರಣಕ್ಕೆ ಪ್ರತಿ ಹಂತವನ್ನು ನಿರ್ದಿಷ್ಟ ಮಾಸದಲ್ಲೇ ಮಾಡಬೇಕೆಂದು ಸರ್ಕಾರ ಸ್ಪಷ್ಟಪಡಿಸಿದೆ.

ವಾರ್ಷಿಕ ವೇಳಾಪಟ್ಟಿ

ಮೇ ಅಂತ್ಯದೊಳಗೆ: ಸಂಬಂಧಪಟ್ಟ ಇಲಾಖೆಗಳು ಖಾಲಿ ಹುದ್ದೆಗಳ ಮಾಹಿತಿಯನ್ನು ಕ್ರೋಡೀಕರಿಸಬೇಕಾಗುತ್ತದೆ.
ಜೂನ್ ಅಂತ್ಯದೊಳಗೆ: ಇಲಾಖೆಗಳು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಕಳುಹಿಸಿ ಅನುಮೋದನೆ ಪಡೆಯುವುದು.


ಜುಲೈ ಅಂತ್ಯದೊಳಗೆ: ಇಲಾಖೆಗಳು ಆರ್ಥಿಕ ಇಲಾಖೆ ಅನುಮೋದಿಸುವ ಹುದ್ದೆಗಳನ್ನು ನೇಮಕಾತಿಗಾಗಿ ಆಯ್ಕೆ ಪ್ರಾಧಿಕಾರಗಳಿಗೆ ಪ್ರಸ್ತಾವನೆ ಸಲ್ಲಿಸುವುದು.


ಆಗಸ್ಟ್ ಅಂತ್ಯದೊಳಗೆ: ಆಯ್ಕೆ ಪ್ರಾಧಿಕಾರಗಳಾದ ಕೆಪಿಎಸ್ಸಿ, ಕೆಇಎ ಅಥವಾ ಇತರೇ ಪ್ರಾಧಿಕಾರಗಳಿಂದ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಸಿದ್ಧಪಡಿಸಿ ಬಿಡುಗಡೆಗೊಳಿಸುವುದು.


ಸೆಪ್ಟೆಂಬರ್ ಅಂತ್ಯದೊಳಗೆ: ಆಯ್ಕೆ ಪ್ರಾಧಿಕಾರಗಳು ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ನಿಗದಿತ ಪರೀಕ್ಷೆ ನಡೆಸುವುದು.
ನವೆಂಬರ್ ಅಂತ್ಯದೊಳಗೆ: ನೇಮಕ ಪ್ರಾಧಿಕಾರಗಳು ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವುದು.

ಕಟ್ಟುನಿಟ್ಟು:

ಈ ವೇಳಾಪಟ್ಟಿಯನ್ನು ಆಯ್ಕೆ ಪ್ರಾಧಿಕಾರಗಳಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕರ್ನಾಟಕ ಲೋಕಸೇವಾ ಆಯೋಗ, ಇತರೆ ಆಯ್ಕೆ ಪ್ರಾಧಿಕಾರಗಳು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸ್ಪಷ್ಟ ಸೂಚನೆ ನೀಡಿದೆ.


ಎಲ್ಲಾ ಇಲಾಖೆಗಳ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ, ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಯವರು ಈ ವೇಳಾಪಟ್ಟಿ ಸೂಚನೆಯಂತೆ ಕ್ರಮವಹಿಸಲು ಹಾಗೂ ಅವರ ಆಡಳಿತ ವ್ಯಾಪ್ತಿಗೆ ಒಳಪಡುವ ಎಲ್ಲಾ ಇಲಾಖಾ ಮುಖ್ಯಸ್ಥರು, ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳಿಗೆ ಸೂಚನೆ ನೀಡುವಂತೆ ಸುತ್ತೋಲೆ ಹೊರಡಿಸಲಾಗಿದೆ.

ರಾಜ್ಯ ಸರ್ಕಾರ ರಜ್ಯಾದ ವಿವಿಧ ಇಲಾಖೆ ಅಧಿಕಾರಿಗಳಜೋತೆ ಸಭೆ ಮಾಡಲಾಯಿತು ಆ ಸಭೆಯಲ್ಲಿ 

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

2 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

2 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

2 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

2 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

3 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

5 hours ago