08/06/2025 6:07 PM

Translate Language

Home » ಲೈವ್ ನ್ಯೂಸ್ » ಈ ರೀತಿ ಹೇಳಿಕೆ ನೀಡುವವರನ್ನು ನೇಣಿಗೆ ಹಾಕಬೇಕು : ಖರ್ಗೆ ಹೇಳಿಕೆಗೆ ಛಲವಾದಿ ನಾರಾಯಣಸ್ವಾಮಿ ಕಿಡಿ.!

ಈ ರೀತಿ ಹೇಳಿಕೆ ನೀಡುವವರನ್ನು ನೇಣಿಗೆ ಹಾಕಬೇಕು : ಖರ್ಗೆ ಹೇಳಿಕೆಗೆ ಛಲವಾದಿ ನಾರಾಯಣಸ್ವಾಮಿ ಕಿಡಿ.!

Facebook
X
WhatsApp
Telegram

ಉತ್ತರಪ್ರದೇಶದ ಪ್ರಯಾಗ್ರಾಜನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಗಂಗೆಸ್ನಾನ ಮಾಡುವುದರ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಬಿಜೆಪಿಯ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಇಂತಹ ಹೇಳಿಕೆ ನೀಡುವವರನ್ನು ನೇಣಿಗೆ ಹಾಕಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ರೋಶ ಹೊರ ಹಾಕಿದರು.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಂಗೆಯಲ್ಲಿ ಪುಣ್ಯ ಸ್ನಾನ ಮಾಡೋದು ಸಂಸ್ಕೃತಿ. ಗಂಗೆಯಲ್ಲಿ ಪುಣ್ಯ ಸ್ನಾನ ಮಾಡಿ ಅಂತ ಪೋಸ್ಟರ್ ಹಾಕಿಲ್ಲ. ಕೋಟ್ಯಂತರ ಜನರ ನಂಬಿಕೆ ನೋಯಿಸುವ ಕೆಲಸ ಆಗಿದೆ. ಈ ರೀತಿ ಯಾರೇ ಹೇಳಿಕೆ ನೀಡಿದರು ನೇಣಿಗೆ ಹಾಕಬೇಕು. ಇದನ್ನು ನಿಂದಿಸುವ ಗೌರಿಸುವ ಕೆಲಸ ಮಾಡಬಾರದು ಮಲ್ಲಿಕಾರ್ಜುನ ಖರ್ಗೆ ಮನೆಯಲ್ಲಿ ನಿತ್ಯ ಪೂಜೆ ಮಾಡುತ್ತಾರೆ. ಹೊರಗೆ ಬಂದು ಯಾರನ್ನು ಮುಚ್ಚಿಸಲು ಹೀಗೆ ಟೀಕಿಸುತ್ತಿದ್ದೀರಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಐಸಿಸಿ ಅಧ್ಯಕ್ಷರು ಹೇಳಿದ್ದೇನು?

ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿದಂತೆ ಬಿಜೆಪಿ ನಾಯಕರು ಮಹಾಕುಂಭಮೇಳಕ್ಕೆ ಭೇಟಿ ನೀಡಿ ಪವಿತ್ರಸ್ನಾನ ಮಾಡುತ್ತಿರುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದು, ಗಂಗಾಸ್ನಾನ ಮಾಡುವುದರಿಂದ ಬಡತನ ನಿರ್ಮೂಲನೆಯಾಗುವುದಿಲ್ಲ.

ಬಿಜೆಪಿ ನಾಯಕರು ಕ್ಯಾಮೆರಾಗಳಿಗಾಗಿ ಗಂಗಾ ನದಿಯಲ್ಲಿ ಸ್ನಾನ ಮಾಡಲು ಪರಸ್ಪರ ಪೈಪೋಟಿ ನಡೆಸುತ್ತಿದ್ದಾರೆ. ಬಿಜೆಪಿ ಹಾಗೂ ಆರ್ಎಸ್ಎಸ್ ನಾಯಕರು ದ್ರೋಹಿಗಳು. ಧರ್ಮದ ಹೆಸರಿನಲ್ಲಿ ಬಡವರ ಶೋಷಣೆ ಮಾಡುತ್ತಿದ್ದಾರೆ. ಈ ರೀತಿಯ ಶೋಷಣೆಯನ್ನು ಕಾಂಗ್ರೆಸ್ ಎಂದಿಗೂ ಸಹಿಸುವುದಿಲ್ಲ ಎಂದು ಹೇಳಿದ್ದರು. ಈ ವಿಚಾರ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಕೆಸರೆರಚಾಟಕ್ಕೆ ಕಾರಣವಾಗಿತ್ತು.

Source: kannada news kwno

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!