ಉಚಿತ ತರಬೇತಿ ಹಾಗೂ ವಿದ್ಯಾರ್ಥಿವೇತನ. ಕೇಂದ್ರ ಸರ್ಕಾರ

ಹೊಸ ದೆಹಲಿ.12.ಜೂನ್.25:- ಕೇಂದ್ರ ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದರು,2024-25 ರಿಂದ 2025-26ರ ಅವಧಿಯಲ್ಲಿ ದೇಶದಾದ್ಯಂತ 15,000 ಆಯ್ದ ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್‌ಗಳನ್ನು ನೀಡುವ ಗುರಿಯಿದೆ.ಕೇಂದ್ರ ಸರ್ಕಾರವು 2023ರಲ್ಲಿ ನಮೋ ಡ್ರೋನ್ ದೀದಿ ಯೋಜನೆಯನ್ನು ಪ್ರಾರಂಭಿಸಿತು. ಇತ್ತೀಚೆಗೆ ಆರಂಭಿಸಿರುವ ಮಹತ್ವದ ಯೋಜನೆಗಳಲ್ಲಿ ಒಂದಾಗಿದೆ ನಮೋ ಡ್ರೋನ್ ದೀದಿ ಯೋಜನೆ.

ದ್ರ ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ. ಇತ್ತೀಚೆಗೆ ಆರಂಭಿಸಿರುವ ಮಹತ್ವದ ಯೋಜನೆಗಳಲ್ಲಿ ಒಂದಾಗಿದೆ ನಮೋ ಡ್ರೋನ್ ದೀದಿ ಯೋಜನೆ (Namo Drone Didi Yojana).

ಈ ಯೋಜನೆಯನ್ನು 2023ರ ನವೆಂಬರ್ 30ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದರು,2024-25 ರಿಂದ 2025-26ರ ಅವಧಿಯಲ್ಲಿ ದೇಶದಾದ್ಯಂತ 15,000 ಆಯ್ದ ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್‌ಗಳನ್ನು ನೀಡುವ ಗುರಿಯಿದೆ.ಕೇಂದ್ರ ಸರ್ಕಾರವು 2023ರಲ್ಲಿ ನಮೋ ಡ್ರೋನ್ ದೀದಿ ಯೋಜನೆಯನ್ನು ಪ್ರಾರಂಭಿಸಿತು.

ಡ್ರೋನ್‌ಗಳ ಮೂಲಕ ಕೃಷಿ ಕ್ಷೇತ್ರದಲ್ಲೂ ಮಹಿಳೆಯರು ಸಬಲರಾಗುತ್ತಿದ್ದಾರೆ. ಇದರೊಂದಿಗೆ ಹೊಸ ತಂತ್ರಜ್ಞಾನದೊಂದಿಗೆ ಕೃಷಿ ಮಾಡುವ ಅವಕಾಶವೂ ಸಿಗುತ್ತಿದೆ, ನಮೋ ಡ್ರೋನ್ ದೀದಿ ಯೋಜನೆ ಮೋದಿ ಸರ್ಕಾರದ ಕ್ರಾಂತಿಕಾರಿ ಯೋಜನೆಯಾಗಿದ್ದು, ಮಹಿಳೆಯರು ನೇತೃತ್ವದ ಸ್ವಸಹಾಯ ಗುಂಪುಗಳನ್ನು (SHGs) ಡ್ರೋನ್ ತಂತ್ರಜ್ಞಾನದಿಂದ ಸಜ್ಜುಗೊಳಿಸುವ ಮೂಲಕ ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯು ಆರಂಭದಲ್ಲಿ ಕೃಷಿ ಉದ್ದೇಶಗಳಿಗಾಗಿ SHG ಗಳಲ್ಲಿ 15,000 ಆಯ್ದ ಮಹಿಳೆಯರಿಗೆ ಡ್ರೋನ್‌ಗಳನ್ನು ಒದಗಿಸಲು ಪ್ರಯತ್ನಿಸುತ್ತದೆ

15 ದಿನಗಳ ತರಬೇತಿ

ನಮೋ ಡ್ರೋನ್ ದೀದಿ ಯೋಜನೆಯಡಿ ಮಹಿಳೆಯರಿಗೆ 15 ದಿನಗಳ ವಿಶಿಷ್ಟ ತರಬೇತಿ ನೀಡಲಾಗುತ್ತದೆ. ಈ ತರಬೇತಿಯಲ್ಲಿ ಡ್ರೋನ್ ಹಾರಿಸುವುದರಿಂದ ಆರಂಭಿಸಿ, ಡ್ರೋನ್ ನಿರ್ವಹಣೆ, ಕೃಷಿಯಲ್ಲಿ ಡ್ರೋನ್ ಬಳಕೆ (ಪೆಸ್ಟಿಸೈಡ್ ಮತ್ತು ಫರ್ಟಿಲೈಸರ್ ಸ್ಪ್ರೇಯಿಂಗ್, ಬೆಳೆ ಪರಿಶೀಲನೆ, ಬಿತ್ತನೆ) ಹಾಗೂ ಡೇಟಾ ವಿಶ್ಲೇಷಣೆ ಸೇರಿದಂತೆ ವಿವಿಧ ಹಂತಗಳಲ್ಲಿನ ಕೌಶಲ್ಯಗಳನ್ನು ಕಲಿಸಲಾಗುತ್ತದೆ. ಈ ತರಬೇತಿಯು 5 ದಿನಗಳ ಅಗತ್ಯವಿರುವ ಡ್ರೋನ್ ಪೈಲಟ್ ತರಬೇತಿ ಮತ್ತು 10 ದಿನಗಳ ಕೃಷಿ ಸಂಬಂಧಿತ ತರಬೇತಿಯನ್ನು ಒಳಗೊಂಡಿರುತ್ತದೆ. ಜೊತೆಗೆ, ಆಯ್ಕೆಯಾದ ಮಹಿಳೆಯರಿಗೆ 15,000 ರೂ.ಗಳ ಆರ್ಥಿಕ ನೆರವನ್ನೂ ನೀಡಲಾಗುತ್ತದೆ.

ಯೋಜನೆಯ ಪ್ರಮುಖ ಅಂಶಗಳು:

ಪ್ರತಿ ಮಹಿಳಾ ಸ್ವಸಹಾಯ ಗುಂಪಿಗೆ ಡ್ರೋನ್ ಖರೀದಿಗೆ 80% ಅಥವಾ ಗರಿಷ್ಠ 8 ಲಕ್ಷ ರೂ.ವರೆಗೆ ಸಬ್ಸಿಡಿ ನೀಡಲಾಗುತ್ತದೆ.

ಉಳಿದ ಮೊತ್ತಕ್ಕೆ 3% ಬಡ್ಡಿದರದಲ್ಲಿ ಸಾಲ ಸೌಲಭ್ಯವೂ ಇದೆ.

ಡ್ರೋನ್‌ಗಳನ್ನು ಕೃಷಿಯಲ್ಲಿ ಪೆಸ್ಟಿಸೈಡ್, ಫರ್ಟಿಲೈಸರ್‌ಗಳ ಸ್ಪ್ರೇಯಿಂಗ್ ಸೇವೆಗೆ ರೈತರಿಗೆ ಬಾಡಿಗೆಗೆ ನೀಡಬಹುದು.

ಈ ಮೂಲಕ ಪ್ರತಿ ಗುಂಪಿಗೆ ವರ್ಷಕ್ಕೆ ಕನಿಷ್ಠ 1 ಲಕ್ಷ ರೂ. ಹೆಚ್ಚುವರಿ ಆದಾಯ ಸಿಗಲಿದೆ.

ಡ್ರೋನ್ ಹಾರಿಸುವ ತರಬೇತಿ ಹಾಗೂ ತಾಂತ್ರಿಕ ಮಾರ್ಗದರ್ಶನವನ್ನು ಸರ್ಕಾರ ಉಚಿತವಾಗಿ ಒದಗಿಸುತ್ತದೆ.

ಯೋಜನೆ ಜಾರಿಗೆ ಕೃಷಿ ವಿಜ್ಞಾನ ಕೇಂದ್ರಗಳು (KVKs), ವಿವಿಧ ಇಲಾಖೆ ಮತ್ತು ಕಂಪನಿಗಳು ಸಹಕರಿಸುತ್ತಿವೆ.

ಯಾರು ಪ್ರಯೋಜನ ಪಡೆಯಬಹುದು?

18 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಮಹಿಳೆಯರು ಅರ್ಹರು.

ಅರ್ಜಿದಾರರು ಕೆಳ ಆರ್ಥಿಕ ವರ್ಗಕ್ಕೆ (ಅಂತ್ಯೋದಯ ಕುಟುಂಬಗಳು, ಬಿಪಿಎಲ್, ಶೇ. 60 ಕ್ಕಿಂತ ಕಡಿಮೆ ವಾರ್ಷಿಕ ಆದಾಯ) ಸೇರಿದವರಾಗಿರಬೇಕು.

ಕೃಷಿ ಕ್ಷೇತ್ರದೊಂದಿಗೆ ನೇರ ಅಥವಾ ಪರೋಕ್ಷ ಸಂಬಂಧ ಹೊಂದಿರುವ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಆಯ್ಕೆಯಾದ ಮಹಿಳೆಯರು ಸ್ವಸಹಾಯ ಗುಂಪುಗಳ (SHGs) ಸದಸ್ಯರಾಗಿರಬೇಕು ಮತ್ತು DAY-NRLM ಯೋಜನೆಯಡಿ ನೋಂದಾಯಿತರಾಗಿರಬೇಕು.

ಈ ಯೋಜನೆಯಡಿ ಮಹಿಳೆಯರಿಗೆ ತಂತ್ರಜ್ಞಾನದಲ್ಲಿ ಪರಿಣತಿ, ಆರ್ಥಿಕ ಸ್ವಾವಲಂಬನೆ ಹಾಗೂ ಕೃಷಿಯಲ್ಲಿ ಹೊಸ ಅವಕಾಶಗಳು ದೊರೆಯುತ್ತವೆ.

ಅಗತ್ಯ ದಾಖಲೆಗಳು:

ಆಧಾರ್ ಕಾರ್ಡ್

ಪ್ಯಾನ್ ಕಾರ್ಡ್

ನಿವಾಸ ಪ್ರಮಾಣಪತ್ರ

ಪಾಸ್‌ಪೋರ್ಟ್ ಗಾತ್ರದ ಫೋಟೋ

ಮೊಬೈಲ್ ಸಂಖ್ಯೆ

ಇಮೇಲ್ ಐಡಿ

ಸ್ವಸಹಾಯ ಗುಂಪಿನ ID ಕಾರ್ಡ್

prajaprabhat

Recent Posts

ಬೆಂಗಳೂರಿನಿಂದ ಬೀದರ್‌ಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ: ಕಲ್ಯಾಣ ಕರ್ನಾಟಕದ ಜನತೆಗೆ ಹೊಸ ಸಂಪರ್ಕದ ನೂತನ

ಬೆಂಗಳೂರು.13.ಜೂನ್.25:- ಬೀದರ್ ಬೆಂಗಳೂರು ಮತ್ತೊಂದು ವಿಶೇಷ ಟ್ರೈನ್ ಇದೇ 15 ಜೂನ್ ರಿಂದ ಪ್ರಾರಂಭ ಆಗ್ತಿದೆ. ಈ ಟ್ರೈನ್ ಕರ್ನಾಟಕದ…

19 minutes ago

ರಾಜ್ಯಾದ್ಯಂತ ಶ್ರವಣ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು.13.ಜೂನ್ .25:- ರಾಜ್ಯ ಸರ್ಕಾರಿ ನೌಕರರಿಗೆ 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯಾದ್ಯಂತ ಶ್ರವಣ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ…

32 minutes ago

ಅತಿಥಿ ಶಿಕ್ಷಕರ ನೇಮಕಾತಿಗೆ ವಾಕ್ ಇನ್ ಇಂಟರ್ವ್ಯೂ.

ಬಳ್ಳಾರಿ.13.ಜೂನ್.25:- ರಾಜ್ಯದಲ್ಲಿ ಏಕಲವ್ಯ ಮಾದರಿ ಸ್ಕೂಲ್ ಗಳಲ್ಲಿ ಬೇಕಾಗಿರುವ ಶೀಕ್ಷಕರ ಹುದ್ದೆಗಳು ತಾಲ್ಲೂಕಿನ ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ…

50 minutes ago

SC/ST ಮೇಲಿನ ದಾಖಲಾಗುವ ಪ್ರಕರಣಗಳನ್ನು DCRE ಪೊಲೀಸ್ ಠಾಣೆಗಳಿಗೆ ವರ್ಗಾಯಿಸಲು ಸೂಚಿಸಲಾಗಿದೆ.

ಬೆಂಗಳೂರು.13.ಜೂನ್.25:- ರಾಜ್ಯದ ಡಿಸಿಆರ್‌ಇ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸುವ ಮತ್ತು…

5 hours ago

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, 4,500 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸ ದೆಹಲಿ.13.ಜೂನ್.25:- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 2025-26ರ ಹಣಕಾಸು ವರ್ಷದ ನೇಮಕಾತಿಯ ಭಾಗವಾಗಿ 4,500 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿದೆ.…

6 hours ago

ರಾಜ್ಯ ಸರ್ಕಾರ ಅನುದಾನಿತ ಶಾಲಾ ಶಿಕ್ಷಕರಿಗೆ ಸಹಿ ಸುದ್ಧಿ `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!

ಬೆಂಗಳೂರು.12.ಜೂನ್.25:-ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ನಿವೃತ್ತಿ ವೇತನ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ…

16 hours ago