ಉತ್ಪಾದಕ ಸಂಸ್ಥೆಗಳನ್ನು ಬಲಗೊಳಿಸಲು ಅಗತ್ಯ ಸಹಾಯಒದಗಿಸಲಾಗುವುದು-ಸಿಇಓ ಡಾ.ಗಿರೀಶ ಬದೋಲೆ


ಬೀದರ.04.ಜೂನ್25:- ಕರ್ನಾಟಕದಲ್ಲಿ ಬೀದರ ಜಿಲ್ಲೆಯ ಹಲಬರ್ಗಾ ಗ್ರಾಮ ಪಂಚಾಯತಿಯ ಜನಶ್ರೀ ಮಹಿಳಾ ರೈತ ಉತ್ಪಾದಕರ ಕಂಪನಿ ಮೊಟ್ಟ ಮೊದಲಿಗೆ ಬೀಜ, ರಸಗೊಬ್ಬರ ಪರವಾನಿಗೆ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಉತ್ಪಾದಕ ಸಂಸ್ಥೆಗಳನ್ನು ಬಲಗೊಳಿಸಲು ಅಗತ್ಯ ಸಹಾಯ ಮಾಡಲಾಗುತ್ತದೆ ಎಂದು ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ತಿಳಿಸಿದರು.


ಅವರು ಇತ್ತೀಚಿಗೆ ರಾಷ್ಟಿçಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಹಲಬರ್ಗಾ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಂಡಿದ್ದ ಜನಶ್ರೀ ಮಹಿಳಾ ರೈತ ಉತ್ಪಾದಕರ ಕಂಪನಿಯ ಉದ್ಘಾಟನಾ ಸಮಾರಂಭದಲ್ಲಿ ಬೀಜ ಹಾಗೂ ರಸಗೊಬ್ಬರಗಳನ್ನು ಕಂಪನಿಯ ಶೇರುದಾರಿಗೆ ನೀಡಿ ಮಾತನಾಡಿದರು.


ಮಹಿಳೆಯರ ಸ್ವಸಹಾಯ ಸಂಘಗಳ ಮುಖಾಂತರ ಗ್ರಾಮೀಣ ಬಡತನ ನಿವಾರಣೆ ಕಾರ್ಯಕ್ರಮವಾಗಿದ್ದು, ಬೀಜ, ರಸಗೊಬ್ಬರ ಹೆಚ್ಚಿನ ಪ್ರಮಾಣದಲ್ಲಿ ಮಾರಾಟ ಮಾಡಿ ಕಂಪನಿ ಲಾಭವಾಗುವಂತೆ ಶ್ರಮಿಸಬೇಕೆಂದು ಹೇಳಿದರು.
ಹಲಬರ್ಗಾ ರಾಚೋಟೇಶ್ವರ ಮಠದ ಹಾವಗಿಲಿಂಗೇಶ್ವರ ಶಿವಾಚಾರ್ಯರು ಮಾತನಾಡಿ, ಸ್ವ-ಸಹಾಯ ಸಂಘದ ಮಹಿಳೆಯರನ್ನು ಒಗ್ಗೂಡಿಸುವ ಮೂಲಕ ಕಂಪನಿ ಸ್ಥಾಪನೆ ಮಾಡಿದ್ದು, ರೈತ ಮಹಿಳೆಯರು ಬೆಳೆಗಳನ್ನು ಬೆಳದು, ಬೆಳೆಗಳ ಸಂಸ್ಕರಣೆ ಹಾಗೂ ಮಾರಾಟ ಮಾಡುವಲ್ಲಿ ಸ್ವ-ಸಹಾಯ ಸಂಘದ ಮಹಿಳೆಯರು ಸ್ವಯಂ ಉದ್ಯೋಗ ಮಾಡಬೇಕೆಂದು ತಿಳಿಸಿದರು.


ಈ ಸಂದರ್ಭದಲ್ಲಿ ಬೀದರ ಜಿಲ್ಲಾ ಪಂಚಾಯತ ಡಿಆರ್‌ಡಿಎ ಯೋಜನಾ ನಿರ್ದೇಶಕರು, ಭಾಲ್ಕಿ ಕಾರ್ಯನಿರ್ವಾಹಕ ಅಧಿಕಾರಿಗಳು, ಹಲಬರ್ಗಾ ಗ್ರಾಮ ಪಂಚಾಯತ ಅಧ್ಯಕ್ಷರು, ಹಲಬರ್ಗಾ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಎನ್‌ಆರ್‌ಎಲ್‌ಎಮ್ ಜಿಲ್ಲಾ ಹಾಗೂ ತಾಲ್ಲೂಕ ಮಟ್ಟದ ಸಿಬ್ಬಂದಿಗಳು ಹಾಗೂ ಕಂಪನಿಯ ಶೇರುದಾರರು ಸೇರಿದಂತೆ ಇತರರು ಉಪಸ್ಥಿತರಿದ್ದರು.

prajaprabhat

Recent Posts

ರಾಯಚೂರ ಜಿಲ್ಲೆಯಲ್ಲಿ ಯೂರಿಯಾ’ ಡಿಎಪಿ ರಸಗೊಬ್ಬರ ಲಭ್ಯ

ರಾಯಚೂರು.05.ಆಗಸ್ಟ್.25: ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಹಂತ ಹಂತವಾಗಿ ವಿವಿಧ…

4 minutes ago

ವಿಶ್ವ ವಿಕಲಚೇತನರ ದಿನಾಚರಣೆ: ಪ್ರಶಸ್ತಿಗೆ ಅರ್ಜಿ ಆಹ್ವಾನ<br>

ರಾಯಚೂರು.05.ಆಗಸ್ಟ್.25: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಪ್ರತಿ ವರ್ಷದಂತೆ ಈ ವರ್ಷವೂ 2025ರ ಡಿಸೆಂಬರ್ 3ರಂದು ನಡೆಯುವ…

16 minutes ago

ಯರಮರಸ್ ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿಗೆ ಕೌನ್ಸೆಲಿಂಗ್.

ರಾಯಚೂರು.05.ಆಗಸ್ಟ.25: ಇಲ್ಲಿನ ಯರಮರಸ್ ಸರ್ಕಾರಿ ಆದರ್ಶ ವಿದ್ಯಾಲಯ 2025-26ನೇ ಸಾಲಿನ 6ನೇ ತರಗತಿ ದಾಖಲಾತಿ ಕೌನ್ಸೆಲಿಂಗ್ ಪ್ರಕ್ರಿಯು ಆಗಸ್ಟ್ 11ರಿಂದ…

21 minutes ago

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

9 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

9 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

10 hours ago