ಬೆಂಗಳೂರು.09.ಫೆ.25:- ರಾಜ್ಯ ಸರ್ಕಾರ ಇಂದು ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ 2025-26 ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಉಪಸ್ಥಿತಿಯಲ್ಲಿ ನಡೆಯಿತು.
ಸಚಿವರು ಡಾ.ಎಂ.ಸಿ ಸುಧಾಕರ ಅವರು ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಬಲವರ್ಧನೆಗಾಗಿ ಆಯವ್ಯಯದಲ್ಲಿ ಹೆಚ್ಚಿನ ಅನುದಾನ ಮೀಸಲಿಡಲು ಮುಖ್ಯಮಂತ್ರಿಗಳಿಗೆ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಜೀರ್ ಅಹ್ಮದ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಉನ್ನತ ಶಿಕ್ಷಣ ಇಲಾಖೆಯಲ್ಲಿ ಬಹಳಷ್ಟು ಕೊರತೆ ಇರುವ ಕಾರಣ ನಮ್ ಇಲಾಖೆಗೆ ಹೆಚ್ಚಿನ್ ಅನುದಾನ ಮೀಸಲಿಡಲು ಮನವಿ ಮಾಡಿದ್ದಾರೆ.