ಉನ್ನತ ಶಿಕ್ಷಣ ಸಂಸ್ಥೆಗಳಿಗೆ “NAAC” ಬದಲು “ಬೈನರಿ ಮಾನ್ಯತೆ” ಮಾನ್ಯತೆ.!

ಬೆಂಗಳೂರು.09.ಫೆ.25:- ವಿಶ್ವವಿದ್ಯಾಲಯ ಅನುದಾನ ಆಯೋಗ ವತಿಯಿಂದ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಪರಿಷತ್‌ನಲ್ಲಿ (ನ್ಯಾಕ್‌) “NAAC”ಉತ್ತಮ ಮಾನ್ಯತೆ ಪಡೆಯಲು ಅಕ್ರಮ ಎಸಗಿದ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮಾನ್ಯತೆ ನೀಡುವ ಪದ್ಧತಿಯಲ್ಲಿ ಬದಲಾವಣೆ ತರಲು ಮುಂದಾಗಿರುವ ನ್ಯಾಕ್‌ ಮುಂದಿನ ಎಪ್ರಿಲ್‌ ತಿಂಗಳ ಬಳಿಕ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಮೂಲ (ಬೈನರಿ) ಮಾನ್ಯತೆಯನ್ನು ಮಾತ್ರ ನೀಡಲು ಮುಂದಾಗಿದೆ.

ಬೈನರಿ ಮಾನ್ಯತೆ ಕ್ರಮದಲ್ಲಿ ನ್ಯಾಕ್‌ ಮಾನ್ಯತೆಗಾಗಿ ಅರ್ಜಿ ಸಲ್ಲಿಸುವ ಸಂಸ್ಥೆಗೆ ಮಾನ್ಯತೆ ನೀಡುವುದು ಅಥವಾ ನೀಡದಿರುವ ತೀರ್ಮಾನವನ್ನು ಮಾತ್ರ ಕೈಗೊಳ್ಳಲಾಗುತ್ತದೆ. ಸಂಸ್ಥೆಯು ಬೈನರಿ ಮಾನ್ಯತೆಯನ್ನು ಪಡೆದ ಮೇಲೆ ಸಂಸ್ಥೆಯ ಕೋರಿಕೆಯ ಮೇರೆಗೆ ಔನ್ನತ್ಯ ಆಧಾರಿತ ಶ್ರೇಣಿಕರಣ ಮಟ್ಟವನ್ನು (ಎಂಬಿಜಿಎಲ್‌) ನೀಡಲಾಗುತ್ತದೆ. ಸದ್ಯ ಎಂಬಿಜಿಎಲ್‌ನ ಚೌಕಟ್ಟು ಮತ್ತು ವಿಧಾನ ರೂಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ನ್ಯಾಕ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ನ್ಯಾಕ್‌ ಅಕ್ರಮದಲ್ಲಿ ಭಾಗಿಯಾದವರು ಡಿಬಾರ್‌: ನ್ಯಾಕ್‌ ಅಕ್ರಮದಲ್ಲಿ ಭಾಗಿಯಾಗಿರುವ ಗುಂಟೂರು ಮೂಲದ ಕೆಎಲ್‌ಇಎಫ್ ಸಂಸ್ಥೆಯ ಮಾನ್ಯತಾ ಪ್ರಕ್ರಿಯೆಯನ್ನು ರದ್ದು ಪಡಿಸಲಾಗಿದೆ, ಹಾಗೆಯೇ ಆ ಸಂಸ್ಥೆಯು ಮುಂದಿನ 5 ವರ್ಷಗಳ ಕಾಲ ನ್ಯಾಕ್‌ ಮಾನ್ಯತೆಗೆ ಅರ್ಜಿ ಸಲ್ಲಿಸುವುದರಿಂದ ಡಿಬಾರ್‌ ಮಾಡಲಾಗಿದೆ.

ಅಕ್ರಮ ಎಸಗಿದ ಪೀರ್‌ ತಂಡಲ್ಲಿದ್ದ ಏಳು ಮಂದಿಯನ್ನು ಮಾನ್ಯತೆ ಮತ್ತು ನ್ಯಾಕ್‌ ಪ್ರಕ್ರಿಯೆಯಿಂದ ಜೀವನ ಪೂರ್ತಿ ಡಿಬಾರ್‌ ಮಾಡಲಾಗಿದೆ.

ಹೊಸ ನ್ಯಾಕ್‌ ಬದಲಾಗಿ ಬೈನರಿ ?


ಈವರೆಗೆ ನ್ಯಾಕ್‌ ಕಾಲೇಜು, ವಿಶ್ವವಿದ್ಯಾಲಯಗಳಿಗೆ ಅವುಗಳ ಗುಣಮಟ್ಟಕ್ಕೆ ಅನುಗುಣವಾಗಿ A++, A+, A, B++ ಹೀಗೆ ಮಾನ್ಯತೆಗಳನ್ನು ನೀಡುತ್ತಾ ಬರುತ್ತಿತ್ತು.

ಈ ರೀತಿ ಯ ಗ್ರೇಡಿಂಗ್‌ ಅನ್ನು ನ್ಯಾಯ ಯುತವಾಗಿ ನೀಡುತ್ತಿಲ್ಲ ಎಂಬ ಆರೋಪಗಳು ಹಲವು ಬಾರಿ ಕೇಳಿ ಬಂದಿದೆ. ಆದ್ದರಿಂದ ಇನ್ನು ಮುಂದೆ ಈ ರೀತಿ ಗ್ರೇಡ್‌ ನೀಡದೆ ಮಾನ್ಯತೆ ಪಡೆದಿದೆಯೇ, ಇಲ್ಲವೇ ಎಂಬುದನ್ನಷೆೆ ತಿಳಿಸಲಾಗುತ್ತದೆ. ಇದನ್ನು ಬೈನರಿ ಮಾನ್ಯತೆ ಎನ್ನಲಾಗುತ್ತದೆ.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

1 hour ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

2 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

2 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

2 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

2 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

4 hours ago