09/06/2025 7:21 AM

Translate Language

Home » ಲೈವ್ ನ್ಯೂಸ್ » ಉ.ಪ.ದಲ್ಲಿ ಬೀದರ್ ಯಾತ್ರಿಕರ ದುರ್ಮರಣ-ಸಚಿವ ರಹೀಂ ಖಾನ ಸಂತಾಪ.!

ಉ.ಪ.ದಲ್ಲಿ ಬೀದರ್ ಯಾತ್ರಿಕರ ದುರ್ಮರಣ-ಸಚಿವ ರಹೀಂ ಖಾನ ಸಂತಾಪ.!

Facebook
X
WhatsApp
Telegram

ಬೀದರ.21.ಫೆಬ್ರುವರಿ.25:-ಪ್ರಯಾಗ್ ರಾಜ್ ಕುಂಭಮೇಳಕ್ಕೆ ತೆರಳಿದ ವೇಳೆ ಉತ್ತರ ಪ್ರದೇಶದ ರುಪಾಪೂರ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ಜಿಲ್ಲೆಯ ಐವರು ಯಾತ್ರಿಕರು ದುರ್ಮರಣಕ್ಕೀಡಾಗಿರುವ ದುಃಖದ ಸುದ್ದಿ ಆಘಾತ ತಂದಿದೆ. ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಶೋಕ ವ್ಯಕ್ತಪಡಿಸಿದ್ದಾರೆ.


ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದೊAದಿಗೆ ನಾನು ಆಳವಾದ ಸಂತಾಪ ವ್ಯಕ್ತಪಡಿಸುತ್ತೇನೆ ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಲಾರಿಯೊಂದಿಗೆ ಡಿಕ್ಕಿಯಾಗಿ ಈ ಭೀಕರ ಅಪಘಾತ ಸಂಭವಿಸಿದ್ದು, 5 ಮಂದಿ ಸಾವನ್ನಪ್ಪಿದರೆ, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.


ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ ಜಿ ಹಾಗೂ ನಾನು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಮತ್ತು ಮೃತ ದೇಹಗಳನ್ನು ಬೀದರ್‌ಗೆ ತರಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು.


ಮೃತರ ಕುಟುಂಬಗಳಿಗೆ ದೇವರು ದುಃಖ ಸಹಿಸುವ ಶಕ್ತಿಯನ್ನು ನೀಡಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!