2009ರಲ್ಲಿ ನೇಮಕವಾದ ಸಹಾಯಕ ಪ್ರಾಧ್ಯಾಪಕರಿಗೆ ಆತಂಕ
ಪ್ರಮಾಣಪತ್ರಗಳು ನಕಲಿಯಾಗಿ ದ್ದಲ್ಲಿ ಅಥವಾ ನ್ಯೂನತೆ ಕಂಡು ಬಂದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿ ಸಬೇಕು. ಈ ಬಗ್ಗೆಸೆ. 30ರೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ತುಕಾರಾಮ ಕಲ್ಯಾಣಕರ, ಅಧೀನ ಕಾರ್ಯದರ್ಶಿ ……. .. ಕಾಲೇಜು ಶಿಕ್ಷಣ ಇಲಾಖೆ
ನಮ್ಮಲ್ಲಿ 2009ರಲ್ಲಿ ನೇಮಕವಾದ ಸಹಾಯಕ ಪ್ರಾಧ್ಯಾಪಕರು ಹೊರ ರಾಜ್ಯದ ಎಂ.ಫಿಲ್, ಪಿಎಚ್.ಡಿ ಪ್ರಮಾಣಪತ್ರ ನೀಡಿದ್ದಲ್ಲಿ ಸಿಂಧುತ್ವ ಪರಿಶೀಲಿಸಿ, ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು……… ಹೆಸರು ಹೇಳಲಿಚ್ಛಿಸದ ಪ್ರಾಂಶುಪಾಲರು, ಮೈಸೂರು
ಮೈಸೂರು:
ಕರ್ನಾಟಕ ಲೋಕಸೇವಾ ಆಯೋಗದ ಮೂಲಕ 2009ರಲ್ಲಿ ಪ್ರಥಮ ದರ್ಜೆ ಕಾಲೇಜುಗಳಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಕವಾಗುವಾಗ ಹೊರ ರಾಜ್ಯದ ಎಂ.ಫಿಲ್ ಪ್ರಮಾಣಪತ್ರ ನೀಡಿರುವವರು ತೊಂದರೆಗೆ ಸಿಲುಕಿಗೊಳ್ಳುವ ಸಾಧ್ಯತೆ ಇದೆ. ಆ ವರ್ಷ ರಾಜ್ಯ ಸರ್ಕಾರ ಕೆಪಿಎಸ್ಸಿ ಮೂಲಕ 2,250 ಮಂದಿಯನ್ನು ಸಹಾಯಕ ಪ್ರಾಧ್ಯಾಪ ಕರಾಗಿ ನೇಮಕ ಮಾಡಿಕೊಂಡಿತ್ತು. ಇವರೆಲ್ಲ 2007ರಲ್ಲಿ ಅರ್ಜಿ ಸಲ್ಲಿಸಿದ್ದವರು.
ನೇಮಕವಾ ದವರು ರಾಷ್ಟ್ರೀಯ ಅರ್ಹತಾ ಪರೀಕ್ಷೆ, ರಾಜ್ಯ ಮಟ್ಟದ ಅರ್ಹತಾ ಪರೀಕ್ಷೆಯಲ್ಲಿ ಪಾಸಾಗಿರು ವುದು ಕಡ್ಡಾಯವಾಗಿತ್ತು. ಪಿಎಚ್.ಡಿ ಮತ್ತು ಎಂ.ಫಿಲ್ ಆದವರಿಗೆ ವಿನಾಯ್ತಿ ನೀಡಲಾಗಿತ್ತು. ಆಗ ನೇಮಕವಾದವರಲ್ಲಿ 1,718 ಮಂದಿ ಎಂ.ಫಿಲ್ ಪ್ರಮಾಣಪತ್ರ ಸಲ್ಲಿಸಿದ್ದರು. ಅವರ ಲ್ಲಿ 1,500 ಮಂದಿ ಭಾರತೀದಾಸನ್, ಅಳಗ ಪ್ಪನ್, ಆಣ್ಣಾಮಲೈ ವಿವಿಗಳಿಂದ ದೂರ ಶಿಕ್ಷಣ ದ ಮೂಲಕ ಎಂ.ಫಿಲ್ ಪಡೆದವರು.
ರಾಜ್ಯದ ಸಾಂಪ್ರದಾಯಿಕ ವಿವಿಗಳಲ್ಲಿ ಎಂ.ಫಿಲ್ ಪಡೆಯಲು ಎರಡು ವರ್ಷ ಅಧ್ಯಯನ ಮಾಡಬೇಕು. ಆದರೆ, ದೂರ
ಶಿಕ್ಷಣದಲ್ಲಿ ನೋಂದಾಯಿಸಿಕೊಂಡು ಎರಡು- ಮೂರು ತಿಂಗಳಿಗೆಲ್ಲ ಎಂ.ಫಿಲ್ ಪಡೆದಿದ್ದಾರೆ. ಇವೆಲ್ಲ ನಕಲಿ, ಅವುಗಳ ನೈಜತೆಯನ್ನು ದೃಢೀಕರಿಸಿಕೊಂಡಿಲ್ಲ. ಆದ್ದರಿಂದ ನೇಮಕಾತಿ ತಡೆದು, ನಮಗೆ ಅವಕಾಶ ನೀಡಬೇಕು ಎಂದು ಸಹಾಯಕ ಪ್ರಾಧ್ಯಾಪಕ ಹುದ್ದೆ ಸಿಗದ ನೊಂದ ಅಭ್ಯರ್ಥಿಗಳು ಕೆಎಟಿ ಮೊರೆ ಹೋಗಿದ್ದರು.
ಅಲ್ಲಿ ನ್ಯಾಯ ಸಿಗದಿದ್ದಾಗ ಹೈಕೋರ್ಟ್ ಮೊರೆ ಹೋಗಿದ್ದರು. ಅಲ್ಲಿಂದ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಲೇರಿತ್ತು. ರಾಜ್ಯ ವಿಧಾನ ಮಂಡಲದ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪವಾಗಿತ್ತು. ಆದರೆ, ಅಂದಿನ ಶಿಕ್ಷಣ ಸಚಿವರು ಯಾವುದೇ ಕ್ರಮ
ಕೈಗೊಳ್ಳಲಿಲ್ಲ. ಇವರಿಗೆಲ್ಲ 2010ರಲ್ಲಿ ಪ್ರೊಬೆಷನರಿ ಅವಧಿಕೂಡಘೋಷಣೆಯಾಗಿದೆ. ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕವಾದ ವರ ಎಂ.ಫಿಲ್ ಪ್ರಮಾಣಪತ್ರ ಪರಿಶೀಲಿಸು ವಂತೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅದರಂತೆ ಉನ್ನತ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಜೂ. 9ರಂದು ಕಾಲೇಜು ಶಿಕ್ಷಣ ಇಲಾಖೆಯ ಬೋಧಕ ವೃಂದದವರು ಹೊರ ರಾಜ್ಯಗಳ ವಿಶ್ವವಿದ್ಯಾಲಯಗಳಿಂದ ಪಡೆದ ఎం.ఫిలా, ಪ್ರಮಾಣಪತ್ರಗಳ ಸಿಂಧುತ್ವ ಪರಿಶೀಲಿಸುವಂತೆ ಸುತ್ತೋಲೆ ಕಳುಹಿಸಿದ್ದಾರೆ.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…