ಹೈದರಾಬಾದ (ಜ.27):ಎಟಿಎಂ ATM ದರೋಡೆಕೋರ ಮತ್ತು ಕೊಲೆಮಾಡಿ ಪರಾರಿ ಅಗಿದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸ ಇಲಾಖೆ ಅಧಿಕಾರಿಗಳು ದರೋಡೆಕೋರ ಡೀಟೇಲ್ಸ್ ಪತೆ ಹಚ್ಚಿದರೆ.
ಬೀದರ್ನಲ್ಲಿ 93 ಲಕ್ಷ ರು. ಎಟಿಎಂ ಹಣ ಲೂಟಿ ಮಾಡಿ ಪರಾರಿಯಾಗಿದ್ದ ಇಬ್ಬರು ಬಿಹಾರಿ ಡಕಾಯಿತರು ಮೊದಲು ಬಿಹಾರದ ಹಾಜಿಪುರದಿಂದ ಹೈದರಾಬಾದ್ವರೆಗೆ 1500 ಕಿ.ಮೀ.ನಷ್ಟು ಬೈಕ್ನಲ್ಲಿ ಸಂಚರಿಸಿ ಬಂದಿದ್ದರು ಎಂಬ ರೋಚಕ ಸಿಸಿಟೀವಿ ಸಾಕ್ಷ್ಯ ಲಭಿಸಿದೆ.
ನಂತರ ಅಲ್ಲಿಂದ ಕರ್ನಾಟಕದ ಬೀದರ್ನಲ್ಲಿಗೆ ಆಗಮಿಸಿ ಎಟಿಎಂಗೆ ಹಣ ತುಂಬಲು ಬಂದಿದ್ದ ಹಣವನ್ನು ಸಿನಿಮೀಯ ರೀತಿಯಲ್ಲಿ ಲೂಟಿ ಮಾಡಿದ್ದರು. ಬಳಿಕ ಹೈದರಾಬಾದ್ಗೆ ತೆರಳಿ ಅಲ್ಲಿ ಅಫ್ಜಲ್ಗಂಜ್ನಲ್ಲಿ ಕೊಲೆಗೆ ಯತ್ನಿಸಿ ಪರಾರಿ ಆಗಿದ್ದರು ಎಂದು ತಿಳಿದುಬಂದಿದೆ.
ಪರಿಚಯಸ್ಥರ ಬೈಕ್: ಬಿಹಾರದ ಹಾಜಿಪುರ ಜಿಲ್ಲೆಯವರಾದ ಇಬ್ಬರೂ ಆರೋಪಿಗಳು ಅಪರಾಧ ಎಸಗುವ ಒಂದು ತಿಂಗಳಿಗೂ ಮುನ್ನ ತಮ್ಮ ಪರಿಚಯಸ್ಥರಿಂದ ಬೈಕ್ ಪಡೆದುಕೊಂಡು ಹೈದರಾಬಾದ್ ವರೆಗೆ ಬರೋಬ್ಬರಿ 1.5 ಸಾವಿರ ಕಿ.ಮೀ. ಸಂಚರಿಸಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.
ಅಫ್ಜಲ್ಗಂಜ್ನಲ್ಲಿ ನಡೆದ ಕೊಲೆ ಯತ್ನದ ಬಳಿಕ ಆರೋಪಿಗಳ ಪತ್ತೆಗೆ ಸಿಸಿಟೀವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು ಈ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಬಸ್ ನಿಲ್ದಾಣವೊಂದರ ಬಳಿ ಬೈಕುಗಳನ್ನು ನಿಲ್ಲಿಸಿದ ಆರೋಪಿಗಳು ಟೋಕನ್ಗಾಗಿ ನಕಲಿ ಮೊಬೈಲ್ ಸಂಖ್ಯೆ ನೀಡಿದ್ದರು ಎಂದಿದ್ದಾರೆ.
ಈ ಬೈಕ್ ನಂಬರ್ ಆಧರಿಸಿ ಹಾಜಿಪುರದಲ್ಲಿದ್ದ ಬೈಕ್ ಮಾಲೀಕರ ಬಳಿ ಪೊಲೀಸರು ವಿಚಾರಿಸಿದಾಗ, ಅವರು ಅದನ್ನು ತಮ್ಮ ಸ್ನೇಹಿತನಿಗೆ ಒಂದು ತಿಂಗಳ ಮಟ್ಟಿಗೆ ನೀಡಿದ್ದಾಗಿ ತಿಳಿಸಿದ್ದಾರೆ. ಆದರೆ ಅವರಿಗೆ ತಮ್ಮ ಬೈಕ್ ಅಪರಾಧ ಕೃತ್ಯಕ್ಕೆ ಬಳೆಕೆಯಾದ ಬಗ್ಗೆ ಅರಿವಿರಲಿಲ್ಲ ಎಂದು ಹೇಳಿದ್ದಾರೆ.
ತನಿಖೆ ಮುಖಾಂತರ ರಹಸ್ಯ ಮಾಹಿತಿ ಲಭೇವಾಗಿದೆ..
ತನಿಖೆ ವೇಳೆ, ಇಬ್ಬರು ಆರೋಪಿಗಳು ಬಿಹಾರ ಹಾಗೂ ಉತ್ತರಪ್ರದೇಶಗಳಲ್ಲೂ ದರೋಡೆ ಹಾಗೂ ಕೊಲೆ ಪ್ರಕರಣದಲ್ಲಿ ತೊಡಗಿದ್ದರು ಎಂದೂ ತಿಳಿದುಬಂದಿದೆ.
ಡಕಾಯಿತರ ಬೈಕ್ ಯಾನ
– ಮೊದಲು ಬಿಹಾರದ ಹಾಜಿಪುರದಿಂದ ಹೈದರಾಬಾದ್ವರೆಗೆ ಪ್ರಯಾಣ
– ಹೈದರಾಬಾದ್ವರೆಗಿನ 1500 ಕಿ.ಮೀ. ಬೈಕ್ ಯಾನದ ಸಿಸಿಟೀವಿ ಸಾಕ್ಷ್ಯ ಲಭ್ಯ
– ನಂತರ ಅಲ್ಲಿಂದ ಬೀದರ್ಗೆ ಬಂದು, ಬೈಕಲ್ಲೇ ಹೈದರಾಬಾದ್ಗೆ ಪರಾರಿ
– ಸಿಸಿಟಿವಿ ದೃಶ್ಯ ಪರಿಶೀಲನೆ ವೇಳೆ ದರೋಡೆಕೋರರ ಸಂಚಾರ ಪತ್ತೆ
Source: Suvarna News
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…