ಎಟಿಎಂ ATM ದರೋಡೆಕೋರರು : 1500 ಕಿ.ಮೀ. ಬೈಕ್‌ನಲ್ಲಿ ಸಂಚರಿಸಿ ಬೀದರ ಬಂದಿದ್ದರು

ಹೈದರಾಬಾದ (ಜ.27):ಎಟಿಎಂ ATM ದರೋಡೆಕೋರ ಮತ್ತು ಕೊಲೆಮಾಡಿ ಪರಾರಿ ಅಗಿದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸ ಇಲಾಖೆ ಅಧಿಕಾರಿಗಳು ದರೋಡೆಕೋರ ಡೀಟೇಲ್ಸ್ ಪತೆ ಹಚ್ಚಿದರೆ.

ಬೀದರ್‌ನಲ್ಲಿ 93 ಲಕ್ಷ ರು. ಎಟಿಎಂ ಹಣ ಲೂಟಿ ಮಾಡಿ ಪರಾರಿಯಾಗಿದ್ದ ಇಬ್ಬರು ಬಿಹಾರಿ ಡಕಾಯಿತರು ಮೊದಲು ಬಿಹಾರದ ಹಾಜಿಪುರದಿಂದ ಹೈದರಾಬಾದ್‌ವರೆಗೆ 1500 ಕಿ.ಮೀ.ನಷ್ಟು ಬೈಕ್‌ನಲ್ಲಿ ಸಂಚರಿಸಿ ಬಂದಿದ್ದರು ಎಂಬ ರೋಚಕ ಸಿಸಿಟೀವಿ ಸಾಕ್ಷ್ಯ ಲಭಿಸಿದೆ.

ನಂತರ ಅಲ್ಲಿಂದ ಕರ್ನಾಟಕದ ಬೀದರ್‌ನಲ್ಲಿಗೆ ಆಗಮಿಸಿ ಎಟಿಎಂಗೆ ಹಣ ತುಂಬಲು ಬಂದಿದ್ದ ಹಣವನ್ನು ಸಿನಿಮೀಯ ರೀತಿಯಲ್ಲಿ ಲೂಟಿ ಮಾಡಿದ್ದರು. ಬಳಿಕ ಹೈದರಾಬಾದ್‌ಗೆ ತೆರಳಿ ಅಲ್ಲಿ ಅಫ್ಜಲ್‌ಗಂಜ್‌ನಲ್ಲಿ ಕೊಲೆಗೆ ಯತ್ನಿಸಿ ಪರಾರಿ ಆಗಿದ್ದರು ಎಂದು ತಿಳಿದುಬಂದಿದೆ.

ಪರಿಚಯಸ್ಥರ ಬೈಕ್: ಬಿಹಾರದ ಹಾಜಿಪುರ ಜಿಲ್ಲೆಯವರಾದ ಇಬ್ಬರೂ ಆರೋಪಿಗಳು ಅಪರಾಧ ಎಸಗುವ ಒಂದು ತಿಂಗಳಿಗೂ ಮುನ್ನ ತಮ್ಮ ಪರಿಚಯಸ್ಥರಿಂದ ಬೈಕ್‌ ಪಡೆದುಕೊಂಡು ಹೈದರಾಬಾದ್‌ ವರೆಗೆ ಬರೋಬ್ಬರಿ 1.5 ಸಾವಿರ ಕಿ.ಮೀ. ಸಂಚರಿಸಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಅಫ್ಜಲ್‌ಗಂಜ್‌ನಲ್ಲಿ ನಡೆದ ಕೊಲೆ ಯತ್ನದ ಬಳಿಕ ಆರೋಪಿಗಳ ಪತ್ತೆಗೆ ಸಿಸಿಟೀವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು ಈ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಬಸ್‌ ನಿಲ್ದಾಣವೊಂದರ ಬಳಿ ಬೈಕುಗಳನ್ನು ನಿಲ್ಲಿಸಿದ ಆರೋಪಿಗಳು ಟೋಕನ್‌ಗಾಗಿ ನಕಲಿ ಮೊಬೈಲ್‌ ಸಂಖ್ಯೆ ನೀಡಿದ್ದರು ಎಂದಿದ್ದಾರೆ.

ಈ ಬೈಕ್‌ ನಂಬರ್‌ ಆಧರಿಸಿ ಹಾಜಿಪುರದಲ್ಲಿದ್ದ ಬೈಕ್‌ ಮಾಲೀಕರ ಬಳಿ ಪೊಲೀಸರು ವಿಚಾರಿಸಿದಾಗ, ಅವರು ಅದನ್ನು ತಮ್ಮ ಸ್ನೇಹಿತನಿಗೆ ಒಂದು ತಿಂಗಳ ಮಟ್ಟಿಗೆ ನೀಡಿದ್ದಾಗಿ ತಿಳಿಸಿದ್ದಾರೆ. ಆದರೆ ಅವರಿಗೆ ತಮ್ಮ ಬೈಕ್‌ ಅಪರಾಧ ಕೃತ್ಯಕ್ಕೆ ಬಳೆಕೆಯಾದ ಬಗ್ಗೆ ಅರಿವಿರಲಿಲ್ಲ ಎಂದು ಹೇಳಿದ್ದಾರೆ.

ತನಿಖೆ ಮುಖಾಂತರ ರಹಸ್ಯ ಮಾಹಿತಿ ಲಭೇವಾಗಿದೆ..

ತನಿಖೆ ವೇಳೆ, ಇಬ್ಬರು ಆರೋಪಿಗಳು ಬಿಹಾರ ಹಾಗೂ ಉತ್ತರಪ್ರದೇಶಗಳಲ್ಲೂ ದರೋಡೆ ಹಾಗೂ ಕೊಲೆ ಪ್ರಕರಣದಲ್ಲಿ ತೊಡಗಿದ್ದರು ಎಂದೂ ತಿಳಿದುಬಂದಿದೆ.

ಡಕಾಯಿತರ ಬೈಕ್‌ ಯಾನ
– ಮೊದಲು ಬಿಹಾರದ ಹಾಜಿಪುರದಿಂದ ಹೈದರಾಬಾದ್‌ವರೆಗೆ ಪ್ರಯಾಣ
– ಹೈದರಾಬಾದ್‌ವರೆಗಿನ 1500 ಕಿ.ಮೀ. ಬೈಕ್‌ ಯಾನದ ಸಿಸಿಟೀವಿ ಸಾಕ್ಷ್ಯ ಲಭ್ಯ
– ನಂತರ ಅಲ್ಲಿಂದ ಬೀದರ್‌ಗೆ ಬಂದು, ಬೈಕಲ್ಲೇ ಹೈದರಾಬಾದ್‌ಗೆ ಪರಾರಿ
– ಸಿಸಿಟಿವಿ ದೃಶ್ಯ ಪರಿಶೀಲನೆ ವೇಳೆ ದರೋಡೆಕೋರರ ಸಂಚಾರ ಪತ್ತೆ

Source: Suvarna News

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

1 hour ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

1 hour ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

1 hour ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

2 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

2 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

4 hours ago