12/06/2025 5:26 PM

Translate Language

Home » ಲೈವ್ ನ್ಯೂಸ್ » ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ಹೊಸ ಕಾರ್ಯಾಚರಣೆ, ನಿರ್ವಹಣೆ ನೀತಿಯನ್ನು*

ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ಹೊಸ ಕಾರ್ಯಾಚರಣೆ, ನಿರ್ವಹಣೆ ನೀತಿಯನ್ನು*

Facebook
X
WhatsApp
Telegram

*ಅಳವಡಿಸಿಕೊಳ್ಳಬೇಕು-ರಾಮಲಿಂಗಪ್ಪ ಡಿ.ಬಿರಾದಾರ್


ಬೀದರ.21. ಮಾರ್ಚ.25:- ಜಿಲ್ಲೆಯಲ್ಲಿ ಈಗಾಗಲೇ ಜಲ ಜೀವನ ಮಿಷನ್ ಯೋಜನೆಯ ಅನುಷ್ಠಾನಗೊಳಿಸಲಗುತ್ತಿದ್ದು 75% ಕಾಮಗಾರಿಗಳು ಪೂರ್ಣಗೊಂಡು ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಲಾಗಿದೆ.

ಮುಂದಿನ ದಿನಗಳಲ್ಲಿ ಸದರಿ ಕಾಮಗಾರಿಗಳ ಸುಸ್ಥಿರತೆಗೆ  ಗ್ರಾಮ ಪಂಚಾಯತಿ ವತಿಯಿಂದ  ಪರಿಣಾಮಕಾರಿಯಾಗಿ ಯೋಜನೆಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯಾಗಿದ್ದಲಿ ಮಾತ್ರ ಯೋಜನೆಯು ಯಶಸ್ವಿಗೊಳ್ಳುತ್ತದೆ, ಆದ್ದರಿಂದ ಎಲ್ಲಾ ಗ್ರಾಮ ಪಂಚಾಯತಿಗಳಲಿ ಈ ಹೊಸ ಕಾರ್ಯಚರಣೆ ಮತ್ತು ನಿರ್ವಹಣೆಯ ನೀತಿಯನ್ನು ಅಳವಡಿಸಿಕೊಳ್ಳಬೇಕೆಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ರಾಮಲಿಂಗಪ್ಪ ಡಿ. ಬಿರಾದರ ತಿಳಿಸಿದರು.

 
ಅವರು ಶುಕ್ರವಾರ ಜಿಲ್ಲಾ ಪಂಚಾಯತ ಬೀದರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಬೀದರ ವತಿಯಿಂದ ಗ್ರಾಮೀಣ ಕುಡಿಯುವ ನೀರು ಯೋಜನೆಗಳ ಕಾರ್ಯಚರಣೆ ಮತ್ತು ನಿರ್ವಹಣೆ ನೀತಿ ಕುರಿತು, ಹಾಗೂ ಎಸ್.ಬಿ.ಎಂ.ಜಿ ಯೋಜನೆಯ ಓ.ಡಿ.ಏಫ್. ಮಾದರಿ ಗ್ರಾಮ ಘೋಷಣೆ ಹಾಗೂ ಕರ್ನಾಟಕ ಸುಸ್ಥಿರ ಕುಡಿಯುವ ನೀರು ಸರಬರಾಜು ಯೋಜನೆಯ ಕುರಿತು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಈ ತರಬೇತಿಗೆ ಸಂಪನ್ಮೂಲ ವ್ಯಕ್ತಿಗಳಾಗಿ ರಾಜ್ಯ ಮಟ್ಟದಲ್ಲಿ ತರಬೇತಿ ಪಡೆದ ಮಾಸ್ಟರ್ ಟ್ರೇನರ್‍ಗಳಾದ ಶರತಕುಮಾರ ಆಭಿಮಾನ (ಪಿಡಿಓ) ಹಾಗೂ ಅರ್ಜುನ್ (ಎಇ) ರವರು ಗ್ರಾಮೀಣ ಕುಡಿಯುವ ನೀರು ಯೋಜನೆಗಳ ಕಾರ್ಯಚರಣೆ ಮತ್ತು ನಿರ್ವಹಣೆ ನೀತಿ ಕುರಿತು, ಸಂಕ್ಷಿಪ್ತವಾದ ಮಾಹಿತಿಯನ್ನು ಶಿಬಿರಾರ್ಥಿಗಳಿಗೆ ತಿಳಿಸಿದರು.  


ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಾಗೂ ಉಪ ವಿಭಾಗದAEE,AE,JE, DTSU Staff, RDWD Division Staff, WQMSP Staff  ಸೇರಿದಂತೆ ಇತರರು ಉಪಸ್ಥಿತರಿದ್ದರು.


ಸದರಿ ತರಬೇತಿ ಕಾರ್ಯಕ್ರಮವನ್ನು ಪೇತ್ರು .ಜೆ. ಜಿಲ್ಲಾ ಯೋಜನಾ ವ್ಯವಸ್ಥಾಪಕರು ಜಲ್ ಜೀವನ ಮಿಷನ್ ಯೋಜನೆ ಅವರು ನಿರೂಪಿಸಿದರು.  

Source: PrajaPrabhat Sudhi

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!