ಬೆಂಗಳೂರು.06.ಜೂನ್.25:- ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರಾರ್ಥನೆ ಸಮಯದಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಭಾರತ ಸಂವಿಧಾನದ ಪೀಠಿಕೆಯನ್ನು ವಿದ್ಯಾರ್ಥಿಗಳು ಪ್ರತಿ ದಿನ ಶಾಲಾ ಪ್ರಾರ್ಥನೆಯ ಸಮಯದಲ್ಲಿ ಓದಲು ಕ್ರಮವಹಿಸುವಂತೆ ಮತ್ತು ಭಾರತದ ಸಂವಿಧಾನದ ಪೀಠಿಕೆಯನ್ನು ಎಲ್ಲಾ ಶಾಲೆಗಳಲ್ಲಿ ಪ್ರದರ್ಶಿಸುವಂತೆ ಕ್ರಮವಹಿಸಲು ಈಗಾಗಲೇ ಉಲ್ಲೇಖ (1), (2) ರ ಸರ್ಕಾರದ ಆದೇಶದನ್ವಯ ಉಲ್ಲೇಖ (3) ರಂತೆ ಸುತ್ತೋಲೆಗಳನ್ನು ಈ ಕಛೇರಿಯಿಂದ ಹೊರಡಿಸಲಾಗಿದೆ.ಈ ಕೆಳಗಿನಂತೆ ಕ್ರಮವಹಿಸಲು ಸದರಿ ಸುತ್ತೋಲೆಯಲ್ಲಿ ತಿಳಿಸಲಾಗಿರುತ್ತದೆ:
ಉಲ್ಲೇಖ 1 ಮತ್ತು 2 ರ ಆದೇಶಗಳಂತೆ ರಾಜ್ಯದ ಈ ಇಲಾಖೆಯ ಎಲ್ಲಾ ಅಧೀನ ಕಛೇರಿಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ಭಾರತ ಸಂವಿಧಾನ ಪೀಠಿಕೆಯ ಭಾವಚಿತ್ರವನ್ನು ಎದ್ದು ಕಾಣುವಂತೆ ಅನುಬಂಧದಲ್ಲಿ ನಮೂದಿಸಿರುವಂತೆ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪ್ರದರ್ಶಿಸುವುದು.
ಭಾರತ ಸಂವಿಧಾನ ಪೀಠಿಕೆಯನ್ನು ಪ್ರತಿ ನಿತ್ಯ ವಿದ್ಯಾರ್ಥಿಗಳು ಶಾಲಾ ಪ್ರಾರ್ಥನ //Assembly ಸಮಯದಲ್ಲಿ ಕಡ್ಡಾಯವಾಗಿ ಓದಲು ಅಗತ್ಯ ಕ್ರಮವಹಿಸುವುದು. ಸರದಿಯಂತ ಪ್ರತಿ ದಿನ ಒಬ್ಬ ವಿದ್ಯಾರ್ಥಿ / ವಿದ್ಯಾರ್ಥಿನಿ ಇದರ ಮುಂದಾಳತ್ವವನ್ನು ವಹಿಸುವುದು ಹಾಗೂ ಉಳಿದವರು ಪುನರುಚ್ಚರಿಸುವುದು.
ಭಾರತ ಸಂವಿಧಾನದ ಪೀಠಿಕೆ ಆಶಯಗಳನ್ನು ವಿದ್ಯಾರ್ಥಿಗಳು ಗ್ರಹಿಸಲು ಪೂರಕವಾದ ಅವಕಾಶಗಳನ್ನು ಶಾಲಾ ಕಲಿಕೆಯಲ್ಲಿ ಒದಗಿಸುವುದು. ಅದಕ್ಕಾಗಿ ಸಂವಿಧಾನದ ಪೀಠಿಕೆಯಲ್ಲಿ ಪ್ರಸ್ತಾಪಿಸಲ್ಪಟ್ಟ ಅಂಶಗಳ ಮೇಲೆ ಧನಾತ್ಮಕ ಸಂವಾದ, ಚರ್ಚೆ, ಪ್ರಬಂಧ ರಚನೆ, ಚಿತ್ರಕಲಾ ಪ್ರದರ್ಶನ, ಹಾಡುಗಳು, ಮತ್ತಿತರೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು. ಈ ಹಿನ್ನಲೆಯಲ್ಲಿ 2025-26ನೇ ಸಾಲಿನಲ್ಲಿಯೂ ಉಲ್ಲೇಖ (1), (2) ಮತ್ತು (3) ರಲ್ಲಿನ ಸುತ್ತೋಲೆಗಳಲ್ಲಿ ತಿಳಿಸಿರುವಂತೆ ಭಾರತ ಸಂವಿಧಾನ ಪೀಠಿಕೆಯನ್ನು ವಿದ್ಯಾರ್ಥಿಗಳು ಪ್ರತಿ ದಿನ ಶಾಲಾ ಪ್ರಾರ್ಥನೆಯ ಸಮಯದಲ್ಲಿ ಓದಲು ಕ್ರಮವಹಿಸುವಂತೆ ಮತ್ತು ಭಾರತದ ಸಂವಿಧಾನದ ಪೀಠಿಕೆಯನ್ನು ಎಲ್ಲಾ ಶಾಲೆಗಳಲ್ಲಿ ಪ್ರದರ್ಶಿಸುವಂತೆ ಮತ್ತು ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತಿಳಿಸಲಾಗಿದೆ.
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…