ಬೀದರ.17.ಜನವರಿ.25.ಇಂದು ಬೀದರ್ನಲ್ಲಿ ನಡೆದ ಎಸಬಿಐ ಬ್ಯಾಂಕ್ ದರೋಡೆ ದಾಳಿಯಲ್ಲಿ ಗಿರಿ ವೆಂಕಟೇಶ್ ಎಂಬ ಭದ್ರತಾ ಸಿಬ್ಬಂದಿ ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದು, ಶಿವಕುಮಾರ್ ಎಂಬ ಮತ್ತೊಬ್ಬ ಭದ್ರತಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡು ಹೈದ್ರಾಬಾದ್ನ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅರಣ್ಯ, ಪರಿಸರ ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಈಶ್ವರ ಖಂಡ್ರೆ ಅವರು ಇಂದು ರಾತ್ರಿ ಸುಮಾರು 9 ಗಂಟೆಗೆ ಬೆಂಗಳೂರಿನಿಂದ ಹೈದ್ರಾಬಾದ್ಗೆ ಆಗಮಿಸಿ, ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಶಿವಕುಮಾರ್ ಅವರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ನಂತರ, ಚಿಕಿತ್ಸೆಯ ಕುರಿತು ವೈದ್ಯರೊಂದಿಗೆ ಸುದೀರ್ಘ ಮಾತುಕತೆ ನಡೆಸಿ, ಚಿಕಿತ್ಸೆ ವೆಚ್ಚದ ಬಗ್ಗೆ ಯಾವುದೇ ಚಿಂತೆ ಮಾಡಬೇಡಿ ಎಂದು ಆಶ್ವಾಸನೆ ನೀಡಿದರು. ಶಿವಕುಮಾರ್ ಅವರಿಗೆ ಉತ್ತಮ ರೀತಿಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಮನವಿ ಮಾಡಿದರು ಮತ್ತು ಅವರ ಆರೋಗ್ಯದ ಸ್ಥಿತಿಗತಿಯನ್ನು ವಿವರವಾಗಿ ವಿಚಾರಿಸಿದರು.
ವೈದ್ಯರು ಶಿವಕುಮಾರ್ ಶೀಘ್ರ ಗುಣಮುಖರಾಗುವ ಬಗ್ಗೆ ಭರವಸೆ ನೀಡಿದ್ದಾರೆ. ಈ ದುರಂತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ ಸಚಿವ ಈಶ್ವರ ಖಂಡ್ರೆ, ದುರಂತಕ್ಕೆ ಕಾರಣವಾದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಗಾಯಾಳು ಮತ್ತು ಮೃತರ ಕುಟುಂಬಗಳಿಗೆ ಅಗತ್ಯ ಸಕಾಲಿಕ ನೆರವು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಪುನರುಚ್ಚಸಿದರು.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…