ಬೀದರ್: ೨೦೨೪-೨೫ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ನಗರದ ಮಾಮನಕೇರದಲ್ಲಿರುವ ಜ್ಞಾನಸುಧಾ ವಿದ್ಯಾಲಯದ ಜ್ಞಾನರಂಗ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ಸಮಾರಂಭದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಪೂರ್ಣಿಮಾ ಜಿ. ಹಾಗೂ ಜ್ಞಾನಸುಧಾ ವಿದ್ಯಾಲಯದ ನಿರ್ದೇಶಕರಾದ ಡಾ. ಮುನೇಶ್ವರ ಲಾಖಾ ಅವರು ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆಗೈದ ವಿದ್ಯಾರ್ಥಿಗಳಿಗೆ ಆತ್ಮೀಯವಾಗಿ ಸನ್ಮಾನಿಸಿ, ಪ್ರೋತ್ಸಾಹಿಸಿದರು.
ಸಮಾರಂಭದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಪೂರ್ಣಿಮಾ ಜಿ. ಅವರು ಮಾತನಾಡಿ, ‘ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಮ್ಮ ವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ನಮ್ಮ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುತ್ತಿರುವ ಕಾರಣ, ಶಿಕ್ಷಕರ ಪರಿಶ್ರಮ ಹಾಗೂ ಪಾಲಕರ ಸಹಕಾರದಿಂದಾಗಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಲು ಸಾಧ್ಯವಾಗಿದೆ’ ಎಂದು ಮೆಚ್ಚಿಗೆ ವ್ಯಕ್ತಪಡಿಸಿದರು.
‘ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳು ಮುಂದೆ ತಮಗೆ ಆಸಕ್ತಿ ಇರುವ ಕೋರ್ಸ್ನಲ್ಲಿ ಪ್ರವೇಶ ಪಡೆದು ಸರಿಯಾಗಿ ವ್ಯಾಸಂಗ ಮಾಡಿ ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು’ ಎಂದು ಸಲಹೆ ಮಾಡಿದರು.
ಜ್ಞಾನಸುಧಾ ವಿದ್ಯಾಲಯದ ನಿರ್ದೇಶಕರಾದ ಡಾ.ಮುನೇಶ್ವರ ಲಾಖಾ ಅವರು ಮಾತನಾಡಿ, ‘ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಮ್ಮ ಜ್ಞಾನಸುಧಾ ವಿದ್ಯಾಲಯದ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಹೆಚ್ಚಿನ ವಿದ್ಯಾರ್ಥಿಗಳೇ ಅಗ್ರಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು ವಿಶೇಷವಾಗಿದೆ’ ಎಂದು ಹೇಳಿದರು.
‘ವಿದ್ಯಾರ್ಥಿಗಳು ಉತ್ತಮ ಶೈಕ್ಷಣಿಕ ವಾತಾವರಣ ಹೊಂದಿರುವ, ಒಳ್ಳೆಯ ರೀತಿಯಿಂದ ಮಾರ್ಗದರ್ಶ ಕಲ್ಪಿಸುವ ಪದವಿಪೂರ್ವ ಕಾಲೇಜಿನಲ್ಲಿ ಪ್ರವೇಶ ಪಡೆದಾಗ ಮಾತ್ರ ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.
ಜ್ಞಾನಸುಧಾ ವಿದ್ಯಾಲಯದ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಶಾಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದ ಶಿವಕುಮಾರ ವೀರಶೆಟ್ಟಿ ಸನ್ಮಾನ ಸ್ವೀಕರಿಸಿ ಮಾತನಾಡಿ, ‘ಜ್ಞಾನಸುಧಾ ವಿದ್ಯಾಲಯದಲ್ಲಿ ಗುಣಮಟ್ಟ ಶಿಕ್ಷಣ ನೀಡಿದ ಕಾರಣ ಪರೀಕ್ಷೆಯಲ್ಲಿ ನನಗೆ ಉತ್ತಮ ಅಂಕ ಪಡೆಯಲು ಸಾಧ್ಯವಾಗಿದೆ’ ಎಂದು ತಿಳಿಸಿದರು.
ಸನ್ಮಾನ ಸ್ವೀಕರಿಸಿದ ವೈಭವ್ ಶಿವಕುಮಾರ, ಸಂಗಮೇಶ್ ಮಹೇಶ್, ರುಚಿ ಚಂದ್ರಪಾಲ್, ಶಾಂಭವಿ ರಾಜಕುಮಾರ, ಶ್ರದ್ಧಾ ಶಿವಶೆಟ್ಟಿ ಅವರು ಮಾತನಾಡಿ ತಮ್ಮ ಅಭಿಪ್ರಾಯ ತಿಳಿಸಿದರು.
ವಿದ್ಯಾರ್ಥಿಗಳಾದ ಪ್ರಜ್ವಲ್ ಶಾಲಿವಾನ್, ಸಾಯಿಸ್ವರೂಪ್ ಶಿವಕುಮಾರ, ಮಹಮ್ಮದ್ ರಿಹಾನ್ ರಾಯಿಸ್ ಅಹೆಮದ್, ಸಾಯಿಸಾಧನಾ ಸಂತೋಷ್ ರೆಡ್ಡಿ, ವೈಷ್ಣವಿ ಶಿವರಾಜ, ಕೃಷ್ಣರೆಡ್ಡಿ ರಾಜರೆಡ್ಡಿ, ಅಕ್ಷರಾ ಮಲ್ಲಿಕಾರ್ಜುನ ಅವರನ್ನು ಸನ್ಮಾನಿಸಲಾಯಿತು.
ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಸುಜಾತಾ ಬೊಮ್ಮಾರೆಡ್ಡಿ, ಜ್ಞಾನಸುಧಾ ವಿದ್ಯಾಲಯದ ಪ್ರಾಚಾರ್ಯರಾದ ಸುನೀತಾ ಸ್ವಾಮಿ, ಉಪಪ್ರಾಚಾರ್ಯರಾದ ಕಲ್ಪನಾ ಮೋದಿ, ಮೇಲ್ವಿಚಾರಕರಾದ ರಜನಿ, ಸಾಯಿಗೀತಾ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಪಾಲ್ಗೊಂಡಿದ್ದರು.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…