ಎಸ್ಸಿ ಎಸ್ಟಿ ಸಭೆಯಲ್ಲಿ ಕುಂತೂರು ಗ್ರಾಮದಲ್ಲಿರುವ ದೇವಾಲಯಕ್ಕೆ ದಲಿತರು ಪ್ರವೇಶವಿಲ್ಲ ಎಂಬ ದೂರು

ಚಾಮರಾಜನಗರ.22.ಏಪ್ರಿಲ್.25:-ಯಳಂದೂರು:ಪಟ್ಟಣ ಪೋಲೀಸ್ ಠಾಣೆಯ ಆವರಣದಲ್ಲಿ ಮಂಗಳವಾರ   ಚಾಮರಾಜನಗರ ಜಿಲ್ಲಾ ಪೋಲೀಸ್,  ಕೊಳ್ಳೇಗಾಲ ಉಪವಿಭಾಗ ಯಳಂದೂರು ವೃತ್ತ, ಯಳಂದೂರು ಪೋಲೀಸ್ ಠಾಣೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನ ಸಂಪರ್ಕ ಸಭೆಯನ್ನು ನಡೆಸಲಾಯಿತು.
ಎಸ್ಸಿ ಎಸ್ಟಿ ಸಮುದಾಯದ ಮುಖಂಡರುಗಳು ಸಮಸ್ಯೆಗಳನ್ನು ದೂರಿದರು.

ತಾಲ್ಲೂಕಿನ ಕೆಲ ಗ್ರಾಮದಲ್ಲಿ  ಎಸ್ಸಿ ಎಸ್ಟಿ ಸಮುದಾಯದವರಿಗೆ ಸ್ಮಶಾನ ಇಲ್ಲ ದಯವಿಟ್ಟು ಅದರ ಬಗ್ಗೆ ತಹಶೀಲ್ದಾರ್ ರವರೆಗೆ, ಸಮಾಜ ಕಲ್ಯಾಣ ಇಲಾಖೆಯ ಗಮನಕ್ಕೆ  ತಿಳಿಸಿ.ಕಂದಹಳ್ಳಿ ಗ್ರಾಮದಲ್ಲಿ ಎಸ್ಸಿ ಎಸ್ಟಿ ಸಮುದಾಯದವರ ಮನೆ ಮುಂದೆ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದೆ ಮನೆ ಕಳೆದುಕೊಂಡಿರು  ನಿರಾಶ್ರಿತರಿಗೆ ನೀಡುವ ಪರಿಹಾರದಲ್ಲಿ ಎಸ್ಸಿ ಎಸ್ಟಿಗಳಿಗೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಕಂದಹಳ್ಳಿ ನಾರಾಯಣ ದೂರಿದರು.

ಆಲ್ಕೆರೆ ಅಗ್ರಹಾರ ರಂಗಸ್ವಾಮಿ ಮಾತನಾಡಿ ವಾಲ್ಮೀಕಿ ಸಮುದಾಯ ಭವನದ ಮುಂಭಾಗ ನಿರುಪಯುಕ್ತವಾಗಿರು ಶೌಚಾಲಯವು ಕುಡುಕರತಾಣವಾಗಿದೆ ಇದರಿಂದ ಸಮಸ್ಯೆಯಾಗಿದೆ ಈ ಕಟ್ಟಡವನ್ನು ತೆರವುಗೊಳಿಸಬೇಕಾಗಿದೆ ಈ ಕಟ್ಟಡ ತೆರವುಗೊಳಿಸುವುದಕ್ಕೆ ಕೆಲ ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ.

ಭೀಮಪ್ಪ ಮಾತನಾಡಿ ಬಿ ಖಾತೆ ಸರಿಯಾದ ಸಮಯಕ್ಕೆ ಆಗುತ್ತಿಲ್ಲ ಮುಖ್ಯಾಧಿಕಾರಿ ಯಾವಾಗಲೂ ಹನೂರು ಕಡೆನೇ ಹೆಚ್ಚು ಒಲವು ತೋರಿಸುತ್ತಿದ್ದಾರೆ. ಬಸ್ ನಿಲ್ದಾಣದಲ್ಲಿ ಅಕ್ರಮ ಮದ್ಯಮಾರಾಟಗಾರರ ಸಂಖ್ಯೆ ಹೆಚ್ಚಾಗಿದೆ‌ ಎಂದರು.

ಕಂದಹಳ್ಳಿ ಗ್ರಾಮದ ಮುಂಭಾಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಯಾವುದೇ ಚರಂಡಿಗಳನ್ನು ಮಾಡದೆ ಅನೈರ್ಮಲ್ಯ ಸೃಷ್ಟಿಮಾಡಿದ್ದಾರೆ.

ಬಳೇಪೇಟೆಯ ಸರ್ಕಲ್ ನಲ್ಲಿ ಕುಡುಕರಹಾವಳಿಯಾಗಿದೆ‌ ಇದರಿಂದ ಇಲ್ಲಿರುವ ದಲಿತರಿಗೆ ಮಾನಸಿಕವಾಗಿ ಕಿರಿಕಿರಿಯಾಗುತ್ತದೆ ಎಂದು ಮಲ್ಲಿಕಾರ್ಜುನ ದೂರಿದರು.

ಅಕ್ರಮ ಮದ್ಯ ಮಾರಾಟ ನಿಲ್ಲಿಸಿ ಪೋಲೀಸ್ ಠಾಣೆಯ ಮುಂಭಾಗನೇ ರಾಜರೋಷವಾಗಿ ಬೈಕ್ ನಲ್ಲಿ ಮದ್ಯವನ್ನು ಸಾಗಿಸುತ್ತಿದ್ದಾರೆ ಎಂದು ಕೆಸ್ತೂರು ಸಿದ್ದರಾಜು ತಿಳಿಸಿದರು.

ಮದ್ದೂರು ಬೈಪಾಸ್ ನಲ್ಲಿ ಅಪಘಾತಗಳು ಹೆಚ್ಚಾಗುತ್ತದೆ ಪಕ್ಕದಲ್ಲಿಯೇ ಶಾಲೆಗಳಿವೆ  ಇಲ್ಲಿ ರಸ್ತೆಯ ಮೇಲೆ ದುಬ್ಬ ಹಾಕಿಸಿ ಎಂದು ಮದ್ದೂರು ಸುರೇಶ್ ತಿಳಿಸಿದರು.

ಕುಂತೂರು ಗ್ರಾಮದಲ್ಲಿ ಕುಂತೂರು ಮಾರಮ್ಮನ ದೇವಾಲಯ ಪ್ರವೇಶಕ್ಕೆ ಅವಕಾಶವಿಲ್ಲ ಈ ದೇವಾಲಯ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿದರು ಕೂಡ ಅಸಮಾನತೆ ಇದೆ ಹಾಗೂ ದಲಿತರಿಗೆ ಕಂಡಾಯವನ್ನು ಆ ಗ್ರಾಮದ ಮೇಲ್ವರ್ಗದವರು ನೀಡುತ್ತಿಲ್ಲ ಈ ಸಂಬಂಧ ಅನೇಕ ಬಾರಿ ಮಾಂಬಳ್ಳಿ ಪೋಲೀಸ್ ಠಾಣೆಗೆ ದೂರು ನೀಡಿದರು ಸ್ಪಂದಿಸುತ್ತಿಲ್ಲವೆಂದು ಚಿನ್ನಸ್ವಾಮಿ ದೂರಿದರು.
ಕುಣಗಳ್ಳಿಯಲ್ಲಿ ಶಾಲೆಯ ಮುಂದೆಯ ಎಂಬುವರು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆಂದು ದೂರಿದರು.
ಯಳಂದೂರು ಗೌತಮ್ ಬಡಾವಣೆಯೊಳಗೆ ಬಹಿಷ್ಕಾರದ ಬಗ್ಗೆ ದೂರು ನೀಡಿದರು.
ಇನ್ನೂ ಅನೇಕ ದೂರುಗಳನ್ನು ಸಾರ್ವಜನಿಕರು ತಿಳಿಸಿದರು.
ಸರ್ಕಲ್ ಇನ್ಸ್ಪೆಕ್ಟರ್ ಶ್ರೀಕಾಂತ್ ಮಾತನಾಡಿ ಈ ಎಲ್ಲಾ ಸಮಸ್ಯೆಗಳನ್ನು ಪರಿಗಣಿಸಿ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳುತ್ತೇವೆ. ಯಾವುದೇ ಸಮಸ್ಯೆಗಳಿದ್ದರು 112 ಗೂ ಕರೆ ಮಾಡಿ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿ ಸಮಸ್ಯೆಯನ್ನು ಬಗೆಹರಿಸುತ್ತೇವೆಂದು ತಿಳಿಸಿದರು
ಪೋಲೀಸ್ ಮತ್ತು  ಸಾರ್ವಜನಿಕರ ನಡುವೆ ಒಳ್ಳೆಯ ಅಭಿಪ್ರಾಯವಿರಬೇಕು. ನಿಮ್ಮೇಲ್ಲರ ಹಿತವೇ ಪೋಲೀಸ್ ಇಲಾಖೆಯ ಉದ್ದೇಶವಾಗಿದೆ.

ಈ ಸಂದರ್ಭದಲ್ಲಿ ಪೋಲೀಸ್ ಇನ್ಸ್ಪೆಕ್ಟರ್  ಆಕಾಶ್, ಅಗರ ಪೋಲೀಸ್ ಠಾಣೆಯ ಪಿ ಎಸ್ ಐ ಉಮಾವತಿ, ಮುಖಂಡರಾದ ವಡಗೆರೆ ದಾಸ್, ಬಿ ನಾಗರಾಜು, ನಾಗಣ್ಣ, ರಾಜೇಶ್,  ಎಸ್ಟಿ ಎಸ್ಟಿ ಸಮುದಾಯದ ಮುಖಂಡರು  ಹಾಜರಿದ್ದರು.
ವರದಿ.ಪ್ರಸನ್ನಕುಮಾರ್ ಕೆಸ್ತೂರು

prajaprabhat

Recent Posts

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

47 minutes ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

51 minutes ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

58 minutes ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

1 hour ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

1 hour ago

ಮೂರು ತಿಂಗಳಲ್ಲಿ ಸರಕಾರಕ್ಕೆ ಪ್ರಾದೇಶಿಕ ಅಸಮತೋಲನ<br>ನಿವಾರಣಾ ಸಮಿತಿಯ ವರದಿ ಸಲ್ಲಿಕೆ-ಅಧ್ಯಕ್ಷ ಪ್ರೊ.ಗೋವಿಂದರಾವ್

ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…

1 hour ago