ಏ.16 ರಂದು ಬೀದರ್ ವಿಮಾನ ನಿಲ್ದಾಣ ಉದ್ಘಾಟನೆ : ಸಚಿವ ಈಶ್ವರ್ ಖಂಡ್ರೆ

ಬೀದರ.10.ಏಪ್ರಿಲ.25:-  ಕೇಳೆದ ವರ್ಷಗಳಿಂದ ಬೀದರ ವಿಮಾನ ನಿಲ್ಯಾಣ ಸ್ಥಗಿತ ಆಗಿರುತ್ತದೆ ಮುಂಬರುವ ಏಪ್ರಿಲ್ 16 ರಂದು ಬೀದರ್ ವಿಮಾನ ನಿಲ್ದಾಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಸ್ತದಿಂದ ಉದ್ಘಾಟನೆಯಾಗಲಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 16ರಂದು ಬೀದರ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ 2025ನೇ ಇಸವಿಯಲ್ಲಿ ಬೀದರ್ ಜಿಲ್ಲೆಯ ಅಭಿವೃದ್ಧಿಗೆ ಸುಮಾರು 2025 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಸಿದ್ದರಾಮಯ್ಯ ಅವರ ಅಮೃತ ಹಸ್ತದಿಂದ ಶಿಲಾನ್ಯಾಸ ಮತ್ತು ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಮಾಡಲಾಗುವುದು.

ಕಳೆದ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ನಾಗರಿಕ ವಿಮಾನಯಾನ ಸೇವೆಯನ್ನು ಇದೇ ಏಪ್ರಿಲ್ 15ರಿಂದ ಪುನಾರಂಭಗೊಳಿಸಲಾಗಿದ್ದು, ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರು ಏ.16 ರಂದು ಬೀದರ್ ನಗರಕ್ಕೆ ಆಗಮಿಸಿ, ವಿಮಾನಯಾನ ಸೇವೆಗೆ ವಿಧ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ.

ಮುಖ್ಯಮಂತ್ರಿಗಳಿಂದ ಶಿಲಾನ್ಯಾಸಗೊಳ್ಳಲಿರುವ ಪ್ರಮುಖ ಕಾಮಗಾರಿಗಳು

•ಪ್ರಜಾಸೌಧ (ಜಿಲ್ಲಾಡಳಿತ ಭವನ)
•ಭಾಲ್ಕಿ ಕ್ರೀಡಾಂಗಣ
•ಭಾಲ್ಕಿ ಹೊಸ ಆಸ್ಪತ್ರೆ
•ಹೊನ್ನಿಕೇರಿ ಪರಿಸರ ಪ್ರವಾಸೋದ್ಯಮ ಯೋಜನೆ
•ನೀರಾವರಿ ಯೋಜನೆಗಳು

ಬಸವಕಲ್ಯಾಣದ ಆಧುನಿಕ ಅನುಭವ ಮಂಟಪದ ಕಾಮಗಾರಿ ಮುಂದುವರೆದಿದ್ದು, ಪೂರ್ಣಗೊಳ್ಳುವ ಹಂತದಲ್ಲಿದೆ. ಬೀದರ್ ಜಿಲ್ಲೆಯನ್ನು ಧಾರ್ಮಿಕ, ಐತಿಹಾಸಿಕ ಹಾಗೂ ಆಧ್ಯಾತ್ಮಿಕ ತಾಣವಾಗಿ ರೂಪಿಸುವಲ್ಲಿ ಈ ಯೋಜನೆಗಳು ಮಹತ್ವಪೂರ್ಣ ಪಾತ್ರ ವಹಿಸಲಿವೆ.

ಏ.16ರಂದು ನಡೆಯುವ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್,ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಗಣ್ಯರು ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

prajaprabhat

Recent Posts

ಭಾಗ್ಯಲಕ್ಷ್ಮೀ ಯೋಜನೆಗೆ 18 ವರ್ಷ ಪೂರ್ಣ: ಮೊದಲ ಫಲಾನುಭವಿಗಳಿಗೆ ಹಣ ರವಾನೆ ಆರಂಭ

ಬೀದರ.14.ಜೂನ್.25:- ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ  ಬರುವ ಭಾಗ್ಯಲಕ್ಷ್ಮೀ ಯೋಜನೆಯಡಿ ದಿನಾಂಕ:01-06-2006 ರಿಂದ 31-07-2008ರ…

2 hours ago

ಐಟಿಐ ಪ್ರವೇಶಾತಿಗಾಗಿ ಆಫ್‌ಲೈನ್ ಅರ್ಜಿ ಆಹ್ವಾನ

ಬೀದರ.14.ಜೂನ್.25:- ಜಿಲ್ಲೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹುಮನಾಬಾದನಲ್ಲಿ ಅಗಸ್ಟ್-2025 ನೇ ಶೈಕ್ಷಣಿಕ ಸಾಲಿನ ಮೊದಲ ಸುತ್ತಿನ ಆನ್‌ಲೈನ್ ಪ್ರವೇಶಾತಿ…

2 hours ago

ಧರ್ತಿ ಆಬಾ ಅಭಿಯಾನ-ಜಾಗೃತಿ ಮತ್ತು ಪ್ರಯೋಜನ ಸ್ಯಾಚುರೇಶನ್ ಶಿಬಿರಗಳು ಆಯೋಜನೆಗೆ ಅಗತ್ಯ ಕ್ರಮಕ್ಕೆ ಸೂಚನೆ

ಬೀದರ.14.ಜೂನ್.25:- ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ನವದೆಹಲಿ ಅವರು ಉಡಿಚಿತ್…

2 hours ago

ವಿದ್ಯುತ್ ವ್ಯತ್ಯಯ ಜೂ.15ಕ್ಕೆ

ಬೀದರ.14.ಜೂನ್.25:- 110/33-11ಕೆವಿ ಉಪ ವಿತರಣ ಕೇಂದ್ರ, ಕವಿಪ್ರನಿನಿ ಕೋಳಾರ್ (ಕೆ) ವ್ಯಾಪ್ತಿಯಲ್ಲಿ ಬರುವ 110 ಕೆವಿ ಕೋಳಾರ್ (ಕೆ) ವಿದ್ಯುತ್…

2 hours ago

ಜೂ.17 ರಂದು ಲೋಕಾಯುಕ್ತ ಅಹವಾಲು ಸಭೆ

ಬೀದರ.14.ಜೂನ್.25:- ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಜೂನ್.17 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ…

2 hours ago

ಬೀದರ | ವ್ಯಕ್ತಿ ಕಾಣೆ: ಪತ್ತೆಗಾಗಿ ಮನವಿ

ಬೀದರ14.ಜೂನ್.25:- ಬೀದರನ ಒಂಟಿಗುಡಸಿತಾAಡಾದ ನಿವಾಸಿಯಾದ ಕಿಶನ ಲಕ್ಷö್ಮಣ ರಾಠೋಡ (50) ಇವರು ದಿನಾಂಕ: 07-06-2025 ರಂದು ಮನೆಯಿಂದ ಹೊರಗಡೆ ಹೋಗಿ…

2 hours ago