‘ಒಂದು ಬಾವಿ, ಒಂದು ಮಂದಿರ, ಒಂದು ರುದ್ರಭೂಮಿ’ಗೆ ಆರೆಸ್ಸೆಸ್ ವರಿಷ್ಠ ಭಾಗವತ್.

ಆಲಿಗಢ,21. ಏಪ್ರಿಲ್.25:- ಇಂದು ಅಲಿಗಢ ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಮೋಹನ್ ಭಾಗವತ್ ಅವರು,‌ ಹಿಂದೂಗಳಲ್ಲಿ ಜಾತಿಭೇದವನ್ನು ಅಂತ್ಯಗೊಳಿಸಲು ಮತ್ತು ಏಕತೆಯನ್ನು ಉತ್ತೇಜಿಸಲು ‘ಒಂದು ಬಾವಿ,ಒಂದು ಮಂದಿರ ಮತ್ತು ಒಂದು ರುದ್ರಭೂಮಿ’ ತತ್ವಕ್ಕಾಗಿ ಪ್ರತಿಪಾದಿಸಿದ್ದಾರೆ.

ಅಲಿಗಡಕ್ಕೆ ತನ್ನ ಐದು ದಿನಗಳ ಭೇಟಿ ಸಂದರ್ಭದಲ್ಲಿ ಎಚ್‌ಬಿ ಇಂಟರ್ ಕಾಲೇಜ್ ಆವರಣದ ಸನಾತನ ಶಾಖೆಯಲ್ಲಿ ಸಂಘದ ಸ್ವಯಂಸೇವಕರನ್ನುದ್ದೇಶಿಸಿ ಮಾತನಾಡಿದ ಭಾಗವತ್, “ನಾವು ‘ಒಂದು ಬಾವಿ,‌ ಒಂದು ಮಂದಿರ ಮತ್ತು ಒಂದು ರುದ್ರಭೂಮಿ’ಯ ತತ್ವವನ್ನು ಅನುಸರಿಸಿದಾಗ ಮಾತ್ರ ಸಾಮಾಜಿಕ ಸಾಮರಸ್ಯವು ಸಾಕಾರಗೊಳ್ಳುತ್ತದೆ, ಅದು ಸಮಾಜದ ಎಲ್ಲ ವರ್ಗಗಳ ನಡುವೆ ಭಿನ್ನತೆಗಳನ್ನು,ತಾರತಮ್ಯವನ್ನು ನಿವಾರಿಸಲು ಮತ್ತು ಏಕತೆಯನ್ನು ಬೆಳೆಸಲು ನೆರವಾಗುತ್ತದೆ” ಎಂದು ಹೇಳಿದರು.

ಸಮಾನತೆಗೆ ಕರೆ ನೀಡುವ ಜೊತೆಗೆ ಅವರು ‘ಪಂಚ ಪರಿವರ್ತನ’ದ ಮಹತ್ವವನ್ನೂ ಒತ್ತಿ ಹೇಳಿದರು.

ಈ ಪಂಚ ಪರಿವರ್ತನವು ಭಾರತೀಯ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರಲು ಅಡಿಪಾಯವಾಗಿದೆ ಎಂದು ಬಣ್ಣಿಸಿದ ಅವರು, ಕುಟುಂಬ ಜಾಗ್ರತಿ, ಸಾಮಾಜಿಕ ಸಾಮರಸ್ಯ, ಸ್ವಾವಲಂಬನ, ಪರಿಸರ ಮತ್ತು ನಾಗರಿಕ ಶಿಸ್ತು ಇವು ಪಂಚಪರಿವರ್ತನದ ಐದು ಸ್ತಂಭಗಳಾಗಿವೆ ಎಂದರು.

‘ಶಾಂತಿ ಮತ್ತು ಸಮೃದ್ಧಿಯನ್ನು ಮುನ್ನಡೆಸಲು ಜಗತ್ತು ಭಾರತದತ್ತ ನೋಡುತ್ತಿದೆ. ಸಮಾಜವು ತನ್ನಿಂತಾನೇ ಬದಲಾಗುವುದಿಲ್ಲ,ನಾವು ಪ್ರತಿಯೊಂದೂ ಮನೆಯನ್ನು ತಲುಪುವ ಮೂಲಕ ಅದನ್ನು ಜಾಗ್ರತಗೊಳಿಸಬೇಕು’ ಎಂದರು.

ಸಾಮಾಜಿಕ ಏಕೀಕರಣಕ್ಕೆ ಒತ್ತು ನೀಡಿದ ಭಾಗವತ,ತೀಜ್‌ನಂತಹ ಹಬ್ಬಗಳನ್ನು ಸಾಮೂಹಿಕವಾಗಿ ಆಚರಿಸುವಂತೆ ಮತ್ತು ತಮ್ಮ ಮನೆಗಳಿಗೆ ಎಲ್ಲ ಸಮುದಾಯಗಳ ಜನರನ್ನು ಆಹ್ವಾನಿಸುವ ಮೂಲಕ ಒಳಗೊಳ್ಳುವಿಕೆಯನ್ನು ಬೆಳೆಸುವಂತೆ ಆರೆಸ್ಸೆಸ್ ಕಾರ್ಯಕರ್ತರನ್ನು ಆಗ್ರಹಿಸಿದರು.

ಇದು ಸಹಜವಾಗಿಯೇ ಒಳಗೊಳ್ಳುವಿಕೆ ಮತ್ತು ಸಾಮರಸ್ಯದ ಮನೋಭಾವವನ್ನು ಬೆಳೆಸುತ್ತದೆ ಎಂದರು.

ಹಿಂದು ಸಮಾಜವನ್ನು ಒಗ್ಗೂಡಿಸುವಲ್ಲಿ ಮತ್ತು ಪ್ರತಿ ಕುಟುಂಬದಲ್ಲಿಯೂ ಭ್ರಾತೃತ್ವದ ಭಾವನೆಯನ್ನು ಮೂಡಿಸುವಲ್ಲಿ ಪೂರ್ವಭಾವಿ ಪಾತ್ರವನ್ನು ವಹಿಸುವಂತೆಯೂ ಕಾರ್ಯಕರ್ತರಿಗೆ ಕರೆ ನೀಡಿದ ಭಾಗವತ್‌, ಮನೆಯಲ್ಲಿ ನಿತ್ಯ ಪೂಜೆ, ಹವನ ಮತ್ತು ಸಾಮೂಹಿಕ ಭೋಜನದಂತಹ ಸರಳ ಆದರೆ ಅರ್ಥಪೂರ್ಣ ಆಚರಣೆಗಳ ಮೂಲಕ ಭಾರತಿಯ ಸಂಸ್ಕೃತಿಯನ್ನು ಸಂರಕ್ಷಿಸುವಂತೆ ಕುಟುಂಬಗಳಿಗೆ ಸೂಚಿಸಿದರು.

‘ಸಂಸ್ಕೃತಿ ಭಾರತದ ಅತಿ ದೊಡ್ಡ ಸಂಪತ್ತು ಮತ್ತು ಏಕತೆ ಹಾಗೂ ತಿಳುವಳಿಕೆಯ ಮೂಲಕ ಅದನ್ನು ಸಂರಕ್ಷಿಸುವುದು ನಮ್ಮ ಹೊಣೆಗಾರಿಕೆಯಾಗಿದೆ ‘ಎಂದು ಅವರು ಹೇಳಿದರು.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

3 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

4 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

6 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

7 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

7 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

7 hours ago