Categories: ದೇಶ

ಒಂದು ರಾಷ್ಟ್ರ-ಒಂದು ಚುನಾವಣೆ ಬೆಂಬಲಿಸಿದ ಬಿಎಸ್‌ಪಿ, ಮಾಯಾವತಿ ಹೇಳಿದರು – ಸಂವಿಧಾನ ವಿಫಲವಾಗಿಲ್ಲ, ಆಡಳಿತ ಪಕ್ಷಗಳು ವಿಫಲವಾಗಿವೆ

ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಬೆಂಬಲ ವ್ಯಕ್ತಪಡಿಸಿರುವ ಬಹುಜನ ಸಮಾಜವಾದಿ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚುನಾವಣಾ ವೆಚ್ಚವನ್ನು ಕಡಿಮೆ ಮಾಡುವ ಉದ್ದೇಶವನ್ನು ಈ ಮಸೂದೆ ಹೊಂದಿದೆ.

ಅಲ್ಲದೇ ಕಲ್ಯಾಣ ಕೆಲಸಗಳು ಯಾವುದೇ ಅಡೆತಡೆಯಿಲ್ಲದೇ ನಡೆಯುತ್ತದೆ’ ಎಂದು ಅಭಿಪ್ರಾಯಪಟ್ಟರು.ರಾಜಕೀಯವನ್ನು ಮೀರಿ ಎಲ್ಲಾ ಪಕ್ಷಗಳು ಈ ವಿಷಯದಲ್ಲಿ ದೇಶ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕೆಲಸ ಮಾಡುವುದು ಉತ್ತಮ’ ಎಂದು ಅವರು ಹೇಳಿದರು.

ಮುಂದುವರಿದು, ಎಸ್‌ಟಿ/ಎಸ್‌ಸಿ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳ ವಿರುದ್ಧ ಹರಿಹಾಯ್ದ ಅವರು, ‘ಮೀಸಲಾತಿ ವಿಚಾರದಲ್ಲಿ ಈ ಪಕ್ಷಗಳು ಮಾತನಾಡದೇ ಇರುವುದು ಒಳಿತು’ ಎಂದಿದ್ದಾರೆ.

ಲೋಕಸಭೆಯಲ್ಲಿ ಸಂವಿಧಾನದ ಕುರಿತು ಚರ್ಚೆ ವೇಳೆ ಆಡಳಿತ ಪಕ್ಷಗಳು ಮತ್ತು ವಿರೋಧ ಪಕ್ಷಗಳು… ವಿಶೇಷವಾಗಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ದಲಿತ ಮತ್ತು ಒಬಿಸಿ ಮತಗಳನ್ನು ಸೆಳೆಯಲು ಮೀಸಲಾತಿ ಬಗ್ಗೆ ಆಧಾರರಹಿತ ಮಾತುಗಳನ್ನಾಡಿವೆ.

ಇದರಲ್ಲಿ ಒಂದೇ ಒಂದು ಸತ್ಯ ಇಲ್ಲ’ ಎಂದು ಕಿಡಿಕಾರಿದರು.
ಮೀಸಲಾತಿ ವಿಷಯದಲ್ಲಿ ಈ ಎರಡು ಪಕ್ಷಗಳು ಮಾತನಾಡದೇ ಇರುವುದು ಒಳ್ಳೆಯದು.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಪರಿಶಿಷ್ಟ ಜಾತಿಗಳು (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಸರ್ಕಾರಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವ ಸಾಂವಿಧಾನಿಕ ಮಸೂದೆಯನ್ನು ವಿರೋಧಿಸಿತ್ತು.

ಈ ಮಸೂದೆಯ ಪ್ರತಿಯನ್ನು ಸಮಾಜವಾದಿ ಪಕ್ಷ ಸಂಸತ್ತಿನಲ್ಲಿ ಹರಿದು ಬಿಸಾಕಿತ್ತು. ಈಗಲೂ ಈ ಮಸೂದೆ ಅಂಗೀಕಾರವಾಗದೇ ಬಾಕಿ ಉಳಿದಿದೆ’ ಎಂದು ಹೇಳಿದರು.

ಇದೇ ವೇಳೆ ಆಡಳಿತ ಪಕ್ಷ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಾಯಾವತಿ, ‘ಬಿಜೆಪಿಯ ಮೀಸಲಾತಿ ವಿರೋಧಿ ಮನಸ್ಥಿತಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಹೀಗಾಗಿ ಮಸೂದೆ ಅಂಗೀಕರಿಸುವ ಗೋಜಿಗೆ ಹೋಗುತ್ತಿಲ್ಲ’ ಎಂದು ಹೇಳಿದರು.

prajaprabhat

Share
Published by
prajaprabhat

Recent Posts

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

48 minutes ago

ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಅವಧಿ ಜೂನ್ 22 ರವರೆಗೆ ವಿಸ್ತರಣೆ

ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…

58 minutes ago

ಗ್ರೇಟಾ ಥನ್‌ಬರ್ಗ್ ಅವರ ಸಹಾಯ ದೋಣಿ ಗಾಜಾ ಪ್ರವೇಶಿಸುವುದನ್ನು ತಡೆಯುವುದಾಗಿ ಇಸ್ರೇಲ್ ಭರವಸೆ ನೀಡಿದೆ 08 ಜೂನ್, 2025 ರಾಷ್ಟ್ರೀಯ<br>

ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…

2 hours ago

2025-26ನೇ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಹುದ್ದೆಗಳು ಖಾಲಿ ಇಂದೇ ಅರ್ಜಿ ಹಾಕಿ.

ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…

2 hours ago

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

8 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

10 hours ago