ಛಲವಾದಿ ಮಹರ್ (ಹೊಲೆಯ) ಬಂಧುಗಳೇ,
ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿಯಲ್ಲಿ ಬರುವ 101 ಜಾತಿ ಜನಾಂಗದವರನ್ನು ಇವರು ಇದೇ ಜಾತಿಯವರು ಎಂದು ಗುರುತಿಸಿ ಸಮೀಕ್ಷೆ ನಡೆಸಲು ರಾಜ್ಯಾದ್ಯಂತ 54 ಸಾವಿರ ಶಿಕ್ಷಕ/ಶಿಕ್ಷಕಿಯರನ್ನು ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಸಮೀಕ್ಷೆ ನಡೆಸಲು ನೇಮಕಗೊಳಿಸಿರುತ್ತಾರೆ.
ಈಗಾಗಲೇ ಒಳಮೀಸಲಾತಿ ಸಮೀಕ್ಷೆ ಯನ್ನು ರಾಜ್ಯ ಸರ್ಕಾರ ಪ್ರಾರಂಭ ಮಾಡಿದೆ. ಆದ ಕಾರಣ, ಹೊಲೆಯ ಜಾತಿ ಜನಾಂಗದವರಾದ ನಾವು ಇಲ್ಲಿಯವರೆಗೆ ನಮ್ಮ ಮತ್ತು ನಮ್ಮ ಮಕ್ಕಳ ದಾಖಲಾತಿ ಗಳಲ್ಲಿ ಹಾಗೂ ಜಾತಿ ಪ್ರಮಾಣ ಪತ್ರಗಳಲ್ಲಿ ಅಥವಾ ಇನ್ಯಾವುದೇ ದಾಖಲಾತಿಗಳಲ್ಲಿ
1) ಆದಿ ಕರ್ನಾಟಕ (AK),
2) ಆದಿ ದ್ರಾವಿಡ (AD)
3) ಆದಿ ಆಂಧ್ರ (AA) ಎಂದು
ನಮೂದಿಸಿರುವುದು ತಿಳಿದು ಬಂದಿರುತ್ತದೆ. ಮುಂದೆ ಹೀಗಾಗುವುದು ಬೇಡ. ರಾಜ್ಯದಲ್ಲಿರುವ ಅತಿ ದೊಡ್ಡ ಜನ ಸಂಖ್ಯೆ ಹೊಂದಿರುವ ಮೂಲ ಹೊಲೆಯ ಜಾತಿ ಯವರಾದ ನಾವು AK, AD, AA, ಎಂದು ಬರೆದರೆ ನಮಗೆ ನಾವೇ ನಮ್ಮ ಜನಸಂಖ್ಯೆ ಕಡಿಮೆ ಮಾಡಿಕೊಂಡಂತಾಗುತ್ತದೆ.
ಮೂಲ ಜಾತಿ ಹೊಂದಿದ ಛಲವಾದಿ ಮಹರ್ (ಹೊಲೆಯ) ಗಳಾದ ನಾವು ಮುಂದೆ ನಮ್ಮ ಮಕ್ಕಳ ಶಾಲಾ ದಾಖಲಾತಿ ಗಳೊಂದಿಗೆ ಇನ್ನೂ ಮುಂದೆ ಖಡ್ಡಾಯವಾಗಿ ಹೊಲೆಯ ಎಂದು ನಮೂದಿಸಲು ಔರಾದ ತಾಲ್ಲೂಕು ಹೊಲೆಯ ಜಾಗೃತಿ ಸಮಿತಿ ತಮ್ಮಲ್ಲಿ ಈ ಮೂಲಕ ಕೋರುತ್ತದೆ.
ಈಗ ತಮ್ಮ ಮನೆಯ ಬಾಗಿಲಿಗೆ ಸರ್ಕಾರಿ ಅಧಿಕಾರಿಗಳು, ಇನ್ಯಾವುದೋ ಅಧಿಕಾರಿಗಳು ಸಮೀಕ್ಷೆ ನಡೆಸಲು ಬಂದಂಥ ಸಂದರ್ಭದಲ್ಲಿ ಅವರಿಗೆ ಖಡ್ಡಾಯವಾಗಿ ನಾವು ಹೊಲೆಯ ಎಂದು ಹೇಳಿ ನೋಂದಾಯಿಸಿ.
ಶ್ರೀ ಪ್ರಕಾಶ್ ಭಂಗಾರೇ
ಡಿಎಸ್ಎಸ್ ತಾಲೂಕಾ ಸಂಚಾಲಕ
ಔರಾದ್ 9945109814
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…