10/06/2025 3:42 AM

Translate Language

Home » ಲೈವ್ ನ್ಯೂಸ್ » ಔರಾದ|ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮಕ್ಕೆ ಶ್ರೀ ಸಂಜಯ್ ಬಾನ್ಸೂಡೆ ಅವರಿಗೆ ಆಹ್ವಾ

ಔರಾದ|ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮಕ್ಕೆ ಶ್ರೀ ಸಂಜಯ್ ಬಾನ್ಸೂಡೆ ಅವರಿಗೆ ಆಹ್ವಾ

Facebook
X
WhatsApp
Telegram

ಔರಾದ್.18.ಏಪ್ರಿಲ್.25:- ಔರಾದ ನಗರದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸುವ ಉದ್ದೇಶದಿಂದ, ದಿನಾಂಕ 22 ಎಪ್ರಿಲ್ 2025 ರಂದು ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.

ಈ ಕಾರ್ಯಕ್ರಮದ ಪ್ರಮುಖ ಅತಿಥಿಯಾಗಿ ಮಹಾರಾಷ್ಟ್ರದ ಮಾಜಿ ಸಚಿವರೂ ಹಾಗೂ ಹಾಲಿ ಶಾಸಕರೂ ಆಗಿರುವ ಶ್ರೀ ಸಂಜಯ್ ಬಾನ್ಸೂಡೆ ಅವರನ್ನು ಆಹ್ವಾನಿಸಲಾಗಿದ್ದು, ಅವರಿಗೆ ಅಧಿಕೃತವಾಗಿ ಆಮಂತ್ರಣಪತ್ರ ವಿತರಿಸಲಾಗಿದೆ.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರು ಕುಮಾರ ದೇಶಮುಖ, ಸಲಹೆಗಾರರು ಸೋಪಾನರಾವ ಡೋಂಗರೆ, ಪ್ರಚಾರ ಸಮಿತಿ ಅಧ್ಯಕ್ಷರ ಶಿವಕುಮಾರ ಕಾಂಬಳೆ, ಧನಾಜಿ ಕಾಂಬಳೆ ಖೆರ್ಡಾ, ರವಿ ಯರನಾಳೆ ಮುಂತಾದವರು ಇದ್ದರು.

ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಅಂಬೇಡ್ಕರ್ ಅವರ ಜೀವನ ಸಾಧನೆ ಕುರಿತು ಭಾಷಣಗಳು ಹಾಗೂ ಸಮಾಜಮುಖಿ ಚಟುವಟಿಕೆಗಳು ನಡೆಯಲಿವೆ. ಈ ಮಹತ್ವದ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಆಯೋಜಕರಿಂದ ವಿನಂತಿಸಲಾಗಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!