ಬೀದರ.10.ಏಪ್ರಿಲ.25: ಬೀದರ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಇಲ್ಲಿಯ ಹಿರಿಯ ಕಾಂಗ್ರೆಸ್ ಮುಖಂಡ ಬಾಬುರಾವ ತಾರೆ ಅವರನ್ನು ನೇಮಕ ಮಾಡಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಕೆಪಿಸಿಸಿ ಕರ್ಣಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಪರಿಶಿಷ್ಟ ಜಾತಿ ರಾಜ್ಯ ಸಮಿತಿಯ ಅಧ್ಯಕ್ಷ ಆರ್.ಧರ್ಮಸೇನಾ ಹಾಗೂ ಮುಖಂಡ ಭೀಮಸೇನರಾವ ಸಿಂಧೆ ಅವರ ಒಪ್ಪಿಗೆ ಮೇರೆಗೆ ಬಾಬುರಾವ ತಾರೆ ಅವರಿಗೆ ಪಕ್ಷದ ಮಹತ್ವದ ಜವಾಬ್ದಾರಿ ವಹಿಸಿಕೊಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಸಂಜುಕುಮಾರ ಡಿ. ಕುರನಳ್ಳಿಕರ್ ತಿಳಿಸಿದ್ದಾರೆ.