ಬೀದರ.28.ಫೆ.25:- ಔರಾದ್ ಪಟ್ಟಣದ ಉದ್ಭವಲಿಂಗ ಅಮರೇಶ್ವರ ಜಾತ್ರಾ ಉತ್ಸವದ ಅಂಗವಾಗಿ ವೈವಿಧ್ಯಮಯ ಹೂವು ಹಾಗೂ ದೀಪಗಳಿಂದ ಆಲಂಕರಿಸಲಾಗಿದ್ದ ರಥವು ಅಮರೇಶ್ವರ ದೇವಸ್ಥಾನದ ಆವರಣದಿಂದ ಹೊರಡುತ್ತಿದ್ದಂತೆ ಸೇರಿದ ಅಪಾರ ಸಂಖ್ಯೆಯ ಭಕ್ತರ ಹರ್ಷೋಲ್ಲಾಸ ಮುಗಿಲುಮುಟ್ಟಿತು.
ಶಂಕರನ ಜಯಘೋಷ ಎಲ್ಲೆಡೆ ಮೊಳಗಿತು.ಭಕ್ತರು, ಹರಕೆ ತೀರಿಸುವ ಮೂಲಕ ಭಕ್ತಿಭಾವ ಮೆರೆದರು.
ಮಹಿಳೆಯರು, ಮಕ್ಕಳಾದಿಯಾಗಿ ರಸ್ತೆಯ ಎರಡೂ ಬದಿಯಲ್ಲಿ ನಿಂತ ಭಕ್ತರು ರಥೋತ್ಸವವನ್ನು ಸ್ವಾಗತಿಸಿದರು. ಕೆಲವರು ಕಟ್ಟಡಗಳ ಮೇಲೆ ನಿಂತು ಅಮರೇಶ್ವರ ದೇವರಿಗೆ ನಮಿಸಿದರು.
ರಥಕ್ಕೆ ಪೂಜೆ ಸಲ್ಲಿಸಿ ಕಾಯಿ ಒಡೆದು ತಮ್ಮ ಇಷ್ಟಾರ್ಥ ಪೂರೈಸಿದರು. ರಥದ ದಾರಿಯೂದ್ದಕ್ಕೂ ಬಣ್ಣ ಬಣ್ಣದ ರಂಗೋಲಿ ಕಣ್ಮನ ಸೆಳೆಯುವಂತಿತ್ತು. ರಥದ ಮೇಲೆ ಹೂ ಮಳೆ ಸುರಿಯುವ ದೃಶ್ಯ ಭಕ್ತರನ್ನು ಮತ್ತಷ್ಟು ಗಮನ ಸೆಳೆಯಿತು.
ವೀರಗಾಸೆ ಕುಣಿತ, ಮಕ್ಕಳ ಕೋಲಾಟ, ಡೊಳ್ಳು ಕುಣಿತ, ಡಿಜೆ ಮೇಲಿನ ಯುವಕರ ನೃತ್ಯ ಮೆರವಣಿಗೆಯ ಸಂಭ್ರಮವನ್ನು ಹೆಚ್ಚಿಸಿತು.
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…