ಬೀದರ.28.ಫೆ.25:- ಔರಾದ್ ಪಟ್ಟಣದ ಉದ್ಭವಲಿಂಗ ಅಮರೇಶ್ವರ ಜಾತ್ರಾ ಉತ್ಸವದ ಅಂಗವಾಗಿ ವೈವಿಧ್ಯಮಯ ಹೂವು ಹಾಗೂ ದೀಪಗಳಿಂದ ಆಲಂಕರಿಸಲಾಗಿದ್ದ ರಥವು ಅಮರೇಶ್ವರ ದೇವಸ್ಥಾನದ ಆವರಣದಿಂದ ಹೊರಡುತ್ತಿದ್ದಂತೆ ಸೇರಿದ ಅಪಾರ ಸಂಖ್ಯೆಯ ಭಕ್ತರ ಹರ್ಷೋಲ್ಲಾಸ ಮುಗಿಲುಮುಟ್ಟಿತು.
ಶಂಕರನ ಜಯಘೋಷ ಎಲ್ಲೆಡೆ ಮೊಳಗಿತು.ಭಕ್ತರು, ಹರಕೆ ತೀರಿಸುವ ಮೂಲಕ ಭಕ್ತಿಭಾವ ಮೆರೆದರು.
ಮಹಿಳೆಯರು, ಮಕ್ಕಳಾದಿಯಾಗಿ ರಸ್ತೆಯ ಎರಡೂ ಬದಿಯಲ್ಲಿ ನಿಂತ ಭಕ್ತರು ರಥೋತ್ಸವವನ್ನು ಸ್ವಾಗತಿಸಿದರು. ಕೆಲವರು ಕಟ್ಟಡಗಳ ಮೇಲೆ ನಿಂತು ಅಮರೇಶ್ವರ ದೇವರಿಗೆ ನಮಿಸಿದರು.
ರಥಕ್ಕೆ ಪೂಜೆ ಸಲ್ಲಿಸಿ ಕಾಯಿ ಒಡೆದು ತಮ್ಮ ಇಷ್ಟಾರ್ಥ ಪೂರೈಸಿದರು. ರಥದ ದಾರಿಯೂದ್ದಕ್ಕೂ ಬಣ್ಣ ಬಣ್ಣದ ರಂಗೋಲಿ ಕಣ್ಮನ ಸೆಳೆಯುವಂತಿತ್ತು. ರಥದ ಮೇಲೆ ಹೂ ಮಳೆ ಸುರಿಯುವ ದೃಶ್ಯ ಭಕ್ತರನ್ನು ಮತ್ತಷ್ಟು ಗಮನ ಸೆಳೆಯಿತು.
ವೀರಗಾಸೆ ಕುಣಿತ, ಮಕ್ಕಳ ಕೋಲಾಟ, ಡೊಳ್ಳು ಕುಣಿತ, ಡಿಜೆ ಮೇಲಿನ ಯುವಕರ ನೃತ್ಯ ಮೆರವಣಿಗೆಯ ಸಂಭ್ರಮವನ್ನು ಹೆಚ್ಚಿಸಿತು.
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…
ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…