17/06/2025 1:47 PM

Translate Language

Home » ಲೈವ್ ನ್ಯೂಸ್ » ಔರಾದ | ಡಾ.ಅಂಬೇಡ್ಕರ್ ಜಯಂತಿ ಅದ್ದೂರಿ ಆಚರಣೆಗೆ ತೀರ್ಮಾನ

ಔರಾದ | ಡಾ.ಅಂಬೇಡ್ಕರ್ ಜಯಂತಿ ಅದ್ದೂರಿ ಆಚರಣೆಗೆ ತೀರ್ಮಾನ

Facebook
X
WhatsApp
Telegram

ಔರಾದ.06.ಏಪ್ರಿಲ್.25:- ಔರಾದ ತಹಶೀಲ್ದಾರ್ ಶ್ರೀ ಮಹೇಶ ಪಾಟೀಲ ಅಧ್ಯಕ್ಷತೆಯಲ್ಲಿ 05. ಏಪ್ರಿಲ್ , ಶನಿವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಜಯಂತಿ ಆಚರಿಸಲು ಸ್ಥಳೀಯ ಮುಖಂಡರು ಸಲಹೆ ನೀಡಿದರು.

ಅಂದು ಬೆಳಿಗ್ಗೆ 9 ಗಂಟೆಗೆ ಬಸವೇಶ್ವರ ವೃತ್ತದಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅಲ್ಲಿಂದ ಮೆರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿ ವೇದಿಕೆ ಕಾರ್ಯಕ್ರಮ ನಡೆಸಲಾಗುವುದು.

ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಈ ದೇಶಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಹೀಗಾಗಿ ಎಲ್ಲರೂ ಮುಕ್ತವಾಗಿ ಪಾಲ್ಗೊಂಡು ಸಹಕರಿಸುವಂತೆ ತಹಶೀಲ್ದಾರ್ ಮನವಿ ಮಾಡಿದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಅನೀಲಕುಮಾರ, ತಾಪಂ ಇಒ ಮಾಣಿಕರಾವ್ ಪಾಟೀಲ, ಸಿಪಿಐ ರಘುವೀರಸಿಂಗ್ ಠಾಕೂರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ವಾಮಿದಾಸ,

ಸ್ಥಳೀಯ ಮುಖಂಡರಾದ:

ಬಾಬುರಾವ ತಾರೆ, ಸುನಿಲ್ ಮಿತ್ರಾ, ಶಿವಕುಮಾರ ಕಾಂಬಳೆ, ರತ್ನದೀಪ ಕಸ್ತೂರೆ, ಪ್ರಕಾಶ ಭಂಗಾರೆ, ದಿನೇಶ ಸಿಂಧೆ, ಸುಭಾಷ ಲಾಧಾ, ಆನಂದ ಕಾಂಬಳೆ ಇದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!