ಔರಾದ: ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ನೋಂದಣಿ ಮಾಡಿಸಲು ರೈತಬಾಂಧವರಲ್ಲಿ ಮನವಿ

ಬೀದರ.25.ಜೂನ್.25:- ಅತಿವೃಷ್ಠಿ, ಅನಾವೃಷ್ಠಿ, ಅಕಾಲಿಕ ಮಳೆ ಮುಂತಾದ ಪ್ರಕೃತಿ ವಿಕೋಪಗಳು ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರ ನೆರವಿಗೆ ಬರಲು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು 2025-26ನೇ ಸಾಲಿನಲ್ಲಿ ಸಹ ಜಾರಿಗೆ ತರಲು ಉದ್ದೇಶಿಸಲಾಗಿದೆ. ಈ ಯೋಜನೆಗೆ ಒಳಪಡುವ ವಿವಿಧ ಬೆಳೆಗಳಿಗೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಿಗೆ ಘೋಷಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಔರಾದ (ಬಿ) ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಯೂನಿವರ್ಸಲ್ ಸೋಂಪೊ ಜನರಲ್ ಇನ್‌ಶ್ಯೂರೆನ್ಸ್ ಕಂಪನಿಯನ್ನು ನಿಗದಿಪಡಿಸಲಾಗಿದೆ. ತೋಗರಿ (ಮ.ಆ), ಸೋಯಾಅವರೆ (ಮ.ಆ), ಸೋಯಾ ಅವರೆ (ನೀ), ಉದ್ದು (ಮ.ಆ), ಹೆಸರು (ಮ.ಆ), ನೆಲಗಡಲೆ (ಮ.ಆ.), ಮುಸುಕಿನ ಜೋಳ (ಮ.ಆ.), ಭತ್ತ (ಮ.ಆ), ಭತ್ತ (ನೀ), ಸಜ್ಜೆ (ಮ.ಆ.), ಎಳ್ಳು (ಮ.ಆ.), ಜೋಳ (ಮ.ಆ), ಹತ್ತಿ (ಮ.ಆ) ಬೆಳೆಗಳಿಗೆ ವಿಮಾ ಕಂತು ತುಂಬಲು ದಿನಾಂಕ: 31-07-2025 ಹಾಗೂ ಸೂರ್ಯಕಾಂತಿ (ಮ.ಆ.) ಬೆಳೆಗೆ ವಿಮಾ ಕಂತು ತುಂಬಲು ದಿನಾಂಕ: 16-08-2025 ಕೊನೆಯ ದಿನಾಂಕವಾಗಿರುತ್ತದೆ.


ಬೆಳೆ ಸಾಲ ಪಡೆಯದ ರೈತರು ನೋಂದಣಿಗಾಗಿ ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಆಧಾರ ಸಂಖ್ಯೆ ಜೋಡಿಸಿದ ಬ್ಯಾಂಕ್ ಖಾತೆ/ಪಾಸ್ ಬುಕ್ ಮತ್ತು ಆಧಾರ ಸಂಖ್ಯೆಯೊAದಿಗೆ ಡಿಸಿಸಿ/ಇತರೆ ಬ್ಯಾಂಕ್, ಗ್ರಾಮ-ಒನ್ ಮತ್ತು ಸಿ.ಎಸ್.ಸಿ.ಕೇಂದ್ರಗಳಿಗೆ ಸಂಪರ್ಕಿಸಬೇಕು ಹಾಗೂ ರೈತರು ನೋಂದಣಿಗಾಗಿ ಕಡ್ಡಾಯವಾಗಿ ಈಖUIಖಿS Iಆ (ಈIಆ) ಹೊಂದಿರಬೇಕು ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ಜಿಲ್ಲೆಯಲ್ಲಿ ನೈಸರ್ಗಿಕ ಕೃಷಿ ಅಭಿಯಾನ ಯೋಜನೆ ಅನುಷ್ಠಾನಕ್ಕೆ ಸಿದ್ಧತೆ

ಬೀದರ.28.ಜೂನ್.25:-ಅತಿಯಾದ ರಾಸಾಯನಿಕ ಬಳಕೆಯಿಂದಾಗಿ ಕೃಷಿ ಕ್ಷೇತ್ರವು ಕಲುಷಿತಗೊಂಡಿರುತ್ತದೆ ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಜಿಲ್ಲೆಯಲ್ಲಿ ರಾಷ್ಟ್ರೀಯ ನೈಸರ್ಗಿಕ…

5 minutes ago

ಸ್ವಚ್ಛಂದ ಜೀವನ ನಡೆಸಲು ನಮ್ಮ ಸಂವಿಧಾನದಲ್ಲಿ ಕಾನೂನು ರಚಿಸಲಾಗಿದೆ-ನ್ಯಾ.ಪ್ರಕಾಶ ಬನಸೋಡೆ

ಬೀದರ.28.ಜೂನ್.25:- ಹುಟ್ಟುವ ಮಗುವಿನಿಂದ ಸಾಯುವ ವಯೋವೃದ್ಧದವರೆಗೂ ಸ್ವಚ್ಚಂದ ಜೀವನ ನಡೆಸಲು ನಮ್ಮ ಸಂವಿಧಾನದಲ್ಲಿ ಕಾನೂನು ರಚಿಸಲಾಗಿದೆ ಎಂದು ಹಿರಿಯ ಸಿವಿಲ್…

8 minutes ago

ಕರ್ನಾಟಕ ಸಾಹಿತ್ಯ ಅಕಾಡೆಮಿ: ಅರ್ಜಿ ಆಹ್ವಾನ

ಬೀದರ.28ಜೂನ್.25:- ಕರ್ನಾಟಕ ಸಾಹಿತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ: ಅರ್ಧಶತಮಾನ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ…

12 minutes ago

ಜೂ.30 ರಂದು ಕೌಶಲ್ಯಾಭಿವೃದ್ಧಿ ತರಬೇತಿಗೆ ಸಂದರ್ಶನ: ಹೆಸರು ನೋಂದಣಿಗೆ ಸೂಚನೆ

ಬೀದರ.28.ಜೂನ್.25:- 2024-25ನೇ ಸಾಲಿನ ಎಸ್.ಸಿ.ಎಸ್.ಪಿ /ಟಿ.ಎಸ್.ಪಿ ಯೋಜನೆಯಡಿ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃಧಿ ತರಬೇತಿ ಪಡೆಯಲು ಜೂನ್.30…

18 minutes ago

ಬೀದರ | ಪೋಟೋ ಶಿರ್ಷಿಕೆ

ಬೀದರ.28.ಜೂನ್.25:- ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ನಾಡಪ್ರಭು ಕೆಂಪೇಗೌಡ ಜಯಂತಿ ನಿಮಿತ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ…

21 minutes ago

ಬೀದಿ ಬದಿ ವ್ಯಾಪಾರಿಗಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ

ಬೀದರ.28.ಜೂನ್.25:- ಜಿಲ್ಲೆಯ ಬೀದಿ ಬದಿ ವ್ಯಾಪಾರಿಗಳು, ಜುಸ್ ಸೆಂಟರ್, ಚಿಕನ್ ಮತ್ತು ಕಬಾಬ್ ಸೆಂಟರ್, ಟಿ ಅಂಗಡಿಗಳು, ಜಿಲೇಬಿ ತಯಾರಕರು,…

27 minutes ago