ಔರಾದ | ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಆಚರಣೆಗೆ ತೀರ್ಮಾನಿಸಲಾಗಿದ್ದು,

ಔರಾದ್ ಪಟ್ಟಣದಲ್ಲಿ ಏಪ್ರಿಲ್ 22ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಅದ್ದೂರಿ ಆಚರಣೆಗೆ ತೀರ್ಮಾನಿಸಲಾಗಿದ್ದು, ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಸುನೀಲಕುಮಾರ್ ದೇಶಮುಖ ಅವರನ್ನು ಆಯ್ಕೆ ಮಾಡಲಾಗಿದೆ.

ವಿಶ್ವರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನೋತ್ಸವ ಸಮಿತಿ ಪದಾಧಿಕಾರಿಗಳು ಮಂಗಳವಾರ ಪಟ್ಟಣದಲ್ಲಿ ನಡೆಸಿದ ಸಭೆಯಲ್ಲಿ ದೇಶಮುಖ ಅವರನ್ನು ಆಯ್ಕೆ ಮಾಡಲಾಗಿದೆ. ಅಂದಿನ ಕಾರ್ಯಕ್ರಮದಲ್ಲಿ ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರೊ.ಅಪ್ಪುಗೆರೆ ಸೋಮಶೇಖ‌ರ್ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಸಂಸದ ಸಾಗರ್ ಖಂಡ್ರೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಭೀಮಾ ಕೋರೆಗಾಂವ್ ಖ್ಯಾತಿ ಕಲಾವಿದ ಅಜಯ್ ದಿಹಾಂಡೆ, ಉದಗೀರ್ ಶಾಸಕ ಸಂಜಯ್ ಭಾನಸೋಡೆ, ಮಾಜಿ ವಿಧಾನ ಪರಿಷತ್‌ ಸದಸ್ಯ ಕೆ.ಪುಂಡಲಿಕರಾವ್, ಮುಖಂಡರಾದ ಭೀಮಶೇನರಾವ್ ಸಿಂಧೆ, ಮಾರುತಿ ಬೌದ್ಧ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ. ಸ್ವಾಗತ ಸಮಿತಿ ಅಧ್ಯಕ್ಷ ಸುನೀಲಕುಮಾರ್ ದೇಶಮುಖ ಅವರು ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿ, ‘ಔರಾದ್ ಪಟ್ಟಣದಲ್ಲಿ ಡಾ.ಬಿ.ಆ‌ರ್.ಅಂಬೇಡ್ಕರ್ ಅವರ ಜನೋತ್ಸವ ಕಾರ್ಯಕ್ರಮ ಐತಿಹಾಸಿಕವಾಗಲಿದೆ.

ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸೋಣ ಎಂದು ಹೇಳಿದರು. ಪ್ರಚಾರ ಸಮಿತಿ ಅಧ್ಯಕ್ಷ ಶಿವಕುಮಾರ ಕಾಂಬಳಿ ಮಾತನಾಡಿ, ‘ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಆಚರಣೆ ಕುರಿತು ಈಗಾಗಲೇ ಅನೇಕ ಪೂರ್ವಸಿದ್ಧತಾ ಸಭೆಗಳು ನಡೆಸಿ ವಿವಿಧ ಸಮಿತಿ ರಚಿಸಲಾಗಿದೆ.

ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಸಹಕರಿಸಬೇಕು’ ಎಂದರು.  ಪ್ರಮುಖರಾದ ಶರಣಪ್ಪ ಪಾಟೀಲ್, ಸೋಪಾನರಾವ ಡೊಂಗರೆ ಝರೇಪ್ಪ ನಾಗಮಾರಪಳ್ಳಿ ಉತ್ತಮ ಮಾಂಟ್ರೆಕರ್, ಸುನಿಲ ಮೀತ್ರಾ, ಸಂತೋಷ ಶಿಂಧೆ, ಪ್ರಕಾಶ ಭಂಗಾರೆ, ವಿಶಾಲ್ ಶೇಳಕೆ, ಸಂತೋಷ ಸೂರ್ಯವಂಶಿ, ಆನಂದ ಕಾಂಬಳೆ, ಉತ್ತಮ ಗಾಯಕವಾಡ್, ರವಿ ಯರನಾಳೆ ಸೇರಿದಂತೆ ಅನೇಕರಿದ್ದರು. ಪ್ರಚಾರ ಸಮಿತಿ ಕಾರ್ಯದರ್ಶಿ ರತ್ನದೀಪ ಕಸ್ತೂರೆ ಸ್ವಾಗತಿಸಿ, ನಿರೂಪಿಸಿದರು.

prajaprabhat

Recent Posts

ಕೇಂದ್ರ ಸಚಿವ ಅಮಿತ್ ಶಾ ಅವರಿಂದ 60,000 ಕ್ಕೂ ಹೆಚ್ಚು ಹೊಸ ಪೊಲೀಸ್ ಕಾನ್ಸ್‌ಟೇಬಲ್‌ಗಳಿಗೆ ನೇಮಕಾತಿ ಪತ್ರ ವಿತರಣೆ

ಇಂದು ಮಾರ್ಚ್ 31, 2026 ರ ವೇಳೆಗೆ ಭಾರತವು ನಕ್ಸಲ್ ವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ…

2 minutes ago

ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತದಲ್ಲಿ ಪ್ರಧಾನಿ ಮೋದಿ ಸೈಪ್ರಸ್ ತಲುಪಿದರು

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತದಲ್ಲಿ ಸೈಪ್ರಸ್‌ಗೆ ಆಗಮಿಸಿದ್ದಾರೆ. ಅವರನ್ನು ಲಾರ್ನಾಕಾ ಅಂತರಾಷ್ಟ್ರೀಯ…

23 minutes ago

ಅಹಮದಾಬಾದ್ ವಿಮಾನ ಅಪಘಾತದಲ್ಲಿ 32 ಡಿಎನ್‌ಎ ಹೊಂದಾಣಿಕೆ ದೃಢಪಟ್ಟಿದೆ; 14 ಮೃತದೇಹಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.

ಗುಜರಾತ್‌ನ ಅಹಮದಾಬಾದ್ ವಿಮಾನ ಅಪಘಾತದಲ್ಲಿ, ಇಲ್ಲಿಯವರೆಗೆ ಒಟ್ಟು 32 ಮೃತರ ಡಿಎನ್‌ಎ ಮಾದರಿಗಳನ್ನು ಹೊಂದಾಣಿಕೆ ಮಾಡಲಾಗಿದ್ದು, 14 ಮೃತದೇಹಗಳನ್ನು ಅವರ…

26 minutes ago

ಮಹಾರಾಷ್ಟ್ರದಲ್ಲಿ ಘನಘೋರ ದುರಂತ! ಸೇತುವೆ ಕುಸಿದು ನದಿಯಲ್ಲಿ ಕೊಚ್ಚಿ ಹೋದ 25ಕ್ಕೂ ಹೆಚ್ಚು ಪ್ರವಾಸಿಗರು!

ಪುಣೆ.15.ಜೂನ್.25:- ಪುಣೆ ಸೇತುವೆ ಕುಸಿತ: ಭಾನುವಾರ ಮಧ್ಯಾಹ್ನ 3.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ, ವಾರಾಂತ್ಯದ ಕಾರಣ ಆ…

30 minutes ago

UGC NET ಜೂನ್ 2025 ನಗರ ಸೂಚನಾ ಚೀಟಿ ಬಿಡುಗಡೆಯಾಗಲಿದೆ,

ಹೊಸ ದೆಹಲಿ.15.ಜೂನ್.25:- ಯುಜಿಸಿ NET EXAM HALL TICKET AND CITY....ಯುಜಿಸಿ ನೆಟ್ ಜೂನ್ 2025 ಪರೀಕ್ಷೆಯನ್ನು ಜೂನ್ 25…

53 minutes ago

ಇಂದು ಮುಖ್ಯಮಂತ್ರಿ ಬದಲಾವಣೆ ಹೇಳಿಕೆ ಕೊಟ್ಟ ಸಚಿವ ಮಹದೇವಪ್ಪ

ಬೆಂಗಳೂರು.15.ಜೂನ್.25:- ಪ್ರಸ್ತುತ ಮುಖ್ಯಮಂತ್ರಿ ಬದಲಾವಣೆ ಯಾವುದೇ ಪ್ರಸ್ತಾವ ಸರ್ಕಾರ ಅಥವಾ ಪಕ್ಷದ ಮುಂದಿಲ್ಲ ಎಂದು  ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜ ಕಲ್ಯಾಣ…

2 hours ago