09/06/2025 8:21 AM

Translate Language

Home » ಲೈವ್ ನ್ಯೂಸ್ » ಕಡಲೆ ಕಾಳು ಕನಿಷ್ಠ ಬೆಂಬಲ ಬೆಲೆಯ
ಸದುಪಯೋಗ ಪಡೆದುಕೊಳ್ಳಲು ಮನವಿ

ಕಡಲೆ ಕಾಳು ಕನಿಷ್ಠ ಬೆಂಬಲ ಬೆಲೆಯ
ಸದುಪಯೋಗ ಪಡೆದುಕೊಳ್ಳಲು ಮನವಿ

Facebook
X
WhatsApp
Telegram


ಬೀದರ.29.ಜನವರಿ.25:- 2024-25ನೇ ಸಾಲಿಗೆ ಭಾರತ ಸರ್ಕಾರವು ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೀದರ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ರೈತರು ಬೆಳೆದಿರುವ  FAQ  ಗುಣಮಟ್ಟದ ಕಡಲೆ ಕಾಳನ್ನು ಪ್ರತಿ ಕ್ವಿಂಟಾಲಿಗೆ ರೂ. 5650 ದರದಲ್ಲಿ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ರೈತರಿಂದ ಖರೀದಿಸಲು  ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ಬೆಂಗಳೂರನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿ, ರಾಜ್ಯ ಸರ್ಕಾರ ಆದೇಶಿಸಿರುತ್ತದೆ. 

ಈ ಆದೇಶದನ್ವಯ ಮಾನ್ಯ ಜಿಲ್ಲಾಧಿಕಾರಿಗಳು ಬೀದರ ಹಾಗೂ ಅಧ್ಯಕ್ಷರು ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿ ಬೀದರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಗಳ ಪ್ರಕಾರ ಬೀದರ ಜಿಲ್ಲೆಯಲ್ಲಿ ಒಟ್ಟು 85 ಖರೀದಿ ಕೇಂದ್ರಗಳನ್ನು  FAQ   ಗುಣಮಟ್ಟದ ಕಡಲೆ ಕಾಳನ್ನು  MSP  ದರದಲ್ಲಿ ರೈತರಿಂದ ಖರೀದಿಸಲು ತೆರೆಯಲಾಗಿದೆ.


ರಾಜ್ಯ ಸರ್ಕಾರದ ಆದೇಶ ಹೊರಡಿಸಿದ ದಿನಾಂಕದಿಂದ ರೈತರ ನೋಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗಧಿಪಡಿಸಿದೆ. ಖರೀದಿ ಪ್ರಕ್ರಿಯೆಯಲ್ಲಿ ರೈತರು  ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್‍ನಂತೆ ಹಾಗೂ ಪ್ರತಿ ರೈತರಿಗೆ ಗರಿಷ್ಠ 20 ಕ್ವಿಂಟಾಲ್‍ನಂತೆ   FAQ   ಗುಣಮಟ್ಟದ ಕಡಲೆ ಕಾಳು ಮಾರಾಟ ಮಾಡಬಹುದಾಗಿದೆ. 

ಖರೀದಿ ಕೇಂದ್ರಗಳು ಲಾಗ್‍ಇನ್ ಕ್ರೆಡೆನ್ಸಿಯಲ್ಸ್‍ಗಳನ್ನು ಪಡೆದು ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದ ಮೇಲೆ ನೋಂದಣಿ ಮಾಡಿಕೊಳ್ಳಲು ಇಚ್ಛಿಸುವ ರೈತರು ಸಮೀಪದ ಖರೀದಿ ಕೇಂದ್ರಗಳಿಗೆ ನೋಂದಣಿ ಮಾಡಿಸಿಕೊಂಡು ತಮ್ಮ ಕಡಲೆಕಾಳು ಉತ್ಪನ್ನವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮಾರಾಟ ಮಾಡಿ ಸದರಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಟಾಸ್ಕ್‍ಫೋರ್ಸ ಸಮಿತಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!