ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

ಬೆಂಗಳೂರು.20.ಮೇ.25:- ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ರಾಮನಗರ ಜಿಲ್ಲೆಯ ಬೆಂಗಳೂರು- ಕನಕಪುರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕೆ.ಎಸ್.ಆರ್.ಟಿ ಬಸ್ ಮೋರಿಗೆ ಪಲ್ಟಿಯಾಗಿದೆ. ಬಸ್‌ನಲ್ಲಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿ‌ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್‌ಐ ನಾಗರಾಜ್ ಹಾಗೂ ಮತ್ತೊಬ್ಬ ನಾಗರಿಕರು ಮೃತರು. ಗಾಯಾಳುಗಳ ಪೈಕಿ ಒಬ್ಬರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರನ್ನು ದಯಾನಂದ ಸಾಗರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಬಸ್ಸು ಬೆಳಿಗ್ಗೆ ಕನಕಪುರದಿಂದ ಬೆಂಗಳೂರಿಗೆ ಹೋಗುತ್ತಿತ್ತು. ಕಗ್ಗಲೀಪುರ ಠಾಣೆ ಸಮೀಪ ನಿಯಂತ್ರಣ ಕಳೆದುಕೊಂಡ ಚಾಲಕ, ರಸ್ತೆ ವಿಭಜಕದ ಮೇಲೆ‌ ಹತ್ತಿಸಿದ್ದಾನೆ.

ಪಕ್ಕದ ರಸ್ತೆಗೆ ನುಗ್ಗಿದ ಬಸ್, ಎದುರಿಗೆ ಬಂದ ನಾಗರಾಜ್ ಮತ್ತು ಮತ್ತೊಬ್ಬರು ಇದ್ದ ಬೈಕ್ ಗೆ ಡಿಕ್ಕಿ ಹೊಡೆದು, ಪಕ್ಕದ ಹಳ್ಳಕ್ಕೆ ಬಿದ್ದಿದೆ. ಈ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

prajaprabhat

Recent Posts

ರಾಜ್ಯದ ವಿಕಲಚೇತನ ವ್ಯಕ್ತಿಗಳ  ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು.14.ಜೂನ್.25:- ಪ್ರಸ್ತಕ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ…

31 minutes ago

ಕೇಂದ್ರ ಶಿಕ್ಷಣ ಯೋಜನೆ – ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ (P M VIDYALXMI SCHEMES) ಯೋಜನೆ

ಹೊಸ ದೆಹಲಿ.14.ಜೂನ್.25:- (PM VIDYALAXMI SCHEMES) ಕೇಂದ್ರ ಶಿಕ್ಷಣ ಯೋಜನೆ - ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ (ಪಿಎಂ-ವಿದ್ಯಾಲಕ್ಷ್ಮಿ) ಯೋಜನೆ "ಪಿಎಂ…

48 minutes ago

ಗುತ್ತಿಗೆ ಮೀಸಲು ಜಾರಿಗೆ ವಿಧೇಯಕ ವಿಂಗಡಣೆ

ಬೆಂಗಳೂರು.14.ಜೂನ್.25:- ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆ (ಕೆಟಿಪಿಪಿ) ತಿದ್ದುಪಡಿ ವಿಧೇಯಕವನ್ನೇ ವಿಂಗಡಿಸುವ ಗಂಭೀರ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿದೆ.…

55 minutes ago

ಸೊಸೈಟಿಗಳು ಹಾಗೂ ಟ್ರಸ್ಟ್‌ಗಳಿಂದ  ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಅಹ್ವಾನ

ಶಿವಮೊಗ್ಗ.14.ಜೂನ್.25:-  ಸೊಸೈಟಿಗಳು ಹಾಗೂ ಟ್ರಸ್ಟ್‌ಗಳಿಂದ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ಹಾಗೂ ಕರ್ನಾಟಕದ ಸೊಸೈಟಿ ನೊಂದಣಿ…

2 hours ago

ನಿವೃತ್ತ ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ಸಿಬ್ಬಂದಿಗಳಿಗೆ ‘ನಿವೃತ್ತಿ ವೇತನ ಹೆಚ್ಚಳ ಸರ್ಕಾರ ಆದೇಶ.!

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎಂಬಂತೆ ನಿವೃತ್ತಿ ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ…

3 hours ago

ಭಾಗ್ಯಲಕ್ಷ್ಮೀ ಯೋಜನೆಗೆ 18 ವರ್ಷ ಪೂರ್ಣ: ಮೊದಲ ಫಲಾನುಭವಿಗಳಿಗೆ ಹಣ ರವಾನೆ ಆರಂಭ

ಬೀದರ.14.ಜೂನ್.25:- ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ  ಬರುವ ಭಾಗ್ಯಲಕ್ಷ್ಮೀ ಯೋಜನೆಯಡಿ ದಿನಾಂಕ:01-06-2006 ರಿಂದ 31-07-2008ರ…

8 hours ago