ಬೀದರ.25.ಫೆಬ್ರುವರಿ.25: ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012 ರ ರಡಿ ಜಲಸಂಪನ್ಮೂಲ ಇಲಾಖೆಯ ಅಧಿನಕ್ಕೊಳಪಡುವ ದಿನಗೂಲಿ ನೌಕರರುಗಳನ್ನು ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರುಗಳನ್ನು ಸಕ್ರಮಗೊಳಿಸುವ ಸಂಬಂಧ ಅನಾಮಧೇಯ ವ್ಯಕ್ತಿಗಳು ಸರ್ಕಾರ ಮತ್ತು ಸರ್ಕಾರದ ಅಧಿಕಾರಿಗಳ ಹೆಸರಿನಲ್ಲಿ ಹೊರಡಿಸುತ್ತಿರುವ ನಕಲು ಅಧಿಸೂಚನೆ, ಆದೇಶ, ಪ್ರಕಟಣೆ ಪತ್ರಗಳನ್ನು ಹೊರಡಿಸಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಅಮಾಯಕ, ಬಡ, ಮುಗ್ಧ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವ ಕುರಿತಂತೆ ಸಾರ್ವಜನಿಕರು ಯಾವುದೇ ಆಮಿಷಗಳಿಗೆ ಬಲಿಯಾಗಬಾರದೆಂದು ಬೀದರ ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.