ಬೆಂಗಳೂರು.11.ಮಾರ್ಚ.25:- ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ,ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು, ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ.
ಪುಸ್ತಕದ ಹೆಸರು:
ಲೇಖಕರ ಹೆಸರು:
ಪ್ರಕಟವಾದ ವರ್ಷ:
ಪ್ರಕಾಶಕರ ಹೆಸರು:
ಮುದ್ರಣಾಲಯದ ಹೆಸರು:
ಮುಖಪುಟ ಚಿತ್ರ :
ರಚನೆಯ ಕಲಾವಿದರ ಹೆಸರು:
ಚಿತ್ರ ಕಲಾವಿದರ :
ಪೂರ್ಣ ವಿಳಾಸ:
ದೂರವಾಣಿ ಸಂಖ್ಯೆ :
ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಮಾ.29 ರೊಳಗಾಗಿ ಈ ವಿಳಾಸಕ್ಕೆ ಕಳುಹಿಸಿ.
ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.
ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ ಹಾಗೂ ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು -560002 ಮತ್ತು ವೆಬ್ಸೈಟ್
https://kpp.karnataka.gov.in , ದೂ.080-22484516/ 22107704 ಗೆ ಸಂಪರ್ಕಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ಅವರು ತಿಳಿಸಿದ್ದಾರೆ.
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…
ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…