Home » ಲೈವ್ ನ್ಯೂಸ್ » ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Facebook
X
WhatsApp
Telegram

ಬೆಂಗಳೂರು.30.ಡಿಸೆಂಬರ್.25: 2025-26ನೇ ಸಾಲಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ‘ಧನಸಹಾಯ’ ಯೋಜನೆಯಡಿ ಅರ್ಜಿ ಸಲ್ಲಿಕೆ ಅವಧಿಯನ್ನು 2026ರ ಜ.9ರವರೆಗೆ ವಿಸ್ತರಿಸಿದೆ.ಸಾಂಸ್ಕೃತಿಕ ವಾತಾವರಣ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಅರ್ಹ ಸಾಂಸ್ಕೃತಿಕ ಸಂಘ- ಸಂಸ್ಥೆಗಳಿಗೆ ಈ ಯೋಜನೆಯಡಿ ಆರ್ಥಿಕ ನೆರವು ಒದಗಿಸಲಾಗುತ್ತದೆ.

2025-26ನೇ ಸಾಲಿಗೆ ಯೋಜನೆಯಡಿ ಆರ್ಥಿಕ ನೆರವಿಗೆ ಸಂಬಂಧಿಸಿದಂತೆ ಡಿ.1ರಿಂದ ಡಿ.30ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ತಾಂತ್ರಿಕ ಕಾರಣದಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದವರು, ಅವಧಿ ವಿಸ್ತರಿಸಲು ಇಲಾಖೆಗೆ ಆಗ್ರಹಿಸಿದ್ದರು. ಆದ್ದರಿಂದ 10 ದಿನ ವಿಸ್ತರಿಸಲಾಗಿದೆ.

ಅರ್ಹ ಸಂಘ- ಸಂಸ್ಥೆಗಳು ಸೇವಾಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ನೇರವಾಗಿ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology