09/06/2025 4:27 PM

Translate Language

Home » ಲೈವ್ ನ್ಯೂಸ್ » ಕಬ್ಬು ಬೆಲೆ ನಿಗದಿ ಸಭೆ
ಪ್ರತಿ ಟನ್‌ಗೆ ರೂ. 100 ಹೆಚ್ಚುವರಿ
ನೀಡುವಂತೆ.ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ.

ಕಬ್ಬು ಬೆಲೆ ನಿಗದಿ ಸಭೆ
ಪ್ರತಿ ಟನ್‌ಗೆ ರೂ. 100 ಹೆಚ್ಚುವರಿ
ನೀಡುವಂತೆ.ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ.

Facebook
X
WhatsApp
Telegram


06.ಜ.25.ಬೀದರ:- ಕಬ್ಬು ದರ ಹೆಚ್ಚಳ ಹಾಗೂ ಬೆಲೆ ನಿಗದಿ ಕುರಿತಂತೆ ಇಂದು ಜಿಲ್ಲಾಡಳಿತದ ಸಭಾಂಗಣದಲ್ಲಿ ಆಯೋಜಿಸಲಾದ ರೈತ ಮುಖಂಡರ ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರ ಹಾಗೂ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಈ ಬಾರಿ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ರೂ. 100 ಹೆಚ್ಚು ದರ ನೀಡುವಂತೆ ತಿಳಿಸಿದರು.


ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದು, ಕನಿಷ್ಟ 3 ಸಾವಿರ ಪ್ರತಿ ಟನ್‌ಗೆ ನೀಡುವಂತೆ ರೈತ ಸಂಘದ ಪದಾಧಿಕಾರಿಗಳು ಸಚಿವರಿಗೆ ತಮ್ಮ ಅಹವಾಲು ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರ ಸಮಸ್ಯೆಗಳನ್ನು ಸಹ ಆಲಿಸಿದ ಸಚಿವರು ಈ ಬಾರಿ ಸಕ್ಕರೆ ಬೆಲೆ ಮಾರುಕಟ್ಟೆಯಲ್ಲಿ ಕಡಿಮೆಯಾಗಿದ್ದು, ಮೊಲಾಸಿಸ್ ಬೆಲೆ ಸಹ ಕಡಿಮೆಯಾಗಿದ್ದು, ಕಬ್ಬು ಕಟಾವು ಬೆಲೆ ಸಹ ಹೆಚ್ಚಾಗಿರುವುದನ್ನು ತಿಳಿಸಿದರು.


ಸಕ್ಕರೆ ಕಾರ್ಖಾನೆ ಹಾಗೂ ರೈತರು ಒಂದೇ ನಾಣ್ಯದ ಎರಡು ಮುಖವಿದ್ದಂತೆ, ರೈತರಿಗೆ ಅನುಕೂಲವಾಗುವಂತೆ ಕಾರ್ಖಾನೆಗಳು ಕಳೆದ ಸಾಲಿನ ಬೆಲೆಗಿಂತ ಪ್ರತಿ ಟನ್‌ಗೆ ರೂ. 100 ಹೆಚ್ಚು ಬೆಲೆ ನೀಡುವಂತೆ ಸಚಿವರು ಕಾರ್ಖಾನೆ ಅಧ್ಯಕ್ಷರಿಗೆ ತಿಳಿಸಿದರು. ಕಳೆದ ಬಾರಿ 2600 ರೂ. ದರ ನೀಡಿದ್ದು ಈ ಬಾರಿ 2700 ರೂ. ಹಾಗೂ ಒಂದು ಕೆಜಿ ಸಕ್ಕರೆ ನೀಡುವ ಬಗ್ಗೆ ಸಚಿವರು ತಿಳಿಸಿದರು.


ಕಬ್ಬು ಸಾಗಾಟ ಮಾಡಿದ ರೈತರಿಗೆ ಕಾರ್ಖಾನೆಗಳು ಕಡ್ಡಾಯವಾಗಿ 15 ದಿನಕ್ಕೊಮ್ಮೆ ಹಣ ಪಾವತಿಸುವಂತೆ ಸಚಿವರು ಸೂಚಿಸಿದರು.

ಆಕಸ್ಮಿಕ ಬೆಂಕಿ ತಗುಲಿದ ಕಬ್ಬು ಬೆಳೆಯನ್ನು ಆದ್ಯತೆ ಮೇರೆಗೆ ಕಟಾವು ಮಾಡಿ ಸಾಗಿಸುವಂತೆಯೂ ಸಚಿವರು ಕಾರ್ಖಾನೆಗಳಿಗೆ ಸೂಚಿಸಿದರು.


ತೊಗರಿ ನಷ್ಟಕ್ಕೆ ಸಮೀಕ್ಷೆ: ಜಿಲ್ಲೆಯಲ್ಲಿ ತೊಗರಿ ಬೆಳೆಗಾರರು ಸಂಕಷ್ಟದಲ್ಲಿದ್ದು, ಹೂ, ಕಾಯಿ ಹಾನಿಯಾದ ಕುರಿತು ರೈತರು ಮನವಿ ನೀಡಿದ ಹಿನ್ನೆಲೆಯಲ್ಲಿ ರೈತರ ಹೊಲಗಳಿಗೆ ಕೃಷಿ ಅಧಿಕಾರಿಗಳು ಭೇಟಿ ನೀಡಿ ನಷ್ಟವಾಗಿರುವ ಬಗ್ಗೆ ಸಮೀಕ್ಷೆ ಕೈಗೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರಿಗೆ ತಿಳಿಸಿದರು.


ಜಿಲ್ಲೆಯ 70 ಕಡೆ ತೊಗರಿ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಶೀಘ್ರವೇ ಖರೀದಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದ್ದು, ಇನ್ನೂ ಹೆಚ್ಚಿನ ಖರೀದಿ ಕೇಂದ್ರಗಳ ಅಗತ್ಯವಿದ್ದಲ್ಲಿ ಸ್ಥಾಪಿಸಲಾಗುವುದೆಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.


ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ಪ್ರವಿಣ ಬರಗಲ್, ನಾರಾಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾದ ಡಿ.ಕೆ.ಸಿದ್ರಾಮ, ಭಾಲ್ಯೇಶ್ವರ ಬೀದರ ಕಿಸಾನ, ಭವಾನಿ ಶುಗರ, ಮಹಾತ್ಮಾಗಾಂಧಿ ಸಕ್ಕರೆ ಕಾರ್ಖಾನೆಯ ಮುಖ್ಯಸ್ಥರು ಸೇರಿದಂತೆ ರೈತ ಮುಖಂಡರಾದ ಮಲ್ಲಿಕಾರ್ಜುನ ಸ್ವಾಮಿ, ಕಾಶಿನಾಥ ಮಲಶೆಟ್ಟಿ, ಖಾಸಿಂ ಅಲಿ, ವಿಠಲರಾವ ಮೇತ್ರೆ, ಸೋಮನಾಥ ಬಣಕೂರ, ಸತೀಶ ನ್ನಾರೆ, ನಾಗನಾಥ ಪಾಟೀಲ, ಕರಬಸಪ್ಪ ಹುಡಗಿ, ಶಾಂತಮ್ಮ ಮಾಲಗೆ, ರಾಮರಾವ, ವಿಠಲರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಮ ಸರ್ಕಾರ ರೈತ ಪರವಾಗಿ ಇದೆ

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!