ಕಬ್ಬು ಬೆಲೆ ನಿಗದಿ ಸಭೆಪ್ರತಿ ಟನ್‌ಗೆ ರೂ. 100 ಹೆಚ್ಚುವರಿನೀಡುವಂತೆ.ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ.


06.ಜ.25.ಬೀದರ:- ಕಬ್ಬು ದರ ಹೆಚ್ಚಳ ಹಾಗೂ ಬೆಲೆ ನಿಗದಿ ಕುರಿತಂತೆ ಇಂದು ಜಿಲ್ಲಾಡಳಿತದ ಸಭಾಂಗಣದಲ್ಲಿ ಆಯೋಜಿಸಲಾದ ರೈತ ಮುಖಂಡರ ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರ ಹಾಗೂ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಈ ಬಾರಿ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ರೂ. 100 ಹೆಚ್ಚು ದರ ನೀಡುವಂತೆ ತಿಳಿಸಿದರು.


ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದು, ಕನಿಷ್ಟ 3 ಸಾವಿರ ಪ್ರತಿ ಟನ್‌ಗೆ ನೀಡುವಂತೆ ರೈತ ಸಂಘದ ಪದಾಧಿಕಾರಿಗಳು ಸಚಿವರಿಗೆ ತಮ್ಮ ಅಹವಾಲು ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರ ಸಮಸ್ಯೆಗಳನ್ನು ಸಹ ಆಲಿಸಿದ ಸಚಿವರು ಈ ಬಾರಿ ಸಕ್ಕರೆ ಬೆಲೆ ಮಾರುಕಟ್ಟೆಯಲ್ಲಿ ಕಡಿಮೆಯಾಗಿದ್ದು, ಮೊಲಾಸಿಸ್ ಬೆಲೆ ಸಹ ಕಡಿಮೆಯಾಗಿದ್ದು, ಕಬ್ಬು ಕಟಾವು ಬೆಲೆ ಸಹ ಹೆಚ್ಚಾಗಿರುವುದನ್ನು ತಿಳಿಸಿದರು.


ಸಕ್ಕರೆ ಕಾರ್ಖಾನೆ ಹಾಗೂ ರೈತರು ಒಂದೇ ನಾಣ್ಯದ ಎರಡು ಮುಖವಿದ್ದಂತೆ, ರೈತರಿಗೆ ಅನುಕೂಲವಾಗುವಂತೆ ಕಾರ್ಖಾನೆಗಳು ಕಳೆದ ಸಾಲಿನ ಬೆಲೆಗಿಂತ ಪ್ರತಿ ಟನ್‌ಗೆ ರೂ. 100 ಹೆಚ್ಚು ಬೆಲೆ ನೀಡುವಂತೆ ಸಚಿವರು ಕಾರ್ಖಾನೆ ಅಧ್ಯಕ್ಷರಿಗೆ ತಿಳಿಸಿದರು. ಕಳೆದ ಬಾರಿ 2600 ರೂ. ದರ ನೀಡಿದ್ದು ಈ ಬಾರಿ 2700 ರೂ. ಹಾಗೂ ಒಂದು ಕೆಜಿ ಸಕ್ಕರೆ ನೀಡುವ ಬಗ್ಗೆ ಸಚಿವರು ತಿಳಿಸಿದರು.


ಕಬ್ಬು ಸಾಗಾಟ ಮಾಡಿದ ರೈತರಿಗೆ ಕಾರ್ಖಾನೆಗಳು ಕಡ್ಡಾಯವಾಗಿ 15 ದಿನಕ್ಕೊಮ್ಮೆ ಹಣ ಪಾವತಿಸುವಂತೆ ಸಚಿವರು ಸೂಚಿಸಿದರು.

ಆಕಸ್ಮಿಕ ಬೆಂಕಿ ತಗುಲಿದ ಕಬ್ಬು ಬೆಳೆಯನ್ನು ಆದ್ಯತೆ ಮೇರೆಗೆ ಕಟಾವು ಮಾಡಿ ಸಾಗಿಸುವಂತೆಯೂ ಸಚಿವರು ಕಾರ್ಖಾನೆಗಳಿಗೆ ಸೂಚಿಸಿದರು.


ತೊಗರಿ ನಷ್ಟಕ್ಕೆ ಸಮೀಕ್ಷೆ: ಜಿಲ್ಲೆಯಲ್ಲಿ ತೊಗರಿ ಬೆಳೆಗಾರರು ಸಂಕಷ್ಟದಲ್ಲಿದ್ದು, ಹೂ, ಕಾಯಿ ಹಾನಿಯಾದ ಕುರಿತು ರೈತರು ಮನವಿ ನೀಡಿದ ಹಿನ್ನೆಲೆಯಲ್ಲಿ ರೈತರ ಹೊಲಗಳಿಗೆ ಕೃಷಿ ಅಧಿಕಾರಿಗಳು ಭೇಟಿ ನೀಡಿ ನಷ್ಟವಾಗಿರುವ ಬಗ್ಗೆ ಸಮೀಕ್ಷೆ ಕೈಗೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರಿಗೆ ತಿಳಿಸಿದರು.


ಜಿಲ್ಲೆಯ 70 ಕಡೆ ತೊಗರಿ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಶೀಘ್ರವೇ ಖರೀದಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದ್ದು, ಇನ್ನೂ ಹೆಚ್ಚಿನ ಖರೀದಿ ಕೇಂದ್ರಗಳ ಅಗತ್ಯವಿದ್ದಲ್ಲಿ ಸ್ಥಾಪಿಸಲಾಗುವುದೆಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.


ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ಪ್ರವಿಣ ಬರಗಲ್, ನಾರಾಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾದ ಡಿ.ಕೆ.ಸಿದ್ರಾಮ, ಭಾಲ್ಯೇಶ್ವರ ಬೀದರ ಕಿಸಾನ, ಭವಾನಿ ಶುಗರ, ಮಹಾತ್ಮಾಗಾಂಧಿ ಸಕ್ಕರೆ ಕಾರ್ಖಾನೆಯ ಮುಖ್ಯಸ್ಥರು ಸೇರಿದಂತೆ ರೈತ ಮುಖಂಡರಾದ ಮಲ್ಲಿಕಾರ್ಜುನ ಸ್ವಾಮಿ, ಕಾಶಿನಾಥ ಮಲಶೆಟ್ಟಿ, ಖಾಸಿಂ ಅಲಿ, ವಿಠಲರಾವ ಮೇತ್ರೆ, ಸೋಮನಾಥ ಬಣಕೂರ, ಸತೀಶ ನ್ನಾರೆ, ನಾಗನಾಥ ಪಾಟೀಲ, ಕರಬಸಪ್ಪ ಹುಡಗಿ, ಶಾಂತಮ್ಮ ಮಾಲಗೆ, ರಾಮರಾವ, ವಿಠಲರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಮ ಸರ್ಕಾರ ರೈತ ಪರವಾಗಿ ಇದೆ

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

2 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

2 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

2 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

2 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

3 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

5 hours ago