ಕಮಲನಗರ.18.ಜೂನ್.25:- ಕಮಲನಗರ ತಾಲ್ಲೂಕಿನ ಕೋಟಗ್ಯಾಳ-ಡೋಣಗಾಂವ(ಎಂ) ಕ್ರಾಸ್ ಮಧ್ಯ ರಸ್ತೆಯಲ್ಲಿ ಸಾರಿಗೆ ಬಸ್ನ ಸ್ಟೇರಿಂಗ್ ಜಾಮ್ ಆಗಿ ರಸ್ತೆ ಬದಿಯಲ್ಲಿ ಮಂಗಳವಾರ ಪಲ್ಟಿಯಾಗಿದೆ. ಎಂಟು ಜನರಿಗೆ ಗಾಯಗೊಂಡಿದ್ದಾರೆ.
ಔರಾದ್ ಸಾರಿಗೆ ಘಟಕಕ್ಕೆ ಸೇರಿದ ಈ ಬಸ್ ಉದಗೀರ್- ಔರಾದ್ ವಾಯಾ ಕಮಲನಗರ ಮಾರ್ಗವಾಗಿ ಔರಾದ್ ಪಟ್ಟಣಕ್ಕೆ ತೆರಳುತ್ತಿತ್ತು.
ಗಂಭೀರ ಗಾಯಗೊಂಡ ಪ್ರಯಾಣಿಕರನ್ನು ಕಮಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿರುವುದು
ಈ ವೇಳೆ ಕೋಟಗ್ಯಾಳ-ಡೋಣಗಾಂವ(ಎಂ) ಕ್ರಾಸ್ ಮಧ್ಯದ ಮುಖ್ಯರಸ್ತೆಯಲ್ಲಿ ಸ್ಟೇರಿಂಗ್ ಜಾಮ್ ಆಗಿ ಬಸ್ ರಸ್ತೆ ಪಕ್ಕದ ತಗ್ಗಿನಲ್ಲಿ ಉರುಳಿ ಬಿದ್ದಿದೆ. ಬಸ್ನಲ್ಲಿ 55 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಆ ಪೈಕಿ 8 ಜನರಿಗೆ ಗಾಯಗಳಾಗಿವೆ. ಕಮಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಐವರು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೂವರು ಪ್ರಯಾಣಿಕರಿಗೆ ಬೀದರ್ ಮತ್ತು ಉದಗೀರ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು.18.ಜೂನ್.25:- ರಾಜ್ಯದಲ್ಲಿ ಖಾಲಿಯಿರುವ ಹುದ್ದೆಗಳು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿರುವ KPTCL ನೇಮಕಾತಿ ಖಾಲಿ ಇರುವ 35000 ಸಾವಿರ ನಿಮ್ಮ…
ಗುಲ್ಬರ್ಗಾ.18.ಜೂನ್.25:-ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರ್ಗಿ ಇಲ್ಲಿ ಲಿ ⁹óದಶಕಗಳ ಹಿಂದೆಯೇ ಪ್ರಭಾವ ಬಳಸಿಕೊಂಡು, ಇಲ್ಲದ ಹುದ್ದೆಗಳನ್ನು ಸೃಷ್ಟಿಸಿ ಹೊರಗುತ್ತಿಗೆ ಆಧಾರದಲ್ಲಿ ನುಸುಳಿ…
ಪಾಕಿಸ್ತಾನದೊಂದಿಗಿನ ಸಮಸ್ಯೆಗಳನ್ನು ಪರಿಹರಿಸಲು ಭಾರತವು ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯನ್ನು ಎಂದಿಗೂ ಸ್ವೀಕರಿಸುವುದಿಲ್ಲ ಮತ್ತು ಅದನ್ನು ಎಂದಿಗೂ ಸ್ವೀಕರಿಸುವುದಿಲ್ಲ ಎಂದು ಪ್ರಧಾನಿ…
ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಕೊಂಡಮೊಡಲು ಅರಣ್ಯ ಪ್ರದೇಶದಲ್ಲಿ ಇಂದು ಭದ್ರತಾ ಸಿಬ್ಬಂದಿ ಮತ್ತು ಶಸ್ತ್ರಸಜ್ಜಿತ ಮಾವೋವಾದಿಗಳ ನಡುವಿನ…
ಕೊಪ್ಪಳ.18.ಜೂನ್.25:- ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಕ್ಯಾಬಿನೆಟ್ ಸಚಿವರಾದ ಶಿವರಾಜ್ ತಂಗಡಗಿ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ವಾಹನದಲ್ಲಿದ್ದ ಎಎಸ್ಐಗೆ ಗಂಭೀರ…
ಚಾಮರಾಜನಗರ.18.ಜೂನ್.25:- ಯಳಂದೂರು: ಸರಕಾರಿ ಶಾಲೆ ಮತ್ತು ಅಂಗನವಾಡಿಗಳಲ್ಲಿ ಕಡು ಬಡವರ ಮಕ್ಕಳಿರುವುದರಿಂದ ಪಂಚಾಯತಿಯ ಅನುದಾನವನ್ನು ಸದ್ಬಳಿಕೆ ಮಾಡಿಕೊಂಡು ಚೇರ್, ಆಟಿಕೆ…