ಬೀದರ 16.ಜನವರಿ.25:- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯಲ್ಲಿ ಬೀದರ ಜಿಲ್ಲಾ ವ್ಯಾಪ್ತಿಯಲ್ಲಿ ಹೊಸದಾಗಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಅರ್ಹ ಉನ್ನತ ಶಿಕ್ಷಣ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೇಡೆ” ಎಂಬ ಧ್ಯೇಯ ವಾಕ್ಯದೊಂದಿಗೆ ಉನ್ನತ ಶಿಕ್ಷಣವನ್ನು ಎಲ್ಲರ ಮನೆ ಬಾಗಿಲಿಗೆ ತಲುಪಿಸುತ್ತಾ ಶಿಕ್ಷಣ ವಂಚಿತರಿಗೆ ಶಿಕ್ಷಣ ಪಡೆಯುವ ಸೌಲಭ್ಯವನ್ನು ನೀಡುವುದು ವಿಶ್ವವಿದ್ಯಾನಿಲಯದ ಮುಖ್ಯ ಧ್ಯೇಯೋದ್ದೇಶವಾಗಿದೆ.
ಈ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯವು ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಪ್ರಾದೇಶಿಕ ಕೇಂದ್ರ ಮತ್ತು ಕಲಿಕಾರ್ಥಿ ಸಹಾಯ ಕೇಂದ್ರವನ್ನು ಸ್ಥಾಪಿಸಿ ಕಾರ್ಯನಿರ್ವಹಿಸುತ್ತಾ ಬರುತ್ತಿದೆ.
ಆಸಕ್ತರು ಕರಾಮುವಿಯ ಅಧಿಕೃತ ವೆಬ್ಸೈಟ್ https://ksouportal.com/reg_sc/StudyCentreRegistrationnew.aspx ನಲ್ಲಿ ಅನ್ಲೈನ್ ಮೂಲಕ ದಿನಾಂಕ: 18-01-2025 ರೊಳಗೆ ಅರ್ಜಿಯನ್ನು ಸಲ್ಲಿಸಿದ ನಂತರ ಭರ್ತಿ ಮಾಡಿರುವ ಅರ್ಜಿಯನ್ನು ಡೀನ್ (ಅ.ಕೇಂ) ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮುಕ್ತ ಗಂಗೋತ್ರಿ, ಮೈಸೂರು-570006 ಇಲ್ಲಿಗೆ ಸಲ್ಲಿಸಬೇಕು.
ಮುಂದುವರೆದು ಬೀದರ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಸಹ ಕಲಿಕಾರ್ಥಿ ಸಹಾಯ ಕೇಂದ್ರ ಸ್ಥಾಪನೆಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಆಗೂ ಇವರಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9986696487 ಗಎ ಸಂಪರ್ಕಿಸುವಂತೆ ಪ್ರಾದೇಶಿಕ ನಿರ್ದೇಶಕರು ಕರಾಮುವಿ ಪ್ರಾದೇಶಿಕ ಕೇಂದ್ರ ಬೀದರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.