Categories: ರಾಜ್ಯ

ಕರ್ನಾಟಕದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಹದಿನೈದನೇ ಹಣಕಾಸು ಆಯೋಗದ (ಎಕ್ಸ್ ವಿ ಎಫ್ ಸಿ) ಅನುದಾನ ಬಿಡುಗಡೆ ಮಾಡಲಾಗಿದೆ

22 ನವೆಂಬರ 24. ನ್ಯೂ ದೆಹಲಿ:- ಕೇಂದ್ರ ಸರ್ಕಾರವು 2024-25ನೇ ಆರ್ಥಿಕ ವರ್ಷದಲ್ಲಿ ಕರ್ನಾಟಕದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಹದಿನೈದನೇ ಹಣಕಾಸು ಆಯೋಗದ (ಎಕ್ಸ್ ವಿ ಎಫ್ ಸಿ) ಅನುದಾನದಲ್ಲಿ 448.29 ಕೋಟಿ ರೂಪಾಯಿಗಳ ಮೊದಲ ಕಂತನ್ನು ಬಿಡುಗಡೆ ಮಾಡಿದೆ. ಈ ಮೊತ್ತವು ರಾಜ್ಯದ ಎಲ್ಲಾ ಅರ್ಹ 5949 ಗ್ರಾಮ ಪಂಚಾಯಿತಿಗಳನ್ನೂ ಒಳಗೊಂಡಿದೆ.

ಭಾರತ ಸರ್ಕಾರವು ಪಂಚಾಯತ್ ರಾಜ್ ಸಚಿವಾಲಯ ಮತ್ತು ಜಲ ಶಕ್ತಿ ಸಚಿವಾಲಯ (ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ) ಮೂಲಕ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗಾಗಿ ರಾಜ್ಯಗಳಿಗೆ ಹದಿನೈದನೇ ಹಣಕಾಸು ಆಯೋಗದ (ಎಕ್ಸ್ ವಿ ಎಫ್ ಸಿ) ಅನುದಾನವನ್ನು ಬಿಡುಗಡೆ ಮಾಡಲು ಶಿಫಾರಸು ಮಾಡುತ್ತದೆ ನಂತರ ಅದನ್ನು ಹಣಕಾಸು ಸಚಿವಾಲಯ ಬಿಡುಗಡೆ ಮಾಡುತ್ತದೆ. ಮಂಜೂರು ಮಾಡಿದ ಅನುದಾನವನ್ನು ಒಂದು ಆರ್ಥಿಕ ವರ್ಷದಲ್ಲಿ 2 ಕಂತುಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಸಂವಿಧಾನದ ಹನ್ನೊಂದನೇ ಶೆಡ್ಯೂಲ್‌ ನಲ್ಲಿರುವ ಇಪ್ಪತ್ತೊಂಬತ್ತು (29) ವಿಷಯಗಳ ಅಡಿಯಲ್ಲಿ ಸ್ಥಾನ-ನಿರ್ದಿಷ್ಟ ಅಗತ್ಯಗಳಿಗಾಗಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ವೇತನಗಳು ಮತ್ತು ಇತರ ವೆಚ್ಚಗಳನ್ನು ಹೊರತುಪಡಿಸಿ ಈ ನಿರ್ದಿಷ್ಟ ಅನುದಾನವನ್ನು ಬಳಸಿಕೊಳ್ಳುತ್ತವೆ. ಈ ನಿರ್ದಿಷ್ಟ ಅನುದಾನವನ್ನು ಕೆಳಕಂಡ ಮೂಲಭೂತ ಸೇವೆಗಳಿಗೆ ಬಳಸಬಹುದು.

(ಎ) ನೈರ್ಮಲ್ಯ ಮತ್ತು ಬಯಲು ಮಲವಿಸರ್ಜನೆ ಮುಕ್ತ ಪರಿಸ್ಥಿತಿಗಳನ್ನು ನಿರ್ವಹಿಸುವುದು ಮತ್ತು ಮನೆ ತ್ಯಾಜ್ಯದ ನಿರ್ವಹಣೆ ಮತ್ತು ಸಂಸ್ಕರಣೆ ಸೇರಿದಂತೆ ಮತ್ತು ನಿರ್ದಿಷ್ಟವಾಗಿ ಮಾನವ ಮಲ ಮತ್ತು ಮಲದ ಕೆಸರು ನಿರ್ವಹಣೆ ಮತ್ತು (ಬಿ) ಕುಡಿಯುವ ನೀರು ಸರಬರಾಜು, ಮಳೆ ನೀರು ಕೊಯ್ಲು ಮತ್ತು ನೀರಿನ ಮರುಬಳಕೆ.

ಪಂಚಾಯತ್ ರಾಜ್ ಸಂಸ್ಥೆಗಳಿಗೆ/ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಹದಿನೈದನೇ ಹಣಕಾಸು ಆಯೋಗದ ಅನುದಾನವನ್ನು ಒದಗಿಸುವ ಮೂಲಕ ಗ್ರಾಮೀಣ ಸ್ವಯಂ-ಆಡಳಿತವನ್ನು ಬಲಪಡಿಸಲು ಭಾರತ ಸರ್ಕಾರವು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ನಿಧಿಯು ಸ್ಥಳೀಯ ಆಡಳಿತ ಮಂಡಳಿಗಳು ಹೆಚ್ಚು ಪರಿಣಾಮಕಾರಿ, ಜವಾಬ್ದಾರಿಯುತ ಮತ್ತು ಸ್ವತಂತ್ರವಾಗಲು ಸಹಾಯ ಮಾಡುತ್ತದೆ, ಇದು ಗ್ರಾಮೀಣ ಪ್ರದೇಶಗಳಲ್ಲಿ ಸುಸ್ಥಿರ ಮತ್ತು ಶಾಶ್ವತ ಪ್ರಗತಿಗೆ ಕಾರಣವಾಗುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್’ ಎಂಬ ದೃಷ್ಟಿಕೋನವನ್ನು ಅನುಸರಿಸಿ, ಈ ಉಪಕ್ರಮವು ಎಲ್ಲರಿಗೂ ಪ್ರಯೋಜನಕಾರಿ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ಜನರ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸುತ್ತದೆ. ಈ ಸ್ಥಳೀಯ ಸಂಸ್ಥೆಗಳು ಭಾರತದ ಅಭಿವೃದ್ಧಿಗೆ ಪ್ರಮುಖವಾಗಿವೆ ಮತ್ತು ವಿಕಸಿತ ಭಾರತವನ್ನು ನಿರ್ಮಿಸಲು ಸಹಾಯ ಮಾಡುತ್ತಿವೆ.

prajaprabhat

Recent Posts

SSC 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ

ಜೂನ್ 9 ರಂದು 14,582 ಹುದ್ದೆಗಳಿಗೆ SSC CGL 2025 ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು…

14 minutes ago

2000 ವರ್ಷಗಳ ಹಿಂದೆ ಬೌದ್ಧಧರ್ಮದ ಆಗಮನವನ್ನು ಗುರುತಿಸುವ ಪೋಸನ್ ಪೋಯವನ್ನು ಶ್ರೀಲಂಕಾ ಆಚರಿಸುತ್ತಿದೆ.

ಶ್ರೀಲಂಕಾ ಇಂದು ಪವಿತ್ರ ಪೋಸನ್ ಪೋಯ ಹಬ್ಬವನ್ನು ಆಚರಿಸುತ್ತಿದೆ, ಇದು 2,000 ವರ್ಷಗಳ ಹಿಂದೆ ಬೌದ್ಧಧರ್ಮದ ಐತಿಹಾಸಿಕ ಆಗಮನವನ್ನು ಸೂಚಿಸುತ್ತದೆ.…

44 minutes ago

ದಕ್ಷಿಣ ಭಾರತದಲ್ಲಿ ಭಾರೀ ಮಳೆ, ಪೂರ್ವ-ಮಧ್ಯ ಭಾರತದಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ: ಐಎಂಡಿ ಮುನ್ಸೂಚನೆ

ಹೊಸ ದೆಹಲಿ.10.ಜೂನ್.25:- ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡು, ಕೇರಳ, ಮಾಹೆ, ಒಡಿಶಾ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್…

2 hours ago

ಹಣಕಾಸು ಸಚಿವ ಸೀತಾರಾಮನ್ ಅಧ್ಯಕ್ಷತೆಯಲ್ಲಿ 6ನೇ NIIF ಜಿಸಿ ಸಭೆ.

ಹೊಸ ದೆಹಲಿ.10.ಜೂನ್.25:- ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ…

2 hours ago

ಭಾರತೀಯ ಯುವಕರು ಉದ್ಯೋಗಾಕಾಂಕ್ಷಿಗಳಿಂದ ಉದ್ಯೋಗ ಸೃಷ್ಟಿಕರ್ತರಾಗಿ ಪರಿವರ್ತನೆಗೊಳ್ಳುತ್ತಿದ್ದಾರೆ, ಐಐಟಿಗಳು ನಿರ್ಣಾಯಕ ಪಾತ್ರ ವಹಿಸುತ್ತಿವೆ: ಲೋಕಸಭಾ ಸ್ಪೀಕರ್

ಹೊಸ ದೆಹಲಿ.10.ಜೂನ್.25:- ಭಾರತವು ತನ್ನ ಯುವ ಪ್ರತಿಭೆ ಮತ್ತು ತಾಂತ್ರಿಕ ನಾವೀನ್ಯತೆಗಳ ಬಲದ ಮೂಲಕ ಸಮಕಾಲೀನ ಸವಾಲುಗಳನ್ನು ಎದುರಿಸುವಲ್ಲಿ ಜಾಗತಿಕ…

2 hours ago

ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದ ಶೆಲ್ ದಾಳಿಯಿಂದ ಹಾನಿಗೊಳಗಾದ 2060 ಮನೆಗಳಿಗೆ ಸರ್ಕಾರ 25 ಕೋಟಿ ನೆರವು ನೀಡಲಿದೆ.

ಹೊಸ ದೆಹಲಿ.10.ಜೂನ್.25:- ಗಡಿ ಪ್ರದೇಶಗಳಲ್ಲಿ ಹಾನಿಗೊಳಗಾದ 2,060 ಮನೆಗಳಿಗೆ ಸರ್ಕಾರ ಹೆಚ್ಚುವರಿ 25 ಕೋಟಿ ರೂಪಾಯಿಗಳನ್ನು ಒದಗಿಸಲಿದೆ. ಆಪರೇಷನ್ ಸಿಂಧೂರ್…

2 hours ago