ಕರ್ನಾಟಕದ ಸಾರ್ವಜನಿಕ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆ.
ಬೆಂಗಳೂರು.24.ಫೆಬ್ರವರಿ.26:ರಾಜ್ಯದ ಉನ್ನತ ಶಿಕ್ಷಣದ ಭವಿಷ್ಯ ರೂಪುರೇಷೆಗಳ ಕುರಿತು ಚರ್ಚಿಸಲು ಕರ್ನಾಟಕದ ಸಾರ್ವಜನಿಕ ವಿಶ್ವವಿದ್ಯಾಲಯಗಳ ಕುಲಪತಿಗಳ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಶೈಕ್ಷಣಿಕ ಮೇಲುಗೈ, ಸಂಶೋಧನಾ ನವೀನತೆ, ಡಿಜಿಟಲ್ ಪರಿವರ್ತನೆ, ಕೈಗಾರಿಕಾ ಸಹಭಾಗಿತ್ವ ಮತ್ತು ವಿದ್ಯಾರ್ಥಿ ಕೇಂದ್ರಿತ ಉಪಕ್ರಮಗಳನ್ನು ಬಲಪಡಿಸುವ ಬಗ್ಗೆ ಸಮಗ್ರ ಚರ್ಚೆ ನಡೆಯಿತು. ಘನತೆವೆತ್ತ ರಾಜ್ಯಪಾಲರು ಶ್ರೀ ತಾವರ್ಚಂದ್ ಗೆಹ್ಲೋಟ್ ರವರ ಅಧ್ಯಕ್ಷತೆಯಲ್ಲಿ ಸಮ್ಮೇಳನವು ನಡೆಯಿತು.
ಗುಣಮಟ್ಟದ ಮಾನದಂಡಗಳನ್ನು ಹೆಚ್ಚಿಸುವುದು, ಅಂತರಶಾಖಾ ಸಂಶೋಧನೆಯನ್ನು ಉತ್ತೇಜಿಸುವುದು, ಕೌಶಲ್ಯಾಧಾರಿತ ಕಾರ್ಯಕ್ರಮಗಳ ಮೂಲಕ ಉದ್ಯೋಗಾವಕಾಶಗಳನ್ನು ವಿಸ್ತರಿಸುವುದು ಹಾಗೂ ರಾಜ್ಯದ ಎಲ್ಲಾ ಭಾಗಗಳಲ್ಲಿ ಸಮಾನ ಮತ್ತು ಸಮಗ್ರ ಶಿಕ್ಷಣವನ್ನು ಖಚಿತ ಪಡಿಸುವಿಕೆ ಕುರಿತು ಪ್ರಮುಖವಾಗಿ ಚರ್ಚಿಸಲಾಯಿತು.
ಕರ್ನಾಟಕವನ್ನು ಜ್ಞಾನ ಮತ್ತು ನವೀನತೆಯ ಪ್ರಮುಖ ಕೇಂದ್ರವನ್ನಾಗಿ ರೂಪಿಸುವ ದಿಸೆಯಲ್ಲಿ ಸಾರ್ವಜನಿಕ ವಿಶ್ವವಿದ್ಯಾಲಯಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಸಂಕಲ್ಪವನ್ನು ಸಭೆ ಪುನರುಚ್ಚರಿಸಿತು.
ಪೂರ್ತಿ ದಿನ ನಡೆದ ಈ ಸಮ್ಮೇಳನದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಶ್ರೀ ಸಿದ್ಧರಾಮಯ್ಯ ರವರು ಹಾಗು ಮಾನ್ಯ ಉಪಮುಖ್ಯಮಂತ್ರಿಗಳು ಶ್ರೀ ಡಿಕೆ ಶಿವಕುಮಾರ್ ರವರು ಪಾಲ್ಗೊಂಡು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.
—

