====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================
ಬೆಂಗಳೂರು.07.ಮಾರ್ಚ.25:- ಕರ್ನಾಟಕವು ಹಲವು ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಮೂಲಕ ದೇಶದ ಪ್ರಗತಿಪರ ರಾಜ್ಯಗಳಲ್ಲೊಂದು ಎಂಬುದನ್ನು ನಿರೂಪಿಸಿದೆ, ಸಚಿವ ಪ್ರಿಯಾಂಕ ಖರ್ಗೆ
2025-26ನೇ ಸಾಲಿನ ಈ ಆಯವ್ಯಯವು ಕರ್ನಾಟಕದ ಭವ್ಯ ಭವಿಷ್ಯದ ದಿಕ್ಸೂಚಿಯಾಗಿ ಹೊರಹೊಮ್ಮಿದೆ. ಜನ ಕೇಂದ್ರೀತ ಅಭಿವೃದ್ಧಿಯ ಮಾದರಿಯನ್ನು ಅಳವಡಿಸಿಕೊಂಡಿರುವ ನಮ್ಮ ಸರ್ಕಾರವು ಸಾಮಾಜಿಕ ಬಲವರ್ಧನೆಯ ಮೂಲಕ ಆರ್ಥಿಕ ಸುಸ್ಥಿರತೆಯನ್ನು ಸಾಧಿಸುವಲ್ಲಿ ಮುನ್ನುಗ್ಗುತ್ತಿದೆ.
ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿಪರತೆಯನ್ನು ಪ್ರತಿಪಾದಿಸುವ ಕರ್ನಾಟಕ ಮಾದರಿಗೆ ದೇಶದಲ್ಲಷ್ಟೇ ಅಲ್ಲ, ಜಾಗತಿಕವಾಗಿಯೂ ಮನ್ನಣೆ ದೊರಕಿದೆ.
ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿರುವ ಈ ಬಜೆಟ್ ಕರ್ನಾಟಕದ ಪ್ರಗತಿಯ ಔನತ್ಯಕ್ಕೆ ಕಾರಣವಾಗಲಿದೆ.
ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡುವ ಕಾರ್ಯ ಯೋಜನೆಗಳೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ.
2025-26ರ ಈ ಪ್ರಗತಿಪರ ಬಜೆಟ್ ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ‘ಕರ್ನಾಟಕ ಮಾದರಿ‘ಯನ್ನು ಮತ್ತಷ್ಟು ಪ್ರಕಾಶಿಸುವಂತೆ ಮಾಡಲು ನಮ್ಮ ಸರ್ಕಾರ ಬದ್ಧತೆಯನ್ನು ಹೊಂದಿದೆ.
====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================
ದಾವಣಗೆರೆ.11.ಜೂನ್.25:- ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ ಕಾರ್ಯದ ವೈಜ್ಞಾನಿಕ ದತ್ತಾಂಶವನ್ನು ಸಂಗ್ರಹಿಸಲು ಮೇ.5 ರಿಂದ ಮನೆ ಮನೆ ಭೇಟಿ…
ಬಾಗಲಕೋಟ.11.ಜೂನ್.25:- ರಾಜ್ಯ ಸರ್ಕಾರ ಇನ್ಮುಂದೆ ಫೆಸಿಯಲ್ ಅಟೆಂಡೆನ್ಸ್ ಮಾಡೋಕೆ ನಿರ್ಧರಿಸಿದೆ. ಡಿಜಿಟಲ್ ಯುಗ ಆಗಿರುವ ಕಾರಣ ಸರ್ಕಾರಿ ಶಾಲೆಗಳ ಮಕ್ಕಳಿಗೂ…
ಬೆಂಗಳೂರು.11.ಜೂನ್.25:- ರಾಜ್ಯದ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಎನ್ ಪಿ ಎಸ್ ರದ್ದುಗೊಳಿಸಿ, ಓಪಿಎಸ್ ಜಾರಿ ಮಾಡುವುದಾಗಿದೆ. ರಾಜ್ಯ…
ಬಾಗಲಕೋಟ.11.ಜೂನ್.25:- ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ನಂತರ 16, 500 ಶಿಕ್ಷಕರ ನೇಮಕ ಮಾಡುತ್ತೇವೆ. ಮತ್ತು ಪ್ರತಿಒಂದು ಆದರ್ಶ ಶಾಲೆಗಳಲ್ಲಿ ಈ…
ಹೊಸ ದೆಹಲಿ.10.ಜೂನ್.25:- ವಿದ್ಯಾರ್ಥಿಗಳಿಗೆ ಸರ್ಕಾರದ ಪ್ರಧಾನಮಂತ್ರಿ ಯೋಜನೆಗಳು ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಆರ್ಥಿಕ ಸಹಾಯದಲ್ಲಿ ಸಮಗ್ರ ಬೆಂಬಲವನ್ನು ಒದಗಿಸಲು…
ಹಲಸೂರು.10.ಜೂನ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಾ.ಹುಲಸೂರನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಸಲುವಾಗಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಲಾಯಿತು.…