ಕರ್ನಾಟಕ ಪತ್ರಕರ್ತರ ಸಹಕಾರ ಸಂಘವು ತನ್ನ ಸದಸ್ಯ ಹಾಗೂ ಸಹಸದಸ್ಯರ ಮಕ್ಕಳಿಗೆ 2025ನೇ ಸಾಲಿನ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲು ಅರ್ಜಿಗಳನ್ನು ಆಹ್ವಾನಿಸಿದೆ.
ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರ ಮಕ್ಕಳನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪುರಸ್ಕಾರವನ್ನು ನೀಡಲಾಗುತ್ತಿದೆ.

ಪ್ರತಿಭಾ ಪುರಸ್ಕಾರವನ್ನು ಆಗಸ್ಟ್ 23 ರಂದು ಜರುಗುವ ಸರ್ವಸದಸ್ಯರ ಸಭೆಯಲ್ಲಿ ವಿತರಿಸಲಾಗುವುದು ಎಂದು ಸಂಘದ ಅಧ್ಯಕ್ಷ ರಮೇಶ್ ಪಾಳ್ಯ ಹಾಗೂ ಕಾರ್ಯದರ್ಶಿ (ಪ್ರಭಾರ) ಹೆಚ್.ಎಸ್. ಕೆಂಪರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಮಾನದಂಡಗಳು:
* ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು: ಶೇಕಡಾ 85ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು.
* ಪಿ.ಯು.ಸಿ. (ಎಲ್ಲ ವಿಭಾಗಗಳು) ವಿದ್ಯಾರ್ಥಿಗಳು: ಶೇಕಡಾ 80ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು.
* ಪದವಿ/ಸ್ನಾತಕೋತ್ತರ ಪದವಿ (ಎಲ್ಲಾ ರೀತಿಯ ಪದವಿ) ವಿದ್ಯಾರ್ಥಿಗಳು: ಶೇಕಡಾ 80ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ವಿದ್ಯಾರ್ಥಿಗಳು ತಮ್ಮ 2025ನೇ ಇಸವಿಯಲ್ಲಿ ನಡೆದ ಪರೀಕ್ಷೆಯ ಅಂಕಪಟ್ಟಿಯ ಜೆರಾಕ್ಸ್ ಪ್ರತಿ, ಇತ್ತೀಚಿನ ಭಾವಚಿತ್ರ ಹಾಗೂ ದೂರವಾಣಿ ಸಂಖ್ಯೆಯೊಂದಿಗೆ ಆಗಸ್ಟ್ 10 ರ ಒಳಗಾಗಿ ಸಂಘಕ್ಕೆ ವಿವರಗಳನ್ನು ಸಲ್ಲಿಸಬೇಕು.
ಪಠ್ಯೇತರ ಚಟುವಟಿಕೆಗಳಿಗೆ ವಿಶೇಷ ಮಾನ್ಯತೆ:
ಶೈಕ್ಷಣಿಕ ಸಾಧನೆಯ ಜೊತೆಗೆ, ಪಠ್ಯೇತರ ಚಟುವಟಿಕೆಗಳಲ್ಲಿ (ಉದಾಹರಣೆಗೆ: ಕ್ರೀಡೆ, ಕಲೆ, ಸಾಹಿತ್ಯ, ವಿಜ್ಞಾನ ಇತ್ಯಾದಿ) ಯಾವುದೇ ವಿಶೇಷ ಸಾಧನೆ ಮಾಡಿದ್ದಲ್ಲಿ, ಅದಕ್ಕೆ ಸಂಬಂಧಿಸಿದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇಂತಹ ಸಾಧನೆಗಳನ್ನು ಆಡಳಿತ ಮಂಡಳಿಯು ಪರಿಶೀಲಿಸಿ, ಆಯ್ಕೆಯಾದವರನ್ನು ಸಭೆಯಲ್ಲಿ ಅಭಿನಂದಿಸಲಿದೆ.