ಹೊಸ ದೆಹಲಿ.11.ಮಾರ್ಚ.25:- ಉನ್ನತ ಶಿಕ್ಷಣ ಇಲಾಖೆ. ಕರ್ಣಾಟಕ ರಾಜ್ಯದಲ್ಲಿ ರಾಜ್ಯದ ಪ್ರತಿಷ್ಠಿತ ವಿವಿಗಳಾದ ಮೈಸೂರು ವಿಶ್ವವಿದ್ಯಾಲಯ ಮತ್ತು ಧಾರವಾಡ ವಿಶ್ವವಿದ್ಯಾಲಯಗಳು ಹಣಕಾಸಿನ್ ಸಮಸ್ಯ / ಸಂಕಟ ಎದುರಿಸುತ್ತಿದ್ದು, ಕೇಂದ್ರ ಸರಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮನವಿ ಮಾಡಿದ್ದಾರೆ.
ಆದರೆ, ತೀವ್ರವಾಗಿ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿವೆ. ಇದರಿಂದಾಗಿ ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ವೇತನ ಪಾವತಿಸಲು ವಿವಿಗಳು ಹೆಣಗಾಡುತ್ತಿವೆ. ಉನ್ನತ ಶಿಕ್ಷಣಕ್ಕೆ ಬೆಂಬಲ ನೀಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಸಹಾಯಕ್ಕೆ ಬರಬೇಕು ಎಂದು ಕೋರಿದರು.
ಶಿಕ್ಷಣವು ಮಹತ್ವದ ವಿಷಯವಾಗಿದ್ದು, ಕೇಂದ್ರ ಮತ್ತು ರಾಜ್ಯಗಳೆರಡೂ ಶಿಕ್ಷಣ ಸಂಸ್ಥೆಗಳು ಆರ್ಥಿಕ ಕೊರತೆಯಿಂದ ಬಳಲದಂತೆ ನೋಡಿಕೊಳ್ಳಬೇಕು. 1916ರಲ್ಲಿ ಇಡೀ ಭಾರತದ ಆರನೇ ವಿವಿಯಾಗಿ ಸ್ಥಾಪನೆಯಾದ ಮೈಸೂರು ವಿವಿಯ ಐತಿಹಾಸಿಕ ಮಹತ್ವವನ್ನು ಹೇಳಿದ ದೇವೇಗೌಡ, ಉನ್ನತ ಶಿಕ್ಷಣವನ್ನು ನೀಡುವಲ್ಲಿ ವಿವಿಯು ನಿರ್ಣಾಯಕ ಪಾತ್ರ ವಹಿಸಿದೆ ಎಂದರು.
ಅಲ್ಲದೆ, ಭಾರತೀಯ ವಿಜ್ಞಾನ ಕಾಂಗ್ರೆಸ್ ನಂತಹ ಪ್ರಮುಖ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮೈಸೂರು ವಿವಿ ವಿವಿಧ ವಿಭಾಗಗಳಲ್ಲಿ ಸಂಶೋಧನೆ ಮತ್ತು ಬೋಧನೆಗೆ ಗಣನೀಯ ಕೊಡುಗೆ ನೀಡಿದೆ. ಆದಾಗ್ಯೂ, ಅದರ ಪ್ರತಿಷ್ಠಿತ ಸ್ಥಾನಮಾನದ ಹೊರತಾಗಿಯೂ, ವಿವಿ ಈಗ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ, ಅಧ್ಯಾಪಕರನ್ನು ಉಳಿಸಿಕೊಳ್ಳಲು ಮತ್ತು ಸಂಬಳವನ್ನು ಪಾವತಿಸಲು ಹೆಣಗಾಡುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಅದೇ ರೀತಿ, ಉತ್ತರ ಕರ್ನಾಟಕದ ಭಾಗದಲ್ಲಿ ಅಗಾಧ ಪ್ರಮಾಣದಲ್ಲಿ ಶೈಕ್ಷಣಿಕ ಸೇವೆ ಸಲ್ಲಿಸಿರುವ ಧಾರವಾಡ ವಿವಿಯೂ ಆರ್ಥಿಕ ಸಂಕಷ್ಟದಲ್ಲಿದೆ. ಮಂಜೂರಾಗಿರುವ ಬೋಧಕ ಹುದ್ದೆಗಳು ಖಾಲಿ ಉಳಿದಿವೆ ಮತ್ತು ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಬೋಧಕರಿಗೆ ಸಮಯಕ್ಕೆ ಸರಿಯಾಗಿ ಸಂಬಳ ಸಿಕ್ಕಿಲ್ಲ. ಈ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ರಾಜ್ಯ ಸರಕಾರಕ್ಕೆ ಸಂಪನ್ಮೂಲಗಳಿಲ್ಲ. ಈ ವಿಷಯದಲ್ಲಿ ಕೇಂದ್ರವು ಮಧ್ಯಪ್ರವೇಶಿಸಬೇಕೆಂದು ಅವರು ಒತ್ತಾಯಿಸಿದರು.
ಶಿಕ್ಷಕನಾಗಿ ನನ್ನ ಸ್ವಂತ ಅನುಭವದಿಂದ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣದ ಸ್ಥಿತಿಗತಿಗಳನ್ನು, ಶಿಕ್ಷಕರ ಸಮಸ್ಯೆಗಳನ್ನು ಅರಿತಿದ್ದೇನೆ. ಕರ್ನಾಟಕದ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ನಾನು ಸಿಎಂ ಆಗಿದ್ದಾಗ ಒಮ್ಮೆಲೇ 1.56 ಲಕ್ಷ ಮಹಿಳಾ ಶಿಕ್ಷಕರನ್ನು ನೇಮಿಸಿದೆ.
ಕರ್ನಾಟಕದಲ್ಲಿ ಉನ್ನತ ಶಿಕ್ಷಣದ ಭವ್ಯ ಭವಿಷ್ಯವು ಇಂತಹ ವಿವಿಗಳ ಮೇಲೆ ಅವಲಂಬಿತವಾಗಿದೆ. ಶಿಕ್ಷಕರಿಗೆ ವೇತನ ಸಿಗುವಂತೆ ಮತ್ತು ವಿವಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ತಕ್ಷಣದ ಆರ್ಥಿಕ ನೆರವು ನೀಡಲು ಮುಂದಾಗಬೇಕು ಎಂದು ಅವರು ಹೇಳಿದರು.
ಮಂಗಳವಾರ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ಮತ್ತು ಧಾರವಾಡ ವಿವಿ ಶಿಕ್ಷಣ ಕ್ಷೇತ್ರಕ್ಕೆ ಭಾರೀ ಕೊಡುಗೆ ನೀಡಿವೆ.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…