ಬೀದರ.10.ಫೆಬ್ರುವರಿ.25: -ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಫೆಬ್ರುವರಿ.11 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.
ಅವರು ಅಂದು ಬೆಳಿಗ್ಗೆ 10.30ಕ್ಕೆ ಬೀದರನ ಬಸವಗಿರಿ ಪಾಪನಾಶ ಹಿಂಭಾಗ, ಬಸವ ಸೇವಾ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡಿರುವ ವಚನ ವಿಜಯೋತ್ಸವ ಕಾರ್ಯಕ್ರಮದಲ್ಲಿ ಸ್ತ್ರೀ ಶಕ್ತಿ ಸಮಾವೇಶ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ
ಮಧ್ಯಾಹ್ನ 1.30ಕ್ಕೆ ಬೀದರ ಜಿಲ್ಲಾಸ್ಪತ್ರೆಗೆ ಭೇ ಟಿ ನೀಡಲಿದ್ದಾರೆ.
ನಂತರ ಮಧ್ಯಾಹ್ನ 2.30 ಗಂಟೆಗೆ ಬೀದರನ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಲಿದ್ದಾರೆ. ಸಂಜೆ 3.30 ಗಂಟೆಗೆ ಬೀದರನಿಂದ ನಿರ್ಗಮಿಸಲಿದ್ದಾರೆ ಎಂದು ಅಧ್ಯಕ್ಷರ ಅಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.