09/06/2025 1:05 AM

Translate Language

Home » ಜೀಲ್ಲೆ » ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಜಿಲ್ಲಾ ಪ್ರವಾಸ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಜಿಲ್ಲಾ ಪ್ರವಾಸ

Facebook
X
WhatsApp
Telegram

ಬೀದರ.28.ಫೆಬ್ರುವರಿ.25:-ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಮಾರ್ಚ.5 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.

ಮಾರ್ಚ.5 ರಂದು ಬೆಳಿಗ್ಗೆ 10.30 ಗಂಟೆಗೆ ಬೀದರ ಜಿಲ್ಲೆಯ ಔರಾದ್‍ನ ಅಲೆಮಾರಿ ಕಾಲೋನಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಔರಾದ್‍ನ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡುವರು, ಮಧ್ಯಾಹ್ನ 2 ಗಂಟೆಗೆ ಔರಾದ್‍ನ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡುವರು ಹಾಗೂ ಸಂಜೆ 4 ಗಂಟೆಗೆ ಔರಾದ್‍ನ ಮಹಿಳಾ ಹಾಸ್ಟೆಲ್‍ಗೆ ಭೇಟಿ ನೀಡಿ ನಂತರ ಬೀದರಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.


ಮಾರ್ಚ.6 ರಂದು ಬೆಳಿಗ್ಗೆ 9 ಗಂಟೆಗೆ ಬೀದರ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಹಾಗೂ ಬೆಳಿಗ್ಗೆ 11 ಗಂಟೆಗೆ ಬೀದರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ (ಎಸ್.ಎಚ್.ಡಬ್ಲ್ಯೂ. ಜಿಲ್ಲೆಯಲ್ಲಿ ಜಾರಿಯಾದ ಬಗ್ಗೆ ಹಾಗೂ ಪ್ರಕರಣಗಳು ದಾಖಲಾದ ಬಗ್ಗೆ, ಅಂಕಿ ಅಂಶಗಳೊಂದಿಗೆ ಚರ್ಚೆ, ಸರ್ಕಾರಿ, ಖಾಸಗಿ, ಸಂಸ್ಥೆಗಳಲ್ಲಿ ಸ್ಥಳೀಯ ಹಾಗೂ ಆಂತರಿಕ ದೂರು ಸಮಿತಿ ಬಗ್ಗೆ ಪರಿಶೀಲನೆ, ಮಹಿಳಾ ದೌರ್ಜನ್ಯ ಪ್ರಕರಣಗಳ ಬಗ್ಗೆ ಚರ್ಚೆ, ಮಹಿಳಾ ರಿಸರ್ವೇಶನ್, ಕಾಲೇಜು ವಿದ್ಯಾರ್ಥಿನಿಯರು ಮತ್ತು ಮಹಿಳೆಯರ ಸುರಕ್ಷತೆಯ ಬಗ್ಗೆ ಜಿಲ್ಲಾಡಳಿತ ತೆಗೆದುಕೊಂಡ ಕ್ರಮದ ಬಗ್ಗ ಚರ್ಚೆ) ಮಹಿಳಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 2 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!