ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಮಸೂದೆ-2025 ಮಂಡನೆಗೆ ಸಿದ್ದವಾಗಿದ್ದ.

ಬೆಂಗಳೂರು.22.ಫೆ.25:- ಕರ್ನಾಟಕ ರಾಜ್ಯ ಸರ್ಕಾರಕ್ಕೆ ವಿಶ್ವವಿದ್ಯಾಲಯಗಳ ಪೂರ್ಣ ಅಧಿಕಾರ  ನೀಡುವಂತಹ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಮಸೂದೆ-2025 ಮಂಡನೆಗೆ ಸಿದ್ದವಾಗಿದ್ದು, ಈ ಸಲದ ಬಜೆಟ್ ಅಧಿವೇಶನದಲ್ಲೇ  ಮಂಡನೆಯಾಗುವ ಸಾಧ್ಯತೆ ಇದೆ.

ಈ ಮಸೂದೆ ಮಂಡನೆಯಾಗಿ ಅಂಗೀಕಾರವಾದರೆ, ಆ ನಂತರದಲ್ಲಿ ರಾಜ್ಯಪಾಲರ ಪಾತ್ರ ವಿಶ್ವ ವಿದ್ಯಾಲಯಗಳ ಘಟಿಕೋತ್ಸವಕ್ಕೆ ಮಾತ್ರ ಸೀಮಿತವಾಗುವ ಸಾಧ್ಯತೆ ಇದೆ.

ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ-2000 ದ ಪ್ರಕಾರ, ಕರ್ನಾಟಕ ಸರ್ಕಾರವೇ ಕುಲಪತಿ ನೇಮಕಾತಿಗೆ ಮೂವರು ಸದಸ್ಯರನ್ನು ಒಳಗೊಂಡ ಶೋಧನಾ ಸಮಿತಿಯನ್ನು ರಚಿಸುತ್ತಿತ್ತು. ಸಮಿತಿಯ ಸದಸ್ಯರ ಪೈಕಿ ಒಬ್ಬರನ್ನು ಶಿಫಾರಸು ಮಾಡುವ ಅಧಿಕಾರ ರಾಜ್ಯಪಾಲರದ್ದಾಗಿತ್ತು.

ರಾಜ್ಯಪಾಲರು ವಿಶ್ವವಿದ್ಯಾಲಯಗಳ ಕುಲಾಧಿಪತಿಗಳೂ ಆಗಿರುವ ಕಾರಣ ಅವರಿಗೆ ಈ ಅಧಿಕಾರ ನೀಡಲಾಗಿತ್ತು. ಆಯಾ ವಿಶ್ವವಿದ್ಯಾಲಯದ ಸಿಂಡಿಕೇಟ್, ವಿಶ್ವ ವಿದ್ಯಾಲಯ ಅನುದಾನ ಆಯೋಗ ಹಾಗೂ  ರಾಜ್ಯಪಾಲರು ತಲಾ ಒಬ್ಬರನ್ನು ನೇಮಕ ಮಾಡುವ ಅಧಿಕಾರ ಹೊಂದಿದ್ದಾರೆ.

ಕರ್ನಾಟಕ ಸರ್ಕಾರ ನಾಮ ನಿರ್ದೇಶನ ಮಾಡುವ ಸದಸ್ಯ ಈ ಸಮಿತಿಯ ಮುಖ್ಯಸ್ಥರಾಗಿತ್ತಾರೆ. ಆದರೆ ಈಗ, ಪರಿಷ್ಕೃತ ಕರಡು ಮಸೂದೆಯಲ್ಲಿ ಶೋಧನಾ ಸಮಿತಿಗೆ ಸದಸ್ಯರನ್ನು ನೇಮಕ ಮಾಡುವ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಲಾಗಿದೆ ಎಂದು ಕರಡು ಮಸೂದೆ ಗಮನಿಸಿದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಶ್ವವಿದ್ಯಾಲಯ  ಕುಲಪತಿ ನೇಮಕಾತಿ ಪ್ರಕ್ರಿಯೆಯಲ್ಲಿ ಕುಲಪತಿ ಶೋಧನಾ ಸಮಿತಿಗೆ ವಿವಿ ಮಾಜಿ ಕುಲಪತಿ ಶ್ರೇಣಿಗಿಂತ ಕಡಿಮೆ ಇಲ್ಲದ, ಉನ್ನತ ಶಿಕ್ಷಣ ಕ್ಷೇತ್ರದ ಅನುಭವಿಗಳನ್ನು, ಸಂಸತ್ತಿನ ಮೂಲಕ ಸ್ಥಾಪಿಸಲಾದ ರಾಷ್ಟ್ರೀಯ ಸಂಸ್ಥೆ ಅಥವಾ ಸಂಸ್ಥೆಯ ಮುಖ್ಯಸ್ಥರನ್ನೇ ಸದಸ್ಯರನ್ನಾಗಿ ನೇಮಕ ಮಾಡುವುದು ಅಗತ್ಯ. ಈ ಶೋಧನಾ ಸಮಿತಿ ಅಂತಿಮಗೊಳಿಸಿದ ಮೂವರು ಅರ್ಹರ ಪಟ್ಟಿಯನ್ನು ಸರ್ಕಾರಕ್ಕೆ ಸಮಿತಿ ಸಲ್ಲಿಸುತ್ತದೆ. ಸರ್ಕಾರವು ಅದನ್ನು ರಾಜ್ಯಪಾಲರಿಗೆ ಕಳುಹಿಸುತ್ತದೆ.

ರಾಜ್ಯಪಾಲರು ಸರ್ಕಾರದ ಮುಖ್ಯಸ್ಥರ ಜತೆಗೆ ಚರ್ಚಿಸಿ ಒಬ್ಬರನ್ನು ಕುಲಪತಿಯನ್ನಾಗಿ ನೇಮಕ ಮಾಡುತ್ತಾರೆ.ಆದರೆ ಈಗ ಪರಿಷ್ಕೃತ ಕರಡು ಮಸೂದೆಯಲ್ಲಿ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸಲಾಗಿದೆ. ಸಮಿತಿ ಸಲ್ಲಿಸಿದ ಮೂವರ ಪೈಕಿ ಒಬ್ಬರನ್ನು ಸರ್ಕಾರದ ಮುಖ್ಯಸ್ಥರೇ ನೇರವಾಗಿ ಆಯ್ಕೆ ಮಾಡುವ ಅಧಿಕಾರ ಹೊಂದುತ್ತಾರೆ.

ಸದ್ಯದ ನೇಮಕ ಪ್ರಕ್ರಿಯೆ ಪ್ರಕಾರ, ಶೋಧನಾ ಸಮಿತಿ ಮೂವರು ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಈ ಪ್ರಕ್ರಿಯೆ ಶುರುವಾದ ಮೂರು ತಿಂಗಳ ಒಳಗೆ ಸರ್ಕಾರಕ್ಕೆ ಸಲ್ಲಿಸಬೇಕು. ಮೂವರ ಪೈಕಿ ಹೆಚ್ಚು ಅರ್ಹತೆ ಇರುವಂತವರನ್ನು ಗುರುತಿಸುತ್ತದೆ.

ರಾಜ್ಯಪಾಲರು ಈ ವಿಚಾರ ಸಮಾಲೋಚಿಸುವಾಗ ಸರ್ಕಾರ ಅರ್ಹತೆ ಇರುವಂಥವರನ್ನು ನೇಮಕ ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡುತ್ತದೆ. ಈಗ ಪರಿಷ್ಕೃತ ಕರಡು ಮಸೂದೆ ಪ್ರಕಾರ, ಶೋಧನಾ ಸಮಿತಿ ಶಿಫಾರಸು ಮಾಡಿದ ಪಟ್ಟಿಯಲ್ಲಿರುವ ಮೂವರು ಅಭ್ಯರ್ಥಿಗಳು ಅರ್ಹರಲ್ಲ ಎಂದು ಸರ್ಕಾರಕ್ಕೆ ಅನಿಸಿದರೆ, ಸರ್ಕಾರ ಆ ಪಟ್ಟಿಯನ್ನು ತಿರಸ್ಕರಿಸಬಹುದು. ಹೊಸದಾಗಿ ನೇಮಕ ಪ್ರಕ್ರಿಯೆ ಶುರುಮಾಡಲು ಸೂಚಿಸಬಹುದು.

ಇದಲ್ಲದೆ, ವಿಶೇಷ ಉದ್ದೇಶಗಳಿಗಾಗಿ ಸ್ಥಾಪಿಸಿದ ವಿಶ್ವವಿದ್ಯಾಲಯಗಳಿಗೆ ಅದೇ ವಿಷಯಗಳಲ್ಲಿ ಪರಿಣತಿ ಇರುವ, ಆ ವಿಭಾಗಗಳಲ್ಲಿ ಕೆಲಸ ಮಾಡಿದ ಬೋಧಕ ಸಿಬ್ಬಂದಿಯನ್ನೇ ಕುಲಪತಿಗಳಾಗಿ ನೇಮಕ ಮಾಡಬೇಕು ಎನ್ನುವ ನಿಯಮಗಳನ್ನು ಮಸೂದೆ ಒಳಗೊಂಡಿದೆ.

ಇದು ಜಾರಿಯಾದರೆ, ವಿಜಯಪುರದ ಅಕ್ಕಮಹಾದೇವಿ, ಬೆಂಗಳೂರಿನ ಕ್ಲಸ್ಟರ್‌ ವಿಶ್ವವಿದ್ಯಾಲಯಗಳಿಗೆ ಮಹಿಳೆಯರು, ಕರ್ನಾಟಕ ಜಾನಪದ ವಿಶ್ವವಿದ್ಯಾಲಯ, ಕನ್ನಡ ವಿಶ್ವವಿದ್ಯಾಲಯ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾನಿಲಯ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಗಳಿಗೆ ಅದೇ ವಿಷಯದಲ್ಲಿ ಸಾಕಷ್ಟು ಅನುಭವ ಇರುವ, ಅರ್ಹ ಅಧ್ಯಾಪಕರ ಆಯ್ಕೆ ಕಡ್ಡಾಯವಾಗಲಿದೆ.

ಕರ್ನಾಟಕ ರಾಜ್ಯ ಸರ್ಕಾರ ವಿಶ್ವವಿದ್ಯಾಲಯ ಧನಸಹಾಯ ಆಯೋಗ ಮಸೂದೆ 2025

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

7 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

7 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

7 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

7 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

8 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

10 hours ago