ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನೂತನ ನಿರ್ದೇಶಕರಾಗಿ ಡಾ. ಶ್ರೀಮಂತ ಸಪಾಟೆ ನೇಮಕ; ಹರ್ಷ

====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================

ಬೀದರ.06.ಮಾರ್ಚ.25:- ಕರ್ನಾಟಕ ಸರ್ಕಾರಿ ನೌಕರರ ಸಂಘ, ಬೀದರ ಜಿಲ್ಲಾ ಘಟಕದ ನಿರ್ದೇಶಕರನ್ನಾಗಿ ಡಾ. ಶ್ರೀಮಂತ ಸಪಾಟೆ ಹೆಡಗಾಪುರ ರವರನ್ನು ನೇಮಕ ಮಾಡಲಾಗಿದೆ ಎಂದು ಬೀದರ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನೇಮಕಾತಿ ಆದೇಶ ಪತ್ರ ನೀಡುವ ಸಂದರ್ಭದಲ್ಲಿ ಸಂಘದ ಜಿಲ್ಲಾ ಗೌರವಾಧ್ಯಕ್ಷ ಸೂರ್ಯಕಾಂತ ಬಿರಾದಾರ, ಕಾರ್ಯಾಧ್ಯಕ್ಷ ಶಿವರಾಜ ಕಪಲಾಪುರ, ಹಿರಿಯ ಉಪಾಧ್ಯಕ್ಷ ಗೌತಮ, ರಾಜ್ಯ ಪರಿಷತ್ ಸದಸ್ಯರಾದ ರಾಜಕುಮಾರ ಮಾಳಗೆ, ಕೋಶಾಧ್ಯಕ್ಷ ದೇವಪ್ಪ, ಉಪಸ್ಥಿತರಿದ್ದು, ಸಪಾಟೆರವರಿಗೆ ಸ್ವಾಗತಿಸಿದರು.


ತಕ್ಷಣವೇ ನಿರ್ದೇಶಕರ ಹುದ್ದೆ ಸ್ವೀಕರಿಸಿ ಸಂಘದ ಕಾರ್ಯ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಂಘದ ಹಿತ ಕಾಪಾಡಲು ಸಂಘಟನೆಗಾಗಿ ಮತ್ತು ಸಂಘದ ಸದಸ್ಯರ ಒಳತಿಗಾಗಿ ಶ್ರಮಿಸಬೇಕೆಂದು ಬಿರಾದಾರ ಅವರು ನಿರ್ದೇಶನ ನೀಡಿದ್ದಾರೆ.


ಡಾ. ಶ್ರೀಮಂತ ಸಪಾಟೆ ಅವರು ಅಧ್ಯಕ್ಷ ಬಿರಾದಾರ ಅವರ ಮತ್ತು ರಾಜಶೇಖರ ಬಿರಾದಾರ ಅವರ ಕಟ್ಟಾ ಬೆಂಬಲಿಗರಾಗಿದ್ದು, ನೌಕರರ ಬಗ್ಗೆ ತುಂಬ ಕಾಳಜಿಯುಳ್ಳ ವ್ಯಕ್ತಿಯುಳ್ಳ ವ್ಯಕ್ತಿಯಾಗಿದ್ದಾರೆ. ಅವರು ಬೀದರಿನ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ನಿಲಯ ಪಾಲಕರಾಗಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಈ ವಸತಿ ಶಾಲೆಯ ಮಕ್ಕಳಿಗೆ ವಿಶೇಷ ವಿಜ್ಞಾನದ ಕುರಿತು ಆಸಕ್ತಿ ಮೂಡಿಸಿ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟದ ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ಶಾಲೆಯ ಮಕ್ಕಳ ತಂಡಕ್ಕೆ ಎರಡು ಲಕ್ಷ ನಗದು ಬಹುಮಾನ ಸಹ ಲಭಿಸಿರುತ್ತದೆ. ಹೀಗೆ ತಮ್ಮ ವೃತ್ತಿಯೊಂದಿಗೆ ಮಕ್ಕಳಿಗೆ ವಿಶೇಷ ಜ್ಞಾನಾರ್ಜನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಅವರ ನೇಮಕಕ್ಕೆ ಪ್ರಭುರಾವ ಕಂಬಳಿವಾಲೆ ಕನ್ನಡ ಸೇವಾ ಪ್ರತಿಷ್ಠಾನದ ಅಧ್ಯಕ್ಷ ನಾಗಶೆಟ್ಟಿ ಧರಮಪುರ, ಪ್ರಧಾನ ಕಾರ್ಯದರ್ಶಿ ಡಾ. ರಘುಶಂಖ ಭಾತಂಬ್ರಾ, ಜನಪ್ರಿಯ ಪ್ರಕಾಶನದ ನಾಗಶೆಟ್ಟಿ ಪಾಟೀಲ ನಾಗಶೆಟ್ಟಿ ಪಾಟೀಲ ಗಾದಗಿ, ಎಂ. ಪಿ. ಮುದಾಳೆ, ಸುನೀಲ ಭಾವಕಟ್ಟಿ, ವಿಜಯಕುಮಾರ ಸೊನಾರೆ ಸೇರಿದಂತೆ ಮತ್ತಿತರರು ಹರ್ಷ ವ್ಯಕ್ತಪಡಿಸಿದ್ದಾರೆ.

Source: ಪ್ರಜಾ ಪ್ರಭಾತ ಸುದ್ಧಿ

====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

4 hours ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

12 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

12 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

12 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

12 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

13 hours ago