ಕರ್ನಾಟಕ ಹಾಜರಾತಿ ನಿರ್ವಹಣ ವ್ಯವಸ್ಥೆ  ವಿನೂತನ ತಂತ್ರಾಂಶವನ್ನು ಮೊಬೈಲ್ ಆಧಾರಿತ ಅಪ್ಲಿಕೇಶನ್.!

ಬೆಂಗಳೂರು.16.ಜುಲೈ.25:- ರಾಜ್ಯಾದ್ಯಂತ ಸರ್ಕಾರಿ ಶಾಲಾ ಮಕ್ಕಳಿಗೆ ಕೃತಕ ಬುದ್ಧಿಮತ್ತೆ ಆಧಾರಿತ ಆನ್ಲೈನ್ ಹಾಜರಾತಿಗೆ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಶಾಲಾ ಶಿಕ್ಷಣ ಇಲಾಖೆ ಸಿಬ್ಬಂದಿಗೂ ಆನ್ಲೈನ್ ಹಾಜರಾತಿಗೆ ಆದೇಶ ಹೊರಡಿಸಿದೆ. ಈ ಸಂಬಂಧ ಕೂಡಲೇ ಆಧಾರ್ ಸಂಖ್ಯೆ ಅಪ್ಡೇಟ್ ಮಾಡಬೇಕು, ಇಲ್ಲವಾದಲ್ಲಿ ಮುಂದಿನ ತಿಂಗಳ ವೇತನ ಪಾವತಿ ಮಾಡುವುದಿಲ್ಲ ಎಂಬ ಎಚ್ಚರಿಕೆ ನೀಡಿದೆ.

ಕರ್ನಾಟಕ ಸರ್ಕಾರದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಹಾಜರಾತಿ ನಿರ್ವಹಣೆ ವ್ಯವಸ್ಥೆಯಲ್ಲಿ ಅನುಸರಿಸುತ್ತಿರುವ ರಿಜಿಸ್ಟರ್ ಆಧಾರಿತ ದಾಖಲಾತಿ ಮತ್ತು ಹಸ್ತಚಾಲಿತ ಸಹಿಗಳನ್ನೊಳಗೊಂಡ ಹಾಜರಾತಿಯನ್ನು ಸೆರೆಹಿಡಿಯುವ ಸಾಂಪ್ರದಾಯಿಕ ವಿಧಾನಗಳ ದೃಢಿಕರಣದ ಕುರಿತು ಸವಾಲುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕರ್ನಾಟಕ ಹಾಜರಾತಿ ನಿರ್ವಹಣ ವ್ಯವಸ್ಥೆ ಎಂಬ ವಿನೂತನ ತಂತ್ರಾಂಶವನ್ನು (ಮೊಬೈಲ್ ಆಧಾರಿತ ಅಪ್ಲಿಕೇಶನ್ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಇ-ಆಡಳಿತ) ಇಲಾಖೆಯ ಇ-ಆಡಳಿತ ಕೇಂದ್ರವು ಅಭಿವೃದ್ಧಿಪಡಿಸಿರುತ್ತಾರೆ ಹಾಗೂ ಸದರಿ ತಂತ್ರಾಂಶವು ಕೃತಕ ಬುದ್ಧಿಮತ್ತೆ (Artificial Intelligence) ಆಧಾರಿತ face recognistion ಮತ್ತು geographical information system (GIS) ಆಧಾರಿತ ಆಧುನಿಕ ತಂತ್ರಜ್ಞಾನಗಳೊಂದಿಗೆ ಸರಳೀಕರಿಸಲಾಗಿರುತ್ತದೆ.

ಆಡಳಿತ ಕೇಂದ್ರವು ಅಭಿವೃದ್ಧಿಪಡಿಸಿರುವ ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ (KAMS) ಅನ್ನು ವಿಸ್ತರಿಸಲು ನೌಕರರ ಆಧಾರ್ ಮಾಹಿತಿಗಳನ್ನು ಅಳವಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ಎಲ್ಲಾ ಡಿಡಿಓಗಳಿಗೆ ತಮ್ಮ ನೌಕರರ ಆಧಾರ್ ಮಾಹಿತಿಗಳು ಸೀಡ್ ಆಗಿರುವುದನ್ನು ಪರಿಶೀಲಿಸಿಕೊಳ್ಳಲು ដ ( SERVICE REGISTER-→ EMP AADHAR UPDATED AND NOT UPDATED DETAILS) ಈ SCREENನಲ್ಲಿ ಎಲ್ಲಾ ನೌಕರರ ಮಾಹಿತಿಗಳನ್ನು ಪರಿಶೀಲಿಸಿಕೊಳ್ಳಬೇಕು. ನೌಕರರ SERVICE REGISTER –→ FAMILY DEPENDENT ENTRY FORM KASS ಈ OPTIONನಲ್ಲಿ ನೌಕರರ ಆಧಾರ್ ನಂಬರ್ಗಳನ್ನು ಕಡ್ಡಾಯವಾಗಿ ನಮೂದಿಸಬೇಕು.

ಆಧಾರ್ ನಂಬರ್ ನಮೂದಿಸದ ಅಧಿಕಾರಿ/ನೌಕರರ ಮುಂದಿನ ತಿಂಗಳ ವೇತನ ಜನರೇಟ್ ಆಗುವುದಿಲ್ಲ, ಎಲ್ಲಾ ಡಿಡಿಓಗಳು ಈ ಬಗ್ಗೆ ತುರ್ತಾಗಿ ಕ್ರಮವಹಿಸಿ ತಮ್ಮ ಕಛೇರಿಯ ಎಲ್ಲಾ ಅಧಿಕಾರಿ/ನೌಕರರ ಆಧಾರ್ ಮಾಹಿತಿಗಳನ್ನು ಕಡ್ಡಾಯವಾಗಿ ತಮ್ಮ ಲಾಗಿನ್ ಗಳಲ್ಲಿಯೇ ನಮೂದಿಸಿಕೊಳ್ಳಲು ತಿಳಿಸಿದೆ.

WhatsApp Group Link

https://chat.whatsapp.com/HqjmC1n4Cu1HtOmXec7ccF

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

9 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

9 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

9 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

10 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

10 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

10 hours ago